Categories: Andolana originals

ಕೊಡಗಿನಲ್ಲಿ ಅಂತರ್ಜಲ ಮಟ್ಟ ಸುಧಾರಣೆ

೩ ಮೀಟರ್‌ನಷ್ಟು ಏರಿಕೆ; ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕಡಿಮೆಯಾಗುವ ಸಾಧ್ಯತೆ
ನವೀನ್ ಡಿಸೋಜ
ಮಡಿಕೇರಿ: ಕಳೆದ ವರ್ಷ ಮಳೆ ಇಲ್ಲದೆ ಕೊಡಗು ಜಿಲ್ಲೆಯಲ್ಲಿ ದಶಕದಲ್ಲಿಯೇ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿತ್ತು. ಮುಂಗಾರಿನಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಸುಮಾರು ೩ ಮೀಟರ್‌ನಷ್ಟು ಏರಿಕೆಯಾಗಿದೆ.

೨೦೨೩ರ ವರ್ಷಾಂತ್ಯಕ್ಕೆ ಜಿಲ್ಲೆಯ ಅಂತರ್ಜ ಲದ ಮಟ್ಟ ಭೂಮಿಯಿಂದ ೧೫. ೭೯ ಮೀಟರ್ ನಷ್ಟು ಕೆಳಭಾಗದಲ್ಲಿತ್ತು. ಈ ವರ್ಷ ಜನವರಿ , ಫೆಬ್ರವರಿಯಲ್ಲಿ ಕೊಂಚ ಏರಿಕೆ ಕಂಡು ಬಂದರೂ ಏಪ್ರಿಲ್ ವೇಳೆಗೆ ಮತ್ತೆ ೧೫. ೩೯ ಮೀ. ಗಳಿಗೆ ತಲುಪಿದ್ದ ಅಂತರ್ಜಲ ಮಟ್ಟ ಮಳೆ ಆರಂಭವಾದ ಬಳಿಕ ನಿರಂತರವಾಗಿ ಚೇತರಿಕೆ ಕಂಡಿದ್ದು, ೯. ೬೨ ಮೀ. ಗೆ ತಲುಪಿದೆ. ಇದರಿಂದ ಸದ್ಯ ಜಿಲ್ಲೆಯ ಸರಾಸರಿ ಅಂತರ್ಜಲದ ಮಟ್ಟ ೧೨. ೦೬ ಮೀ. ಗಳಿಗೆ ಏರಿಕೆಯಾಗಿದೆ.

೩ ಬಾರಿ ಬರ ಪರಿಸ್ಥಿತಿ: ಕಳೆದ ಒಂದು ದಶಕದಲ್ಲಿ ೩ ಬಾರಿ ಜಿಲ್ಲೆ ಬರ ಪರಿಸ್ಥಿತಿಯನ್ನೆದು ರಿಸಿದೆ. ೨೦೧೫ ಮತ್ತು ೨೦೧೭ರಲ್ಲಿಯೂ ಜಿಲ್ಲೆಯಲ್ಲಿ ಮಳೆ ಕೊರತೆ ಉಂಟಾಗಿತ್ತು. ಅಂತರ್ಜಲ ಮಟ್ಟ ೨೦೧೫ರಲ್ಲಿ ೧೪. ೩೫, ೨೦೧೭ರಲ್ಲಿ ೧೪. ೨೭ ಮೀ. ಗಳನ್ನು ತಲುಪಿತ್ತು. ೨೦೧೫ರ ೧೪. ೩೫ ಮೀ. ಅತಿ ಕಡಿಮೆ ಎನಿಸಿಕೊಂಡಿತ್ತು.

೨೦೨೩ರಲ್ಲಿ ಉಂಟಾದ ಭೀಕರ ಬರಗಾಲ ದಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿತ್ತು. ವರ್ಷಾಂತ್ಯದ ವೇಳೆಗೆ ಅಂತರ್ಜಲದ ಸ್ಥಿರ ಮಟ್ಟ ೧೫. ೭೯ಕ್ಕೆ ತಲುಪಿತ್ತು. ಇದು ಕಳೆದ ಒಂದು ದಶಕದಲ್ಲಿಯೇ ಜಿಲ್ಲೆಯಲ್ಲಿ ದಾಖಲಾದ ಕಡಿಮೆ ಮಟ್ಟವಾಗಿತ್ತು.

ಕಳೆದ ಬಾರಿ ಅಂತರ್ಜಲ ಕುಸಿತದಿಂದ ಕೆರೆ, ಕಟ್ಟೆ, ಬಾವಿ, ತೋಡು ಸೇರಿದಂತೆ ಕೊಳವೆ ಬಾವಿಗಳಲ್ಲಿ ನೀರು ಬತ್ತಿ ಹೋಗಿ ಸಾಕಷ್ಟು ಸಮಸ್ಯೆಯಾಗಿತ್ತು.

ಮಡಿಕೇರಿ ನಗರ, ವಿರಾಜಪೇಟೆ, ಕುಶಾಲನಗರ ಸೇರಿದಂತೆ ಹಲವೆಡೆ ಕುಡಿ ಯುವ ನೀರಿಗೂ ಪರದಾಡುವಂತಾಗಿತ್ತು. ಜಿಲ್ಲಾಡಳಿತ ನದಿ, ಕೆರೆ ಕಟ್ಟೆ ಸೇರಿದಂತೆ ಯಾವುದೇ ಜಲ ಮೂಲದಿಂದ ಕೃಷಿ ಮತ್ತಿತರ ಯಾವುದೇ ಚಟುವಟಿಕೆಗೆ ನೀರನ್ನು ಬಳಸಬಾರದೆಂದು ಆದೇಶ ಹೊರಡಿಸಿತ್ತು. ಆದರೆ ಈ ಬಾರಿ ಉತ್ತಮ ಮಳೆಯಾಗಿರು ವುದರಿಂದ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬಹುತೇಕ ಕಡಿಮೆಯಾಗಲಿದೆ.

ಕಳೆದ ಬಾರಿ ಬರ ಪರಿಸ್ಥಿತಿ ಇದ್ದ ಹಿನ್ನೆಲೆಯಲ್ಲಿ ೧೦ ವರ್ಷಗಳಲ್ಲಿಯೇ ಅತಿ ಕಡಿಮೆ ಮಟ್ಟಕ್ಕೆ ಅಂತರ್ಜಲ ಕುಸಿತ ಕಂಡಿತ್ತು. ಈ ಬಾರಿ ಆರಂಭದಿಂದಲೇ ಮುಂಗಾರು ಉತ್ತಮವಾಗಿದ್ದು, ಹಿಂಗಾರು ಮಳೆಯೂ ಉತ್ತಮವಾಗಿ ಸುರಿದಿರುವುದರಿಂದ ಜಿಲ್ಲೆಯ ಅಂತರ್ಜಲ ಮಟ್ಟ ಸಮೃದ್ಧವಾಗಿದೆ.
-ಸೌಮ್ಯ ಕೆ. ಜಿ. , ಹಿರಿಯ ಭೂವಿಜ್ಞಾನಿ(ಹೆಚ್ಚುವರಿ, ಪ್ರಭಾರ) ಜಿಲ್ಲಾ ಅಂತರ್ಜಲ ಕಚೇರಿ

 

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕನ್ನಡ ಶಾಲೆಗಳ ಉಳಿವಿಗೆ ಹೋರಾಟ: ವಾಟಾಳ್‌ ನಾಗರಾಜ್‌ ಬಂಧನ

ಮಂಡ್ಯ: ಜಿಲ್ಲೆಯ 1463 ಕನ್ನಡ ಶಾಲೆಗಳನ್ನು ಉಳಿಸಿ ಹಾಗೂ ಉಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ ಮಂಡ್ಯ ನಗರದ ಸಂಜಯ…

3 mins ago

ಸಫಾರಿ ಸ್ಥಗಿತ, ಪುನರಾರಂಭ ಸಮರ್ಥಿಸಿಕೊಂಡ ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಕಳೆದ ನವೆಂಬರ್‌ನಲ್ಲಿ ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಸಫಾರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿ, ಈಗ ಷರತ್ತುಬದ್ಧವಾಗಿ ಪುನಾರಂಭ ಮಾಡಿರುವುದನ್ನು ಅರಣ್ಯ,…

26 mins ago

ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ಅದ್ಧೂರಿಯಾಗಿ ಜರುಗಿದ ಅಗ್ನಿ ಕುಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ…

39 mins ago

ಕೊಡಗು| 13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ ಮೂರನೇ ಬಲಿ: ಕಾಫಿ ಬೆಳೆಗಾರ ದಾರುಣ ಸಾವು

ಕೊಡಗು: ಕೊಡಗಿನಲ್ಲಿ ಕಾಡಾನೆ - ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ದಾಪುರದ…

52 mins ago

ಮಂಡ್ಯ ಕೋರ್ಟ್‌ಗೆ ಮತ್ತೆ ಬಾಂಬ್ ಬೆದರಿಕೆ : ಸ್ಥಳಕ್ಕೆ ಪೊಲೀಸ್-ಬಾಂಬ್ ಸ್ಕ್ವಾಡ್ ದೌಡು

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು…

2 hours ago

ಯುದ್ಧ ನಿಲ್ಲಿಸಲು 3 ಷರತ್ತು ಮುಂದಿಟ್ಟ ಇರಾನ್‌!

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕಾ ಹಾಗೂ ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು…

2 hours ago