Andolana originals

ಕಾರ್ಮಿಕರ ಹಿತ ಕಾಯುವ ಯೋಜನೆಗಳ ಜಾರಿ

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಮ್ಮೆಯ ನುಡಿ’

ಆಂದೋಲನ: ರಾಜ್ಯ ಸರ್ಕಾರಕ್ಕೆ ಸಾವಿರ ದಿನಗಳು ಭರ್ತಿಯಾಗಿವೆ. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವರಾಗಿ ನಿಮ್ಮ ಕೆಲಸ ತೃಪ್ತಿ ತಂದಿದೆಯೇ?

ಸಂತೋಷ್ ಲಾಡ್: ಖಂಡಿತ. ಮುಖ್ಯಮಂತ್ರಿ  ಸಿದ್ದರಾಮಯ್ಯನವರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಕಾರ್ಮಿಕ ಸಚಿವನಾಗಿ ನನ್ನ ಕೆಲಸ ನನಗೆ ತೃಪ್ತಿ ತಂದಿದೆ. ಗುರಿಗಳು ಹಲವಾರಿವೆ. ಆದರೆ ಇದುವರೆಗೆ ಮಾಡಿದ ಸಾಧನೆ ಏನಿದೆ ಅದು ನಿಶ್ಚಿತವಾಗಿ ಸಮಾಧಾನ ತಂದಿದೆ. ದುಡಿಯುವ ಕಾರ್ಮಿಕ ವರ್ಗದ ಹಿತ ಕಾಯುವ ಯೋಜನೆಗಳನ್ನು ಜಾರಿಗೊಳಿಸಿದ ಬಗ್ಗೆ ತೃಪ್ತಿಯಿದೆ.

ಆಂದೋಲನ: ನೀವು ಸಚಿವರಾದ ನಂತರ ಕಾರ್ಮಿಕರಿಗೆ ಕೊಟ್ಟ ಕೊಡುಗೆಗಳೇನು?

ಸಂತೋಷ್ ಲಾಡ್: ಇವತ್ತು ಕಾರ್ಮಿಕ ವರ್ಗ ಏನಿದೆ ಅದು ದುಡಿಯುವ ವರ್ಗ. ಈ ವರ್ಗದಲ್ಲಿ ಸಂಘಟಿತ ಕಾರ್ಮಿಕರ ಪ್ರಮಾಣಕ್ಕಿಂತ ಅಸಂಘಟಿತ ಕಾರ್ಮಿಕರ ಪ್ರಮಾಣ ಹೆಚ್ಚು. ಸರ್ಕಾರಕ್ಕಿರುವ ಮಾಹಿತಿಯ ಪ್ರಕಾರ, ಶೇ.೮೩ರಷ್ಟು ಮಂದಿ ಕಾರ್ಮಿಕರು ಅಸಂಘಟಿತ ವಲಯಕ್ಕೆ ಸೇರಿದವರು. ಇವರಿಗೆ ಬದುಕಿನಲ್ಲಿ ಭದ್ರತೆ ಇಲ್ಲ. ಹೀಗಾಗಿ ಇದನ್ನು ಗುರುತಿಸಿ ಅಸಂಘಟಿತ ವಲಯದ ಬಹುತೇಕ ಕಾರ್ಮಿಕರಿಗೆ ಭದ್ರತೆ ನೀಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ.

ಆಂದೋಲನ: ಅಸಂಘಟಿತ ಕಾರ್ಮಿಕರ ಪೈಕಿ ಎಷ್ಟು ಮಂದಿಗೆ ಕಾರ್ಮಿಕ ಇಲಾಖೆಯ ಯೋಜನೆಗಳು ತಲುಪಿವೆ?

ಸಂತೋಷ್ ಲಾಡ್: ಇವತ್ತು ರಾಜ್ಯದಲ್ಲಿರುವ ಅಲೆಮಾರಿಗಳು, ಖಾಸಗಿ ವಲಯದಲ್ಲಿ ಕೆಲಸ ಮಾಡುತ್ತಿರುವ ಡ್ರೈವರ್‌ಗಳು, ಪತ್ರಿಕಾ ವಿತರಕರು, ಬಹುತೇಕ ಕಟ್ಟಡ ಕಾರ್ಮಿಕರು, ಗಿಗ್ ಕಾರ್ಮಿಕರು, ನೇಕಾರರು, ಅಕ್ಕಸಾಲಿಗರು ಹೀಗೆ ಅಸಂಘಟಿತ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಬಹುತೇಕರ ಬದುಕಿಗೆ ಭದ್ರತೆ ನೀಡಲು ಯೋಜನೆಗಳನ್ನು ರೂಪಿಸಲಾಗಿದೆ. ಅಸಂಘಟಿತ ವಲಯಗಳಲ್ಲಿರುವ ಇನ್ನೂ ಹಲವು ಕಾರ್ಮಿಕರಿಗೆ ಭದ್ರತೆ ನೀಡಲು ಕ್ರಮ ಕೈಗೊಳ್ಳಲಾಗಿದೆ.

ಆಂದೋಲನ: ರಾಜ್ಯಾದ್ಯಂತ ಇರುವ ಕಾರ್ಮಿಕರೇನಿದ್ದಾರೆ ಇವರಲ್ಲಿ ಕಟ್ಟಡ ಕಾರ್ಮಿಕರ ಸಂಖ್ಯೆ ಗಣನಿಯವಾಗಿದೆ. ಇಂತಹವರಿಗೆ ಸರ್ಕಾರದಿಂದ ಸಿಗುತ್ತಿರುವ ಅನುಕೂಲಗಳೇನು?

ಸಂತೋಷ್ ಲಾಡ್: ಕಟ್ಟಡ ಕಾರ್ಮಿಕರಿಗೆ ಹಣಕಾಸಿನ ನೆರವು ಸೇರಿದಂತೆ ಹಲವು ಬಗೆಯ ಅನುಕೂಲಗಳನ್ನು ಒದಗಿಸಲಾಗಿದೆ. ಇವತ್ತು ಕಟ್ಟಡ ಕಾರ್ಮಿಕರು ವಾಸಿಸುವ ಸ್ಥಳಗಳಿಗೇ ಹೋಗಿ ಅವರ ಆರೋಗ್ಯ ತಪಾಸಣೆ ಮಾಡುವ, ಆ ಮೂಲಕ ಅವರಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಾಗುತ್ತಿದೆ. ಅಷ್ಟೇ ಅಲ್ಲ, ಸಮಸ್ಯೆ ದೀರ್ಘಕಾಲೀನವಾಗಿದ್ದರೆ ಅದರ ಪರಿಹಾರಕ್ಕೆ ಸಂಬಂಽಸಿದಂತೆ ಸವಲತ್ತುಗಳನ್ನು ನೀಡಲು ಸರ್ಕಾರ ಮುಂದಾಗಿದೆ.

ಆಂದೋಲನ: ರಾಜ್ಯದ ಕಾರ್ಮಿಕರ ಹಿತದೃಷ್ಟಿಯಿಂದ ಯಾವೆಲ್ಲ ಯೋಜನೆಗಳನ್ನು ಜಾರಿಗೆ ತರಲು ಉದ್ದೇಶೀಸಿದ್ದೀರಿ?

ಸಂತೋಷ್ ಲಾಡ್: ಹಲವು ಯೋಜನೆಗಳನ್ನು ಜಾರಿಗೆ ತರುವ ಉದ್ದೇಶವಿದೆ. ಉದಾಹರಣೆಗೆ ಕಾರ್ಮಿಕರ ಸಮಗ್ರ ಹಿತ ಕಾಯಲು ಕರ್ನಾಟಕ ಕಾರ್ಮಿಕ ನೀತಿಯನ್ನು ಜಾರಿಗೊಳಿಸಲು ಬಯಸಲಾಗಿದೆ. ಕಾರ್ಮಿಕರಿಗೆ ದೊರೆಯುತ್ತಿರುವ ಕನಿಷ್ಠ ವೇತನದ ಪ್ರಮಾಣವನ್ನು ಪರಿಷ್ಕರಿಸಲು ಬಯಸಲಾಗಿದೆ. ಇಎಸ್‌ಐ ಆಸ್ಪತ್ರೆ ಗಳನ್ನು ಉನ್ನತೀಕರಣಗೊಳಿಸಲು ಬಯಸಲಾ ಗಿದೆ. ಕಟ್ಟಡ ಕಾರ್ಮಿಕರಿಗೆ ಮನೆ ನಿರ್ಮಾಣ ಮಾಡಿಕೊಡಲು ಉದ್ದೇಶಿಸಲಾಗಿದೆ.

ಆಂದೋಲನ: ರಾಜ್ಯದ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಏನೇನು ಸೌಲಭ್ಯಗಳನ್ನು ಕಲ್ಪಿಸಿದೆ?

ಸಂತೋಷ್ ಲಾಡ್: ಅಸಂಘಟಿತ ವಲಯದ ಕಾರ್ಮಿಕರಿಗೆ ಅಪಘಾತ ಪರಿಹಾರ ಸೌಲಭ್ಯವನ್ನು ಒದಗಿಸಲಾಗಿದೆ. ಅಪಘಾತದಿಂದ ಮರಣ ಹೊಂದಿದವರ ನಾಮನಿರ್ದೇಶಿತರಿಗೆ ಒಂದು ಲಕ್ಷ ರೂಪಾಯಿ ನೀಡಲಾಗುತ್ತದೆ, ಅಪಘಾತದಿಂದ ಶಾಶ್ವತ ಹಾನಿಗೆ ಇಲ್ಲವೇ ಭಾಗಶಃ ಹಾನಿಗೊಳಗಾದರೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ, ಮೃತರ ಅಂತ್ಯಕ್ರಿಯೆಗೆ ಹತ್ತು ಸಾವಿರ ರೂಪಾಯಿ ನೀಡಲಾಗುತ್ತದೆ. ಹೀಗೆ ಹಲವು ಸವಲತ್ತುಗಳನ್ನು ಅಸಂಘಟಿತ ಕಾರ್ಮಿಕರಿಗೆ ನೀಡಲಾಗುತ್ತಿದೆ.

ಆಂದೋಲನ: ಮುಂದಿನ ದಿನಗಳಲ್ಲಿ ಕಾರ್ಮಿಕರಿಗೆ ಶಕ್ತಿ ನೀಡಲು ರೂಪಿಸುತ್ತಿರುವ ಯೋಜನೆಗಳೇನು?

ಸಂತೋಷ್ ಲಾಡ್: ಹಲವಾರಿವೆ. ದುಡಿಯುವ ಶ್ರಮಿಕರ ತೋಳುಗಳಿಗೆ ಕಸುವು ತುಂಬುವುದೇ ನಮ್ಮ ಆದ್ಯತೆ. ಇದಕ್ಕೆ ಪೂರಕವಾದ ಹಲವು ಯೋಜನೆಗಳನ್ನು ನಾವು ಜಾರಿಗೆ ತಂದಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಲಿದ್ದೇವೆ. ಈ ವಿಷಯದಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ.

ಆಂದೋಲನ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕಾರ್ಮಿಕ ವಲಯಕ್ಕೆ ದೊಡ್ಡ ಶಕ್ತಿ ತುಂಬಿದೆ ಅನ್ನಿಸುತ್ತದೆಯೇ?

ಸಂತೋಷ್ ಲಾಡ್: ನಿಸ್ಸಂಶಯವಾಗಿ. ಅನ್ನಭಾಗ್ಯ ಯೋಜನೆ ಇರಬಹುದು, ಗೃಹಲಕ್ಷ್ಮೀ ಯೋಜನೆ ಇರಬಹುದು. ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವೇ ಇರಬಹುದು, ಒಟ್ಟಿನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದ ಕಾರ್ಮಿಕ ವಲಯಕ್ಕೆ ದೊಡ್ಡ ಮಟ್ಟದ ಶಕ್ತಿ ತಂದಿರುವುದು ನಿಸ್ಸಂಶಯ.

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

25 mins ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

29 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

32 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

34 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

36 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

39 mins ago