Andolana originals

ಇಂದು ಭಾಗಮಂಡಲದ ಮೇಲ್ಸೇತುವೆ ಉದ್ಘಾಟನೆ

೨೮. ೮೬ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಫೈಓವರ್ – ಸಿಎಂ ಸಿದ್ದರಾಮಯ್ಯರಿಂದ ಲೋಕಾರ್ಪಣೆ ಮೇಲ್ಸೇತುವೆ

ನವೀನ್ ಡಿಸೋಜ

ಮಡಿಕೇರಿ: ಕೊಡಗಿನ ಮೊದಲ ಫೈಓವರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾಗಮಂಡಲ ಮೇಲ್ಸೇತುವೆ ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಉದ್ಘಾಟಿಸಲಿದ್ದಾರೆ.

ಪ್ರತೀ ವರ್ಷ ಮಳೆಗಾಲದಲ್ಲಿ ದ್ವೀಪದಂತಾಗುವ ಭಾಗ ಮಂಡಲ ಹಾಗೂ ಸುತ್ತಮುತ್ತಲಿನ ಹಲವು ಗ್ರಾಮಗಳು ಹೊರ ಜಗತ್ತಿನ ಸಂಪರ್ಕವನ್ನೇ ಕಡಿದುಕೊಳ್ಳುತ್ತಿದ್ದವು. ಮಳೆಗಾಲದಲ್ಲಿ ಕನಿಷ್ಠ ಮೂರು ನಾಲ್ಕು ಬಾರಿಯಾದರೂ ತ್ರಿವೇಣಿ ಸಂಗಮ ಭರ್ತಿಯಾಗಿ ಪ್ರವಾಹ ಉಂಟಾಗುತ್ತದೆ. ಈ ಸಂದರ್ಭದಲ್ಲಿ ಪ್ರಮುಖ ರಸ್ತೆಗಳಾದ ಮಡಿಕೇರಿ ಮತ್ತು ನಾಪೋಕ್ಲು ಕಡೆಗೆ ಸಂಪರ್ಕಕ್ಕೆ ದೋಣಿಗಳನ್ನು ಬಳಸಬೇಕಾಗುತ್ತಿತ್ತು. ತಿಂಗಳುಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿ ಇಲ್ಲಿಯೇ ಇದ್ದು, ಜನರನ್ನು ಬೋಟ್ ಮೂಲಕ ದಾಟಿಸುತ್ತಿದ್ದರು.

ಈ ಸಮಸ್ಯೆಗೆ ಮುಕ್ತಿ ನೀಡಲು ೨೦೧೬ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲು ಯೋಜನೆ ರೂಪಿಸಿತು. ೨೦೧೬ರ ಅ. ೬ರಂದು ಯೋಜನೆಗೆ ಅನುಮೋದನೆ ದೊರೆಯಿತು. ಬಳಿಕ ೨೦೧೮ರಲ್ಲಿ ಕೊಡಗು ಉಸ್ತುವಾರಿ ಸಚಿವರಾಗಿದ್ದ ಕೆ. ಜೆ. ಜಾರ್ಜ್ ಕಾಮಗಾರಿಗೆ ಚಾಲನೆ ನೀಡಿದ್ದರು. ಆರಂಭದಿಂದಲೇ ಕುಂಟುತ್ತಾ ಸಾಗಿದ ಮೇಲ್ಸೇತುವೆ ಕಾಮಗಾರಿ ಬರೋಬ್ಬರಿ ೬ ವರ್ಷಗಳ ಬಳಿಕ ಪೂರ್ಣಗೊಂಡಿದ್ದು, ಇಂದು ಉದ್ಘಾಟನೆಗೊಳ್ಳುತ್ತಿದೆ.

ಕಾಮಗಾರಿ ಆರಂಭದಲ್ಲಿ ಕಾಂಗ್ರೆಸ್ ಸರ್ಕಾರ ಅಽಕಾರದಲ್ಲಿತ್ತು. ಬಳಿಕ ಸಮ್ಮಿಶ್ರ ಸರ್ಕಾರ ಅಧಿಕಾರ ನಡೆಸಿತು. ನಂತರ ಬಿಜೆಪಿಯೂ ಆಡಳಿತ ನಡೆಸಿ ಬಳಿಕ ಇದೀಗ ಮತ್ತೆ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬಂದ ಬಳಿಕ ಮೇಲ್ಸೇತುವೆ ಉದ್ಘಾಟನೆಗೊಳ್ಳುತ್ತಿರುವುದು ವಿಶೇಷ. ಒಟ್ಟು ೨೮. ೮೬ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ.

ಮಧ್ಯಾಹ್ನ ೩ ಗಂಟೆಗೆ ಉದ್ಘಾಟನಾ ಸಮಾರಂಭ : ಜಲ ಸಂಪನ್ಮೂಲ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತ ವತಿಯಿಂದ ಕೊಡಗು ಜಿಲ್ಲೆಯ ಭಾಗಮಂಡಲದ ಹತ್ತಿರ ಮಡಿಕೇರಿ-ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡವಾಗಿ ನಿರ್ಮಿಸಿರುವ ಮೇಲ್ಸೇತುವೆಯ ಉದ್ಘಾಟನಾ ಸಮಾರಂಭ ಶುಕ್ರವಾರ ಮಧ್ಯಾಹ್ನ ೩ ಗಂಟೆಗೆ ಭಾಗಮಂಡಲದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವ ಡಿ. ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ, ಇಂಧನ ಸಚಿವ ಕೆ. ಜೆ. ಜಾರ್ಜ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ. ಪಿ. ಸುಜಾ ಕುಶಾಲಪ್ಪ, ಎಸ್. ಎಲ್. ಭೋಜೇಗೌಡ, ಡಾ. ಧನಂಜಯ ಸರ್ಜಿ, ಭಾಗಮಂಡಲ ಗ್ರಾ. ಪಂ. ಅಧ್ಯಕ್ಷ ಕಾಳನ ಎ. ರವಿ ಇತರರು ಪಾಲ್ಗೊಳ್ಳಲಿದ್ದಾರೆ.

ಎಸ್. ಎಂ. ಕೃಷ್ಣ ಹೆಸರಿಡಿ: ಕೆ. ಪಿ. ಚಂದ್ರಕಲಾ ಕೊಡಗಿನ ಪವಿತ್ರ ಕ್ಷೇತ್ರ ಭಾಗಮಂಡಲದಲ್ಲಿ ಲೋಕಾರ್ಪಣೆಗೊಳ್ಳುತ್ತಿರುವ ಭಾಗಮಂಡಲ ತಲಕಾವೇರಿ ರಸ್ತೆ ಸಂಪರ್ಕಿಸುವ ಮೇಲ್ಸೇತುವೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ. ಎಸ್. ಎಂ. ಕೃಷ್ಣ ಹೆಸರು ನಾಮಕರಣ ಮಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಜಿ. ಪಂ. ಮಾಜಿ ಅಧ್ಯಕ್ಷೆ ಕೆ. ಪಿ. ಚಂದ್ರಕಲಾ ಸಲಹೆ ನೀಡಿದ್ದಾರೆ.

ಕನ್ನಡ ನಾಡಿದ ಜೀವನದಿ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿ ಅಭಿವೃದ್ಧಿಗೆ ಎಸ್. ಎಂ. ಕೃಷ್ಣ ರವರು ೧೨. ೫೦ ಕೋಟಿ ರೂ. ಅನುದಾನ ನೀಡಿ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾಗಿದ್ದರು. ತಮ್ಮ ಸಚಿವ ಸಂಪುಟದಲ್ಲಿ ಕೊಡಗು ಜಿಲ್ಲೆಯ ಮೂವರನ್ನು ಮಂತ್ರಿಗಳನ್ನಾಗಿ ಮಾಡುವ ಮೂಲಕ ಜಿಲ್ಲೆಗೆ ವಿಶೇಷ ಪ್ರಾತಿನಿಧ್ಯ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಗೆ ಕೃಷ್ಣ ಹೆಸರಿಡುವಂತೆ ಅವರು ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

10 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

12 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

16 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago