ಕಾಂಗೀರ ಬೋಪಣ್ಣ
ಸೂಕ್ತ ತನಿಖೆಗೆ ಪರಿಸರವಾದಿಗಳ ಒತ್ತಾಯ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ
ವಿರಾಜಪೇಟೆ: ಅಚ್ಚ ಹಸಿರಿನ ಸುಂದರ ಪರಿಸರ ಹೊಂದಿರುವ ಕೊಡಗು ಜಿಲ್ಲೆಯಲ್ಲಿ ಅರಣ್ಯವನ್ನು ನಾಶ ಮಾಡಿ ಎಗ್ಗಿಲ್ಲದೆ ರೆಸಾರ್ಟ್, ವಿಲ್ಲಾಗಳ ನಿರ್ಮಾಣ ಮಾಡಲಾಗುತ್ತಿದ್ದು, ಕೊಡಗು-ಕೇರಳ ಗಡಿಭಾಗದಲ್ಲಿ ನಿಯಮ ಉಲ್ಲಂಸಿ ಸುಮಾರು ೩೦ ಎಕರೆ ಪ್ರದೇಶದಲ್ಲಿ ವಿಲ್ಲಾ ನಿರ್ಮಿಸುತ್ತಿರುವ ಆರೋಪ ಕೇಳಿ ಬಂದಿದೆ.
ವಿರಾಜಪೇಟೆಯ-ಕೇರಳ ಗಡಿಭಾಗದ ಬಾಳುಗೋಡು ವ್ಯಾಪ್ತಿಯಲ್ಲಿ ನಿಯಮ ಬಾಹಿರ ರೆಸಾರ್ಟ್, ಹೋಟೆಲ್, ಬಾರಿ ವಿಲ್ಲಾಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡಲಾಗುತ್ತಿದೆ. ಬ್ರಹ್ಮಗಿರಿ ವನ್ಯಜೀವಿ ವಲಯ ಅರಣ್ಯ ಬಫರ್ ಜೋನ್ ಆಗಿದ್ದರೂ ನಿಯಮಗಳನ್ನು ಗಾಳಿಗೆ ತೂರಿ ಇಂತಹ ಕಾಮಗಾರಿ ನಡೆಸಲಾಗುತ್ತಿರುವ ಬಗ್ಗೆ ಪರಿಸರವಾದಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಕ್ರಮ ಕಟ್ಟಡಗಳಿಂದ ಪರಿಸರ ಹಾಗೂ ವನ್ಯಜೀವಿಗಳ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಖಾಸಗಿ ಸಂಸ್ಥೆಯೊಂದು ಇದೀಗ ಸುಮಾರು ೩೦ ಎಕರೆ ಪ್ರದೇಶದಲ್ಲಿ ಮೈಸೂರು ಮುಡಾದ ಅನುಮತಿ ಇದೆ ಎಂದು ಹೇಳಿಕೊಂಡು ಬೃಹತ್ ವಿಲ್ಲಾಗಳನ್ನು ನಿರ್ಮಿಸಲು ನಿವೇಶನ ಸಿದ್ಧ ಮಾಡಿಕೊಳ್ಳುತ್ತಿದೆ. ಇದೇ ರೀತಿ ನಿಯಮ ಬಾಹಿರ ಅಕ್ರಮ ಕಟ್ಟಡ ನಿರ್ಮಾಣಗಳು ಮುಂದುವರಿದರೆ ಕೊಡಗಿನ ಜಲ ಮೂಲ, ಪರಿಸರಕ್ಕೆ ಭಾರೀ ಧಕ್ಕೆಯಾಗಲಿದೆ. ಮುಂದೆ ಕಾವೇರಿಯ ಒಡಲು ಬರಿದಾಗಿ ಮೈಸೂರು, ಮಂಡ್ಯ ಭಾಗದ ಜನರಿಗೆ ನೀರು ಅಲಭ್ಯವಾಗಲಿದೆ ಎಂದು ಕೊಡಗು ವನ್ಯಜೀವಿಗಳ ಸಂಘದ ಅಧ್ಯಕ್ಷ ಕರ್ನಲ್ ಮುತ್ತಣ್ಣ ಹೇಳಿದ್ದಾರೆ.
ನಿಯಮಬಾಹಿರ ಕಟ್ಟಡ ನಿರ್ಮಿಸುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಕೆಲ ಅಧಿಕಾರಿಗಳು ಕೂಡ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯ ಜನ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.
” ನಾವು ಕೇರಳದಲ್ಲಿ ಒಂದು ಸ್ಥಳ ಖರೀದಿ ಮಾಡುವುದಾಗಲಿ, ಅಂಗಡಿ ತೆರೆಯುವುದಾಗಲಿ ಸಾಧ್ಯವಾಗುವುದಿಲ್ಲ. ಆದರೆ ಅಲ್ಲಿನವರು ಇಲ್ಲಿ ಬಂದು ಕಾಫಿ ತೋಟ, ಗದ್ದೆಗಳನ್ನು ಖರೀದಿಸಿ, ನಿಯಮ ಬಾಹಿರವಾಗಿ ಬೃಹತ್ ವಿಲ್ಲಾಗಳನ್ನು ನಿರ್ಮಿಸಿ, ಪರಿಸರ ನಾಶ ಮಾಡುತ್ತಿದ್ದಾರೆ. ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು.”
-ಪದ್ಮಿನಿ ಶೇಖರ್, ಪರಿಸರವಾದಿ
” ಕೆಲ ಅಧಿಕಾರಿಗಳು ಪರಿಸರ ನಾಶಕ್ಕೆ ಮೂಲ ಕಾರಣಕರ್ತರಾಗಿದ್ದಾರೆ. ಈ ಬಗ್ಗೆ ಆಗತ್ಯ ತನಿಖೆ ನಡೆಸಿದರೆ ಈ ಅಕ್ರಮಗಳ ಮೂಲ ಹೊರ ಬರುತ್ತದೆ. ನಾಂಗಾಲದಲ್ಲಿ ಈ ರೀತಿ ಬೆಟ್ಟವನ್ನು ಅಗೆದು ವಿಲ್ಲಾಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇತ್ತ ಬಾಳುಗೋಡುವಿನಲ್ಲಿ ೩೦ ಎಕರೆ ಕಾಫಿ ತೋಟ, ಗದ್ದೆಯ ಜಾಗದಲ್ಲಿ ಬೃಹತ್ ವಿಲ್ಲಾ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇಂತಹ ಪ್ರಕೃತಿ ವಿರೋಧಿ, ನಿಯಮ ಬಾಹಿರ ಕೆಲಸಗಳ ವಿರುದ್ಧ ಪರಿಸರ, ನೆಲ, ಜಲ ಉಳಿಸಲು ಉಗ್ರ ಹೋರಾಟ ಅನಿವಾರ್ಯ”
-ರಘು ಮಾಚಯ್ಯ, ಕಾರ್ಯದರ್ಶಿ, ಕಾವೇರಿ ಸೇನೆ
” ತಮ್ಮ ಗ್ರಾಮದ ಅಳಿವು ಉಳಿವಿನ ಜೊತೆಗೆ ಬ್ರಹ್ಮಗಿರಿ ವನ್ಯಜೀವಿ ಅರಣ್ಯದ ಉಳಿವಿನ ಪ್ರಶ್ನೆ ಎದುರಾಗಿದೆ. ಇಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ಸಂಘಟಿತ ಹೋರಾಟ ನಡೆಸಬೇಕಿದೆ. ತನಿಖೆ ನಡೆಸಿ ನಿಯಮ ಉಲ್ಲಂಘನೆಯಾಗಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.”
-ಪುಚ್ಚಿಮಂಡ ಮಾಚಯ್ಯ, ಸ್ಥಳೀಯರು
” ನಿಯಮಬಾಹಿರವಾಗಿ ವನ್ಯಜೀವಿ ಅರಣ್ಯದ ಸಮೀಪವೇ ಬೃಹತ್ ವಿಲ್ಲಾ ನಿರ್ಮಾಣ ಕೆಲಸ ನಡೆಯುತ್ತಿದೆ. ಇಂತಹ ಕಾಮಗಾರಿಗಳಿಂದ ಪರಿಸರದ ಮೇಲೆ ನೇರ ಪರಿಣಾಮ ಬೀರಲಿದೆ. ಜಿಲ್ಲಾಧಿಕಾರಿಗಳು, ಕ್ಷೇತ್ರದ ಶಾಸಕರು, ಸ್ಥಳಕ್ಕೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಇಲ್ಲದಿದ್ದಲ್ಲಿ ಎಲ್ಲರನ್ನೂ ಸಂಘಟಿಸಿ ಉಗ್ರ ಹೋರಾಟ ನಡೆಸಲಾಗುವುದು.”
– ಕರ್ನಲ್ ಮುತ್ತಣ್ಣ, ಅಧ್ಯಕ್ಷ,ಕೊಡಗು ವನ್ಯ ಜೀವಿಗಳ ಸಂಘ
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…