Andolana originals

ಕಬಿನಿ ಹಿನ್ನೀರಿನಲ್ಲಿ ಹೆಚ್ಚಿದ ಬೋಟ್ ಸಫಾರಿ

ಮಂಜು ಕೋಟೆ

ಅರಣ್ಯದೊಳಗಿನ ಸಫಾರಿಗೆ ನಿರ್ಬಂಧ ಹೇರಿದ ಬಳಿಕ ಪ್ರವಾಸಿಗರನ್ನು ಸೆಳೆಯಲು ರೆಸಾರ್ಟ್‌ನವರ ಕಸರತ್ತು 

ಎಚ್.ಡಿ.ಕೋಟೆ: ಅರಣ್ಯದಲ್ಲಿ ಈಗ ಸಫಾರಿ ಸ್ಥಗಿತಗೊಂಡಿರುವುದರಿಂದ ಪ್ರವಾಸಿಗರನ್ನು ಸೆಳೆಯಲು ವಿವಿಧ ರೆಸಾರ್ಟ್‌ನವರು ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೋಟ್ ಸ-ರಿಗಳನ್ನು ನಡೆಸುತ್ತಿದ್ದಾರೆ.

ತಾಲ್ಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಅನೇಕ ಗ್ರಾಮಗಳ ವ್ಯಾಪ್ತಿಯಲ್ಲಿ ಹುಲಿಗಳ ಹಾವಳಿ ಮತ್ತು ದಾಳಿಯಿಂದ ಮೂವರು ರೈತರು ಸಾವನ್ನಪ್ಪಿ, ಒಬ್ಬರು ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ದಮ್ಮನ ಕಟ್ಟೆ ಸಫಾರಿಯನ್ನು ಸ್ಥಗಿತಗೊಳಿಸುವಂತೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಆದೇಶಿಸಿದ್ದರು.

ನಂತರ ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿ ಕಾಡಿನಿಂದ ಹೊರಗೆ ಬಂದಿದ್ದ ೨೨ ಹುಲಿಗಳನ್ನು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಅರಣ್ಯ ಇಲಾಖೆಯವರು ಸೆರೆಹಿಡಿದಿದ್ದಾರೆ.

ದಮ್ಮನಕಟ್ಟೆ ಮತ್ತು ಕಾರಾಪುರ ಜಂಗಲ್ ಲಾಡ್ಜ್ ಸಫಾರಿ ಎರಡು ತಿಂಗಳಾದರೂ ನಡೆಯದೇ ಇರುವ ಹಿನ್ನೆಲೆಯಲ್ಲಿ ಅಧಿಕೃತ ಮತ್ತು ಅನಧಿಕೃತವಾಗಿರುವ ರೆಸಾರ್ಟ್‌ಗಳು, ಹೋಂಸ್ಟೇಗಳು ಮತ್ತು ಕೆಲ ಅರಣ್ಯ ಅಧಿಕಾರಿಗಳಿಗೆ ಆತಂಕ ಎದುರಾಗಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿ ನಷ್ಟ ಅನುಭವಿಸುವ ಪರಿಸ್ಥಿತಿ ಉಂಟಾಗಿದೆ.

ಹೀಗಾಗಿ ರೆಸಾರ್ಟ್‌ಗಳಿಗೆ ಬರುತ್ತಿದ್ದ ಪ್ರವಾಸಿಗರು ಮತ್ತು ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸಲು ಹೊಸ ವರ್ಷದ ಆಚರಣೆಯ ಹಿನ್ನೆಲೆಯಲ್ಲಿ ಕಬಿನಿ ಹಿನ್ನೀರಿನಲ್ಲಿ ಬಹುತೇಕ ರೆಸಾರ್ಟ್ ನವರು ಬೋಟ್ ಸಫಾರಿಯನ್ನು ನಡೆಸಿ ಕಾಡಂಚಿನಲ್ಲಿರುವ ವನ್ಯಪ್ರಾಣಿಗಳನ್ನು ತೋರಿಸುವ ಕೆಲಸವನ್ನು ದಿನಕ್ಕೆ ೪-೫ ಬಾರಿ ಪೈಪೋಟಿ ಮೇಲೆ ಮಾಡುತ್ತಿದ್ದಾರೆ.

೨-೩ ತಿಂಗಳುಗಳ ಹಿಂದೆ ಹಿನ್ನೀರಿನಲ್ಲಿ ಬೆರಳೆಣಿಕೆಯಷ್ಟು ಬೋಟ್‌ಗಳು ಮಾತ್ರ ಸಫಾರಿ ಮಾಡಿಸುತ್ತಿದ್ದವು. ಕೆಲ ವೊಂದು ರೆಸಾರ್ಟ್‌ನವರು ಬೋಟ್ ಸಫಾರಿ ನಡೆಸಲು ನೀರಾವರಿ ಇಲಾಖೆ ಮೂಲಕ ಅನುಮತಿ ಪಡೆದಿದ್ದರೆ ಮತ್ತೆ ಅನೇಕರು ಅನುಮತಿಯನ್ನೇ ಪಡೆಯದೆ ನಿಯಮಬಾಹಿರ ವಾಗಿ ಸಫಾರಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ತಾಲ್ಲೂಕಿನಲ್ಲಿ ಹಿನ್ನೀರಿನ ಬೋಟ್ ಸಫಾರಿಯಿಂದ ಯಾರಿಗೆ ಅನುಕೂಲ, ಅನನುಕೂಲ ಎಂಬುದಕ್ಕಿಂತ ಹೆಚ್ಚಾಗಿ ಪರಿಸರ, ನೀರು, ವನ್ಯಪ್ರಾಣಿಗಳು, ಕಾಡು, ರೈತರು, ಕೂಲಿ ಕಾರ್ಮಿಕರ ಮೇಲೆ ಉಂಟಾಗುವ ಪರಿಣಾಮಗಳ ಕುರಿತೂ ಯೋಚಿಸಬೇಕಿದೆ.

ಜಿಲ್ಲೆಯವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಮ್ಮನಕಟ್ಟೆಯ ಸಫಾರಿ ಮತ್ತು ಬಂಡೀಪುರದ ಸಫಾರಿಗಳನ್ನು ಹಂತ ಹಂತವಾಗಿ ಆರಂಭಿಸುವ ನಿಟ್ಟಿನಲ್ಲಿ ಅಧ್ಯಯನ ಮಾಡಲು ತಜ್ಞರ ಸಮಿತಿ ರಚಿಸಿ ವರದಿ ನೀಡುವಂತೆ ಕರ್ನಾಟಕ ವನ್ಯಜೀವಿ ಮಂಡಳಿಯ ೨೦ನೇ ಸಭೆಯಲ್ಲಿ ಸೂಚಿಸಿದ್ದಾರೆ. ವರದಿ ಬಂದ ಬಳಿಕ ತಾಲ್ಲೂಕಿನಲ್ಲಿ ಹಂತ ಹಂತವಾಗಿ ನಿಯಮಾನುಸಾರವಾಗಿ ಅರಣ್ಯ ಸಫಾರಿ ಪ್ರಾರಂಭವಾಗುವುದು ಖಚಿತವಾಗಿರುವುದರಿಂದ ರೆಸಾರ್ಟ್ಗಳು, ಪ್ರವಾಸಿಗರು ಮತ್ತು ಅರಣ್ಯ ಇಲಾಖೆಯವರಲ್ಲಿ ಸಂತಸ ಮೂಡಿದೆ.

” ಕಬಿನಿ ಹಿನ್ನೀರಿನಲ್ಲಿ ನಿಯಮ ಉಲ್ಲಂಘಿಸಿ ಬೋಟ್ ಸಫಾರಿ ನಡೆಸುವ ರೆಸಾರ್ಟ್‌ನವರಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಇಲಾಖೆಯ ನಿಯಮಗಳನ್ನು ಉಲ್ಲೇಖಿಸಿ ರೆಸಾರ್ಟ್ ಮಾಲೀಕರಿಗೆ ಮಾಹಿತಿ ನೀಡಲಾಗಿದೆ.”

ಗಣೇಶ್, ಎಇಇ, ಕಬಿನಿ ಜಲಾಶಯ

ಆಂದೋಲನ ಡೆಸ್ಕ್

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

8 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

9 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

9 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

10 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

10 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

10 hours ago