Andolana originals

ಮಾರ್ಚ್‌ನಲ್ಲೇ ಚಾ.ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಜಾರಿ

• ಕೆ.ಬಿ.ರಮೇಶನಾಯಕ

• ಆ.19ರಂದು ಕರೆದಿದ್ದ ಸಭೆ ಮುಂದೂಡಿದ ಸಿಎಂ ಸಿದ್ದರಾಮಯ್ಯ

. ಪ್ರಾಧಿಕಾರ ರಚನೆ ಸಂಬಂಧ ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಲು ಸಿದ್ಧತೆ

• ಪ್ರಾಧಿಕಾರ ರಚನೆ ಕುರಿತು ಮಾ.7ರಂದು ರಾಜ್ಯಪತ್ರದಲ್ಲಿ ಪ್ರಕಟ

• ಜುಲೈ 1ರಿಂದ ಪ್ರಾಧಿ ಕಾರ ಅಸ್ತಿತ್ವಗೊಳಿಸಿ ಅಧಿಸೂಚನೆ ಹೊರಡಿಸಿರುವ ಸರ್ಕಾರ

ಮೈಸೂರು: ರಾಜ ಮನೆತನ ಹಾಗೂ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಕಾನೂನಿನ ಸಂಘರ್ಷಕ್ಕೆ ಕಾರಣವಾಗಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ಮಾರ್ಚ್ ತಿಂಗಳಲ್ಲೇ ರಚಿಸುವ ಜತೆಗೆ ಜುಲೈ ಒಂದರಿಂದಲೇ ಪ್ರಾಧಿಕಾರ ಕಾರ್ಯರೂಪಕ್ಕೆ ಬಂದಿದ್ದು, ಪ್ರಾಧಿಕಾರ ರಚನೆಗೆ ಸಂಬಂಧಿಸಿದಂತೆ ಕೈಗೊಂಡಿರುವ ತೀರ್ಮಾನಗಳನ್ನು ಕುರಿತು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಸರ್ಕಾರ ಮುಂದಾಗಿದೆ.

ಆ.19ರಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಪ್ರಾಧಿಕಾರದ ಪ್ರಥಮ ಸಭೆಯನ್ನು ತಾತ್ಕಾಲಿಕವಾಗಿ ಮುಂದೂಡಲಾ ಗಿದೆ. ಚಾಮುಂಡಿಬೆಟ್ಟಕ್ಕೆ ನಿತ್ಯ ಸಾವಿರಾರು ಮಂದಿ ಭೇಟಿ ನೀಡುವ ಕಾರಣ ಮೂಲ ಸೌಕರ್ಯಗಳನ್ನು ಒದಗಿಸುವುದೂ ಸೇರಿದಂತೆ ಒಂದಿಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರ 2023-24ನೇ ಸಾಲಿನ ಆಯವ್ಯಯದಲ್ಲಿ ಪ್ರಾಧಿಕಾರ ರಚಿಸುವುದಾಗಿ ಘೋಷಿಸಿತ್ತು.

2024ರ ಮಾರ್ಚ್ 7ರಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ 2024ರ ಬಗ್ಗೆ ಕರ್ನಾಟಕ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.

ನಂತರ, ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ಅಧಿಕೃತವಾಗಿ ರಾಜ್ಯಪತ್ರದಲ್ಲಿ ಪ್ರಕಟಿಸಿರುವುದನ್ನು ಕಂದಾಯ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಮಾರ್ಚ್ 30ರಂದು ಕಳುಹಿಸಿ ಕೊಟ್ಟಿದ್ದರು. ನಂತರ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿಒಪ್ಪಿಗೆ ದೊರೆತಮೇಲೆ ಅಧಿವೇಶನದಲ್ಲೂ ಅಂಗೀಕಾರ ದೊರೆತಿತ್ತು. ಇದರಿಂದಾಗಿ ಜುಲೈ 1ರಿಂದ ಪ್ರಾಧಿಕಾರವು ಜಾರಿಗೆ ಬರುತ್ತದೆ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದರ ನಂತರವೇ ರಾಜ್ಯ ಸರ್ಕಾರ ಹಿರಿಯ ಕೆಎಎಸ್ ಅಧಿಕಾರಿ ಎಂ.ಜೆ.ರೂಪಾ ಅವರನ್ನು ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದು ಅವರು ಅಧಿಕಾರ ವಹಿಸಿಕೊಂಡು ಕಾರ್ಯಾರಂಭ ಶುರು ಮಾಡಿದ್ದರು.

ಈ ಮಧ್ಯೆ ರಾಜವಂಶಸ್ಥರು ಪ್ರಾಧಿಕಾರದ ರಚನೆಯನ್ನು ಪ್ರಶ್ನಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದು ಆಂತರಿಕವಾಗಿ ಸರ್ಕಾರವನ್ನು ಗೊಂದಲಕ್ಕೆ ಸಿಲುಕುವಂತೆ ಮಾಡಿದೆ. ಹೀಗಾಗಿಯೇ, ಪ್ರಾಧಿಕಾರ ರಚನೆ ಸಂಬಂಧ ರಾಜ್ಯ ಸರ್ಕಾರ ರಾಜ್ಯಪತ್ರದಲ್ಲಿ ಹೊರಡಿಸಿರುವ ಜತೆಗೆ, ಕಾರ್ಯರೂಪಕ್ಕೆ ಬಂದಿರುವುದನ್ನು ನ್ಯಾಯಾಧೀಶರ ಗಮನಕ್ಕೆ ತರುವುದಕ್ಕೆ ಕಾನೂನು ಸಚಿವಾಲಯ ಮತ್ತು ಧಾರ್ಮಿಕ ದತ್ತಿ ಇಲಾಖೆಯು ದಾಖಲೆಗಳನ್ನು ಸಿದ್ದಪಡಿಸುವ ಕೆಲಸದಲ್ಲಿ ತೊಡಗಿದೆ ಎಂದು ಮೂಲಗಳು ಹೇಳಿವೆ.

ಅಲ್ಲದೆ, ಸಿದ್ದರಾಮಯ್ಯ ಅವರೇ ಸಂಬಂಧಿಸಿದ ಸಚಿವರು, ಹಿರಿಯ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ಅಲ್ಲದೆ, ತಡೆಯಾಜ್ಞೆ ತೆರವು ಗೊಳಿಸಿ ಪ್ರಾಧಿಕಾರದ ಚಟುವಟಿಕೆ ಮುಂದುವರಿ ಸಲು ನಿರ್ಧರಿಸಿದ್ದಾರೆ. ಇದರಿಂದಾಗಿ ಆ.19ರಂದು ಕರೆದಿದ್ದ ಸಭೆಯನ್ನು ತಾತ್ಕಾಲಿಕವಾಗಿ ಮುಂದೂ ಡುವಂತೆ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ಶಾಶ್ವತ ಸದಸ್ಯ ಸ್ಥಾನ ಕೊಟ್ಟರೂ ನಿಯಂತ್ರಣದಿಂದ ಮುಕ್ತಿ:

ಪ್ರಾಧಿಕಾರದಲ್ಲಿ ಮೈಸೂರು ಮಹಾರಾಜರ ಕಾನೂನುಬದ್ಧ ವಂಶಸ್ಥರು ಅಥವಾ ಅವರ ಪ್ರತಿನಿಧಿಗೂ ಶಾಶ್ವತ ಸದಸ್ಯ ಸ್ಥಾನವನ್ನು ನೀಡಲಾಗಿ ದ್ದರೂ ಚಾಮುಂಡೇಶ್ವರಿ ದೇವಸ್ಥಾನವನ್ನು ನಿಯಂತ್ರಿಸುವ ಹೊಣೆಗಾರಿಕೆಯಿಂದ ಮುಕ್ತಗೊಳಿಸಲಾಗಿದೆ. ಮುಖ್ಯಮಂತ್ರಿಗಳು ಪದನಿಮಿತ್ತ ಅಧ್ಯಕ್ಷರಾಗಿದ್ದು, ವಿವಿಧ ಇಲಾಖೆ ಅಧಿಕಾರಿಗಳನ್ನು ಪದನಿಮಿತ್ತ ಸದಸ್ಯರನ್ನಾಗಿ ನಿಯೋಜನೆ ಮಾಡುತ್ತಿದ್ದರೂ ರಾಜವಂಶಸ್ಥರಿಗೆ ಶಾಶ್ವತ ಸದಸ್ಯ ಸ್ಥಾನವನ್ನು ಕಲ್ಪಿಸಲಾಗಿದೆ.

ಆದರೆ, ಚಾಮುಂಡೇಶ್ವರಿ ದೇವಸ್ಥಾನವನ್ನು ನಿಯಂತ್ರಿಸುವ ಯಾವುದೇ ಪದ್ಧತಿ, ರೂಢಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಉಪಬಂಧಗಳಲ್ಲಿ ಅಥವಾ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ ದೇವಸ್ಥಾನದ ಒಡೆತನ, ಆಡಳಿತ ಮತ್ತು ಆಭರಣಗಳು, ಹೊಣೆಗಾರಿಕೆಗಳನ್ನು ಒಳಗೊಂಡಂತೆ ಚರ ಮತ್ತು ಸ್ಥಿರ ಸ್ವತ್ತುಗಳ ಸಂಪೂರ್ಣ ನಿರ್ವಹಣೆಯು ಪ್ರಾಧಿಕಾರದ ಹೊಣೆಯಾಗಿದೆ ಮತ್ತು ಪ್ರಾಧಿಕಾರಕ್ಕೆ ವರ್ಗಾಯಿಸುವಂತೆ ಹೇಳಲಾಗಿದೆ. ಪ್ರಾಧಿಕಾರದಲ್ಲಿ ರಾಜಮನೆತನಕ್ಕೆ ಶಾಶ್ವತ ಸ್ಥಾನ ಕೊಟ್ಟರೂ ದೇವಾಲಯ ನಿಯಂತ್ರಣದಿಂದ ಹೊರಗಿಡುವ ಮತ್ತು ಹಕ್ಕು ಸ್ವಾಮ್ಯವನ್ನು ಪಡೆಯುವಂತಹ ಅಂಶಗಳನ್ನು ಸೇರಿಸಿರುವ ನಿರ್ಧಾರವೇ ಈಗ ರಾಜವಂಶಸ್ಥರು ನ್ಯಾಯಾಲಯದ ಹೋಗುವುದಕ್ಕೆ ಮೂಲ ಕಾರಣವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

4 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

4 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

4 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

4 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

4 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

5 hours ago