Andolana originals

ಇಂದು ಭಾಗಮಂಡಲದ ಮೇಲ್ಸೇತುವೆ ಉದ್ಘಾಟನೆ

೨೮. ೮೬ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಫೈಓವರ್ – ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ ಮೇಲ್ಸೇತುವೆ

ನವೀನ್ ಡಿಸೋಜ

ಮಡಿಕೇರಿ: ಕೊಡಗಿನ ಮೊದಲ ಫೈಓವರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾಗಮಂಡಲ ಮೇಲ್ಸೇತುವೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಉದ್ಘಾಟಿಸಲಿದ್ದಾರೆ.

ಪ್ರತೀ ವರ್ಷ ಮಳೆಗಾಲದಲ್ಲಿ ದ್ವೀಪದಂತಾಗುವ ಭಾಗ ಮಂಡಲ ಹಾಗೂ ಸುತ್ತಮುತ್ತಲಿನ ಹಲವು ಗ್ರಾಮಗಳು ಹೊರ ಜಗತ್ತಿನ ಸಂಪರ್ಕವನ್ನೇ ಕಡಿದುಕೊಳ್ಳುತ್ತಿದ್ದವು. ಮಳೆಗಾಲದಲ್ಲಿ ಕನಿಷ್ಠ ಮೂರು ನಾಲ್ಕು ಬಾರಿಯಾದರೂ ತ್ರಿವೇಣಿ ಸಂಗಮ ಭರ್ತಿಯಾಗಿ ಪ್ರವಾಹ ಉಂಟಾಗುತ್ತದೆ. ಈ ಸಂದರ್ಭದಲ್ಲಿ ಪ್ರಮುಖ ರಸ್ತೆಗಳಾದ ಮಡಿಕೇರಿ ಮತ್ತು ನಾಪೋಕ್ಲು ಕಡೆಗೆ ಸಂಪರ್ಕಕ್ಕೆ ದೋಣಿಗಳನ್ನು ಬಳಸಬೇಕಾಗುತ್ತಿತ್ತು. ತಿಂಗಳುಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿ ಇಲ್ಲಿಯೇ ಇದ್ದು, ಜನರನ್ನು ಬೋಟ್ ಮೂಲಕ ದಾಟಿಸುತ್ತಿದ್ದರು.

ಈ ಸಮಸ್ಯೆಗೆ ಮುಕ್ತಿ ನೀಡಲು ೨೦೧೬ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲು ಯೋಜನೆ ರೂಪಿಸಿತು. ೨೦೧೬ರ ಅ. ೬ರಂದು ಯೋಜನೆಗೆ ಅನುಮೋದನೆ ದೊರೆಯಿತು. ಬಳಿಕ ೨೦೧೮ರಲ್ಲಿ ಕೊಡಗು ಉಸ್ತುವಾರಿ ಸಚಿವರಾಗಿದ್ದ ಕೆ. ಜೆ. ಜಾರ್ಜ್ ಕಾಮಗಾರಿಗೆ ಚಾಲನೆ ನೀಡಿದ್ದರು. ಆರಂಭದಿಂದಲೇ ಕುಂಟುತ್ತಾ ಸಾಗಿದ ಮೇಲ್ಸೇತುವೆ ಕಾಮಗಾರಿ ಬರೋಬ್ಬರಿ ೬ ವರ್ಷಗಳ ಬಳಿಕ ಪೂರ್ಣಗೊಂಡಿದ್ದು, ಇಂದು ಉದ್ಘಾಟನೆಗೊಳ್ಳುತ್ತಿದೆ.

ಕಾಮಗಾರಿ ಆರಂಭದಲ್ಲಿ ಕಾಂಗ್ರೆಸ್ ಸರ್ಕಾರ ಅಽಕಾರದಲ್ಲಿತ್ತು. ಬಳಿಕ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸಿತು. ನಂತರ ಬಿಜೆಪಿಯೂ ಆಡಳಿತ ನಡೆಸಿ ಬಳಿಕ ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದ ಬಳಿಕ ಮೇಲ್ಸೇತುವೆ ಉದ್ಘಾಟನೆಗೊಳ್ಳುತ್ತಿರುವುದು ವಿಶೇಷ. ಒಟ್ಟು ೨೮. ೮೬ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ.

ಮಧ್ಯಾಹ್ನ ೩ ಗಂಟೆಗೆ ಉದ್ಘಾಟನಾ ಸಮಾರಂಭ : ಜಲ ಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ ಕೊಡಗು ಜಿಲ್ಲೆಯ ಭಾಗಮಂಡಲದ ಹತ್ತಿರ ಮಡಿಕೇರಿ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಿರುವ ಮೇಲ್ಸೇತುವೆಯ ಉದ್ಘಾಟನಾ ಸಮಾರಂಭ ಶುಕ್ರವಾರ ಮಧ್ಯಾಹ್ನ ೩ ಗಂಟೆಗೆ ಭಾಗಮಂಡಲದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವ ಡಿ. ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ, ಇಂಧನ ಸಚಿವ ಕೆ. ಜೆ. ಜಾರ್ಜ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ. ಪಿ. ಸುಜಾ ಕುಶಾಲಪ್ಪ, ಎಸ್. ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ, ಭಾಗಮಂಡಲ ಗ್ರಾ. ಪಂ. ಅಧ್ಯಕ್ಷ ಕಾಳನ ಎ. ರವಿ ಇತರರು ಪಾಲ್ಗೊಳ್ಳಲಿದ್ದಾರೆ.

ಎಸ್. ಎಂ. ಕೃಷ್ಣ ಹೆಸರಿಡಿ: ಕೆ. ಪಿ. ಚಂದ್ರಕಲಾ ಕೊಡಗಿನ ಪವಿತ್ರ ಕ್ಷೇತ್ರ ಭಾಗಮಂಡಲದಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಭಾಗಮಂಡಲ ತಲಕಾವೇರಿ ರಸ್ತೆ ಸಂಪರ್ಕಿಸುವ ಮೇಲ್ಸೇತುವೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ. ಎಸ್. ಎಂ. ಕೃಷ್ಣ ಹೆಸರು ನಾಮಕರಣ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಜಿ. ಪಂ. ಮಾಜಿ ಅಧ್ಯಕ್ಷೆ ಕೆ. ಪಿ. ಚಂದ್ರಕಲಾ ಸಲಹೆ ನೀಡಿದ್ದಾರೆ.

ಕನ್ನಡ ನಾಡಿದ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿ ಅಭಿವೃದ್ಧಿಗೆ ಎಸ್. ಎಂ. ಕೃಷ್ಣ ರವರು ೧೨. ೫೦ ಕೋಟಿ ರೂ. ಅನುದಾನ ನೀಡಿ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿದ್ದರು. ತಮ್ಮ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಮೂವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಗೆ ಕೃಷ್ಣ ಹೆಸರಿಡುವಂತೆ ಅವರು ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

6 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

7 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

7 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

7 hours ago