Categories: Andolana originals

ಕೊಡಗಿನಲ್ಲಿ ಅಂತರ್ಜಲ ಮಟ್ಟ ಸುಧಾರಣೆ

೩ ಮೀಟರ್‌ನಷ್ಟು ಏರಿಕೆ; ಬೇಸಿಗೆಯಲ್ಲಿ ನೀರಿನ ಸಮಸ್ಯೆ ಕಡಿಮೆಯಾಗುವ ಸಾಧ್ಯತೆ
ನವೀನ್ ಡಿಸೋಜ
ಮಡಿಕೇರಿ: ಕಳೆದ ವರ್ಷ ಮಳೆ ಇಲ್ಲದೆ ಕೊಡಗು ಜಿಲ್ಲೆಯಲ್ಲಿ ದಶಕದಲ್ಲಿಯೇ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿತ್ತು. ಮುಂಗಾರಿನಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಅಂತರ್ಜಲ ಮಟ್ಟ ಸುಮಾರು ೩ ಮೀಟರ್‌ನಷ್ಟು ಏರಿಕೆಯಾಗಿದೆ.

೨೦೨೩ರ ವರ್ಷಾಂತ್ಯಕ್ಕೆ ಜಿಲ್ಲೆಯ ಅಂತರ್ಜ ಲದ ಮಟ್ಟ ಭೂಮಿಯಿಂದ ೧೫. ೭೯ ಮೀಟರ್ ನಷ್ಟು ಕೆಳಭಾಗದಲ್ಲಿತ್ತು. ಈ ವರ್ಷ ಜನವರಿ , ಫೆಬ್ರವರಿಯಲ್ಲಿ ಕೊಂಚ ಏರಿಕೆ ಕಂಡು ಬಂದರೂ ಏಪ್ರಿಲ್ ವೇಳೆಗೆ ಮತ್ತೆ ೧೫. ೩೯ ಮೀ. ಗಳಿಗೆ ತಲುಪಿದ್ದ ಅಂತರ್ಜಲ ಮಟ್ಟ ಮಳೆ ಆರಂಭವಾದ ಬಳಿಕ ನಿರಂತರವಾಗಿ ಚೇತರಿಕೆ ಕಂಡಿದ್ದು, ೯. ೬೨ ಮೀ. ಗೆ ತಲುಪಿದೆ. ಇದರಿಂದ ಸದ್ಯ ಜಿಲ್ಲೆಯ ಸರಾಸರಿ ಅಂತರ್ಜಲದ ಮಟ್ಟ ೧೨. ೦೬ ಮೀ. ಗಳಿಗೆ ಏರಿಕೆಯಾಗಿದೆ.

೩ ಬಾರಿ ಬರ ಪರಿಸ್ಥಿತಿ: ಕಳೆದ ಒಂದು ದಶಕದಲ್ಲಿ ೩ ಬಾರಿ ಜಿಲ್ಲೆ ಬರ ಪರಿಸ್ಥಿತಿಯನ್ನೆದು ರಿಸಿದೆ. ೨೦೧೫ ಮತ್ತು ೨೦೧೭ರಲ್ಲಿಯೂ ಜಿಲ್ಲೆಯಲ್ಲಿ ಮಳೆ ಕೊರತೆ ಉಂಟಾಗಿತ್ತು. ಅಂತರ್ಜಲ ಮಟ್ಟ ೨೦೧೫ರಲ್ಲಿ ೧೪. ೩೫, ೨೦೧೭ರಲ್ಲಿ ೧೪. ೨೭ ಮೀ. ಗಳನ್ನು ತಲುಪಿತ್ತು. ೨೦೧೫ರ ೧೪. ೩೫ ಮೀ. ಅತಿ ಕಡಿಮೆ ಎನಿಸಿಕೊಂಡಿತ್ತು.

೨೦೨೩ರಲ್ಲಿ ಉಂಟಾದ ಭೀಕರ ಬರಗಾಲ ದಿಂದ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿತ್ತು. ವರ್ಷಾಂತ್ಯದ ವೇಳೆಗೆ ಅಂತರ್ಜಲದ ಸ್ಥಿರ ಮಟ್ಟ ೧೫. ೭೯ಕ್ಕೆ ತಲುಪಿತ್ತು. ಇದು ಕಳೆದ ಒಂದು ದಶಕದಲ್ಲಿಯೇ ಜಿಲ್ಲೆಯಲ್ಲಿ ದಾಖಲಾದ ಕಡಿಮೆ ಮಟ್ಟವಾಗಿತ್ತು.

ಕಳೆದ ಬಾರಿ ಅಂತರ್ಜಲ ಕುಸಿತದಿಂದ ಕೆರೆ, ಕಟ್ಟೆ, ಬಾವಿ, ತೋಡು ಸೇರಿದಂತೆ ಕೊಳವೆ ಬಾವಿಗಳಲ್ಲಿ ನೀರು ಬತ್ತಿ ಹೋಗಿ ಸಾಕಷ್ಟು ಸಮಸ್ಯೆಯಾಗಿತ್ತು.

ಮಡಿಕೇರಿ ನಗರ, ವಿರಾಜಪೇಟೆ, ಕುಶಾಲನಗರ ಸೇರಿದಂತೆ ಹಲವೆಡೆ ಕುಡಿ ಯುವ ನೀರಿಗೂ ಪರದಾಡುವಂತಾಗಿತ್ತು. ಜಿಲ್ಲಾಡಳಿತ ನದಿ, ಕೆರೆ ಕಟ್ಟೆ ಸೇರಿದಂತೆ ಯಾವುದೇ ಜಲ ಮೂಲದಿಂದ ಕೃಷಿ ಮತ್ತಿತರ ಯಾವುದೇ ಚಟುವಟಿಕೆಗೆ ನೀರನ್ನು ಬಳಸಬಾರದೆಂದು ಆದೇಶ ಹೊರಡಿಸಿತ್ತು. ಆದರೆ ಈ ಬಾರಿ ಉತ್ತಮ ಮಳೆಯಾಗಿರು ವುದರಿಂದ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಬಹುತೇಕ ಕಡಿಮೆಯಾಗಲಿದೆ.

ಕಳೆದ ಬಾರಿ ಬರ ಪರಿಸ್ಥಿತಿ ಇದ್ದ ಹಿನ್ನೆಲೆಯಲ್ಲಿ ೧೦ ವರ್ಷಗಳಲ್ಲಿಯೇ ಅತಿ ಕಡಿಮೆ ಮಟ್ಟಕ್ಕೆ ಅಂತರ್ಜಲ ಕುಸಿತ ಕಂಡಿತ್ತು. ಈ ಬಾರಿ ಆರಂಭದಿಂದಲೇ ಮುಂಗಾರು ಉತ್ತಮವಾಗಿದ್ದು, ಹಿಂಗಾರು ಮಳೆಯೂ ಉತ್ತಮವಾಗಿ ಸುರಿದಿರುವುದರಿಂದ ಜಿಲ್ಲೆಯ ಅಂತರ್ಜಲ ಮಟ್ಟ ಸಮೃದ್ಧವಾಗಿದೆ.
-ಸೌಮ್ಯ ಕೆ. ಜಿ. , ಹಿರಿಯ ಭೂವಿಜ್ಞಾನಿ(ಹೆಚ್ಚುವರಿ, ಪ್ರಭಾರ) ಜಿಲ್ಲಾ ಅಂತರ್ಜಲ ಕಚೇರಿ

 

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

4 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

2 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

10 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

12 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

13 hours ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

15 hours ago