Andolana originals

ಕೊಡಗಿನಲ್ಲಿ ತಲೆ ಎತ್ತುತ್ತಿರುವ ಅಕ್ರಮ ವಿಲ್ಲಾಗಳು: ಆರೋಪ

ಕಾಂಗೀರ ಬೋಪಣ್ಣ

ಸೂಕ್ತ ತನಿಖೆಗೆ ಪರಿಸರವಾದಿಗಳ ಒತ್ತಾಯ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ವಿರಾಜಪೇಟೆ: ಅಚ್ಚ ಹಸಿರಿನ ಸುಂದರ ಪರಿಸರ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಅರಣ್ಯವನ್ನು ನಾಶ ಮಾಡಿ ಎಗ್ಗಿಲ್ಲದೆ ರೆಸಾರ್ಟ್, ವಿಲ್ಲಾಗಳ ನಿರ್ಮಾಣ ಮಾಡಲಾಗುತ್ತಿದ್ದು, ಕೊಡಗು-ಕೇರಳ ಗಡಿಭಾಗದಲ್ಲಿ ನಿಯಮ ಉಲ್ಲಂಸಿ ಸುಮಾರು ೩೦ ಎಕರೆ ಪ್ರದೇಶದಲ್ಲಿ ವಿಲ್ಲಾ ನಿರ್ಮಿಸುತ್ತಿರುವ ಆರೋಪ ಕೇಳಿ ಬಂದಿದೆ.

ವಿರಾಜಪೇಟೆಯ-ಕೇರಳ ಗಡಿಭಾಗದ ಬಾಳುಗೋಡು ವ್ಯಾಪ್ತಿಯಲ್ಲಿ ನಿಯಮ ಬಾಹಿರ ರೆಸಾರ್ಟ್, ಹೋಟೆಲ್, ಬಾರಿ ವಿಲ್ಲಾಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡಲಾಗುತ್ತಿದೆ. ಬ್ರಹ್ಮಗಿರಿ ವನ್ಯಜೀವಿ ವಲಯ ಅರಣ್ಯ ಬಫರ್ ಜೋನ್ ಆಗಿದ್ದರೂ ನಿಯಮಗಳನ್ನು ಗಾಳಿಗೆ ತೂರಿ ಇಂತಹ ಕಾಮಗಾರಿ ನಡೆಸಲಾಗುತ್ತಿರುವ ಬಗ್ಗೆ ಪರಿಸರವಾದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ಅಕ್ರಮ ಕಟ್ಟಡಗಳಿಂದ ಪರಿಸರ ಹಾಗೂ ವನ್ಯಜೀವಿಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸಂಸ್ಥೆಯೊಂದು ಇದೀಗ ಸುಮಾರು ೩೦ ಎಕರೆ ಪ್ರದೇಶದಲ್ಲಿ ಮೈಸೂರು ಮುಡಾದ ಅನುಮತಿ ಇದೆ ಎಂದು ಹೇಳಿಕೊಂಡು ಬೃಹತ್ ವಿಲ್ಲಾಗಳನ್ನು ನಿರ್ಮಿಸಲು ನಿವೇಶನ ಸಿದ್ಧ ಮಾಡಿಕೊಳ್ಳುತ್ತಿದೆ. ಇದೇ ರೀತಿ ನಿಯಮ ಬಾಹಿರ ಅಕ್ರಮ ಕಟ್ಟಡ ನಿರ್ಮಾಣಗಳು ಮುಂದುವರಿದರೆ ಕೊಡಗಿನ ಜಲ ಮೂಲ, ಪರಿಸರಕ್ಕೆ ಭಾರೀ ಧಕ್ಕೆಯಾಗಲಿದೆ. ಮುಂದೆ ಕಾವೇರಿಯ ಒಡಲು ಬರಿದಾಗಿ ಮೈಸೂರು, ಮಂಡ್ಯ ಭಾಗದ ಜನರಿಗೆ ನೀರು ಅಲಭ್ಯವಾಗಲಿದೆ ಎಂದು ಕೊಡಗು ವನ್ಯಜೀವಿಗಳ ಸಂಘದ ಅಧ್ಯಕ್ಷ ಕರ್ನಲ್ ಮುತ್ತಣ್ಣ ಹೇಳಿದ್ದಾರೆ.

ನಿಯಮಬಾಹಿರ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಕೆಲ ಅಧಿಕಾರಿಗಳು ಕೂಡ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ಜನ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

” ನಾವು ಕೇರಳದಲ್ಲಿ ಒಂದು ಸ್ಥಳ ಖರೀದಿ ಮಾಡುವುದಾಗಲಿ, ಅಂಗಡಿ ತೆರೆಯುವುದಾಗಲಿ ಸಾಧ್ಯವಾಗುವುದಿಲ್ಲ. ಆದರೆ ಅಲ್ಲಿನವರು ಇಲ್ಲಿ ಬಂದು ಕಾಫಿ ತೋಟ, ಗದ್ದೆಗಳನ್ನು ಖರೀದಿಸಿ, ನಿಯಮ ಬಾಹಿರವಾಗಿ ಬೃಹತ್ ವಿಲ್ಲಾಗಳನ್ನು ನಿರ್ಮಿಸಿ, ಪರಿಸರ ನಾಶ ಮಾಡುತ್ತಿದ್ದಾರೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು.”

-ಪದ್ಮಿನಿ ಶೇಖರ್, ಪರಿಸರವಾದಿ

” ಕೆಲ ಅಧಿಕಾರಿಗಳು ಪರಿಸರ ನಾಶಕ್ಕೆ ಮೂಲ ಕಾರಣಕರ್ತರಾಗಿದ್ದಾರೆ. ಈ ಬಗ್ಗೆ ಆಗತ್ಯ ತನಿಖೆ ನಡೆಸಿದರೆ ಈ ಅಕ್ರಮಗಳ ಮೂಲ ಹೊರ ಬರುತ್ತದೆ. ನಾಂಗಾಲದಲ್ಲಿ ಈ ರೀತಿ ಬೆಟ್ಟವನ್ನು ಅಗೆದು ವಿಲ್ಲಾಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇತ್ತ ಬಾಳುಗೋಡುವಿನಲ್ಲಿ ೩೦ ಎಕರೆ ಕಾಫಿ ತೋಟ, ಗದ್ದೆಯ ಜಾಗದಲ್ಲಿ ಬೃಹತ್ ವಿಲ್ಲಾ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇಂತಹ ಪ್ರಕೃತಿ ವಿರೋಧಿ, ನಿಯಮ ಬಾಹಿರ ಕೆಲಸಗಳ ವಿರುದ್ಧ ಪರಿಸರ, ನೆಲ, ಜಲ ಉಳಿಸಲು ಉಗ್ರ ಹೋರಾಟ ಅನಿವಾರ್ಯ”

-ರಘು ಮಾಚಯ್ಯ, ಕಾರ್ಯದರ್ಶಿ, ಕಾವೇರಿ ಸೇನೆ

” ತಮ್ಮ ಗ್ರಾಮದ ಅಳಿವು ಉಳಿವಿನ ಜೊತೆಗೆ ಬ್ರಹ್ಮಗಿರಿ ವನ್ಯಜೀವಿ ಅರಣ್ಯದ ಉಳಿವಿನ ಪ್ರಶ್ನೆ ಎದುರಾಗಿದೆ. ಇಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಿದೆ. ತನಿಖೆ ನಡೆಸಿ ನಿಯಮ ಉಲ್ಲಂಘನೆಯಾಗಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.”

-ಪುಚ್ಚಿಮಂಡ ಮಾಚಯ್ಯ, ಸ್ಥಳೀಯರು

” ನಿಯಮಬಾಹಿರವಾಗಿ ವನ್ಯಜೀವಿ ಅರಣ್ಯದ ಸಮೀಪವೇ ಬೃಹತ್ ವಿಲ್ಲಾ ನಿರ್ಮಾಣ ಕೆಲಸ ನಡೆಯುತ್ತಿದೆ. ಇಂತಹ ಕಾಮಗಾರಿಗಳಿಂದ ಪರಿಸರದ ಮೇಲೆ ನೇರ ಪರಿಣಾಮ ಬೀರಲಿದೆ. ಜಿಲ್ಲಾಧಿಕಾರಿಗಳು, ಕ್ಷೇತ್ರದ ಶಾಸಕರು, ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಎಲ್ಲರನ್ನೂ ಸಂಘಟಿಸಿ ಉಗ್ರ ಹೋರಾಟ ನಡೆಸಲಾಗುವುದು.”

– ಕರ್ನಲ್ ಮುತ್ತಣ್ಣ, ಅಧ್ಯಕ್ಷ,ಕೊಡಗು ವನ್ಯ ಜೀವಿಗಳ ಸಂಘ

 

 

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

59 mins ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

1 hour ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

1 hour ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

1 hour ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

1 hour ago