Andolana originals

ಕೋಟೆಯಲ್ಲಿ ಹೆಚ್ಚುತ್ತಿರುವ ಅಕ್ರಮ ಚಟುವಟಿಕೆಗಳು

• ಮಂಜು ಕೋಟೆ

ಎಚ್.ಡಿ ಕೋಟೆ: ಜಿಲ್ಲೆಯ ಗಡಿಭಾಗವಾದ ತಾಲ್ಲೂ ಕಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚುತ್ತಿರುವುದು ಹಾಗೂ ವಾಹನ ಸಂಚಾರ ದಟ್ಟಣೆ ಹೆಚ್ಚುತ್ತಿರುವುದು ನೂತನ ಪೊಲೀಸ್ ವರಿಷ್ಠಾಧಿ ಕಾರಿಗೆ ಸವಾಲಾಗಿ ಪರಿಣಮಿಸಿದೆ.

ಗಡಿಭಾಗ, ಅಭಯಾರಣ್ಯ, ಜಲಾಶಯಗಳನ್ನು ಹೊಂದಿರುವ ಈ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ, ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕು ವುದು ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದೆ.

ಕೇರಳ ರಾಜ್ಯದ ಪಕ್ಕದಲ್ಲೇ ಇರುವುದರಿಂದ ಕೋಟೆ ತಾಲ್ಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ನಿರಂತರ ವಾಗಿ ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ನಮ್ಮ ರಾಜ್ಯದಲ್ಲಿ ಲಾಟರಿ ನಿಷೇಧವಾಗಿದ್ದರೂ ನೆರೆಯ ಕೇರಳ ರಾಜ್ಯದ ಲಾಟರಿಗಳ ಮಾರಾಟ, ಜೂಜಾಟ ಪಟ್ಟಣ ಸೇರಿದಂತೆ ಪ್ರಮುಖ ಕೇಂದ್ರ ಸ್ಥಾನಗಳಲ್ಲಿ ರಾಜಾರೋಷವಾಗಿ ನಡೆಯುತ್ತಿರುವುದು ಪೊಲೀ ಸರನ್ನು ಚಿಂತೆಗೀಡು ಮಾಡಿದೆ. ಈ ದುಶ್ಚಟಕ್ಕೆ ಬಲಿಯಾಗುತ್ತಿರುವವರ ಬೀದಿಪಾಲಾಗುತ್ತಿವೆ. ಕುಟುಂಬಗಳು

ಗಾಂಜಾ ಮಾರಾಟ ನಡೆಯುತ್ತಿರುವುದರಿಂದ ಅವುಗಳ ಚಟಕ್ಕೆ ಬಲಿಯಾಗುತ್ತಿರುವ ಯುವಕರು ದಾರಿ ತಪ್ಪುತ್ತಿದ್ದಾರೆ. ಅಮಲು ಪದಾರ್ಥಗಳ ಮಾರಾಟವೂ ಹೆಚ್ಚುತ್ತಿದೆ.

ಗಡಿ ಭಾಗ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟದಿಂದ ಕೂಲಿ ಕಾರ್ಮಿಕರು, ರೈತರು, ಆದಿವಾಸಿ ಜನರು ವಿಪರೀತದ ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ. ತಮ್ಮ ಆರೋಗ್ಯ ಹಾಳುಮಾಡಿಕೊಂಡು ಸಾವಿಗೀಡಾ ಗುವಜತೆಗೆ ತಮ್ಮ ಕುಟುಂಬದವರನ್ನೂ ಬೀದಿಪಾಲು ಮಾಡುತ್ತಿದ್ದಾರೆ.

ಕಬಿನಿ, ತಾರಕ, ನುಗು, ಹೆಬ್ಬಾಳ ಜಲಾಶಯಗಳ ವ್ಯಾಪ್ತಿಯಲ್ಲಿ ರಜಾ ದಿನಗಳು ಹಾಗೂ ಇನ್ನಿತರ ದಿನಗಳಲ್ಲಿ ಮೋಜು-ಮಸ್ತಿಗೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ವಸ್ತುಗಳು, ಇನ್ನಿತರ ಪದಾರ್ಥಗಳನ್ನು ಜಲಾಶಯಗಳ ಸುತ್ತಮುತ್ತ ಬೀಸಾಡುತ್ತಿದ್ದು, ಪರಿಸರವನ್ನೇ ಹಾಳು ಮಾಡುತ್ತಿದ್ದಾರೆ.

ಸಂಚಾರ ದಟ್ಟಣೆ: ಎಚ್.ಡಿ.ಕೋಟೆ ಪಟ್ಟಣ, ಹ್ಯಾಂಡ್‌ ಪೋಸ್ಟ್, ಅಂತರಸಂತೆ, ಹೊಮ್ಮರಗಳ್ಳಿ, ಸರಗೂರು ಇನ್ನಿತರ ಪ್ರದೇಶಗಳಲ್ಲಿ ಪ್ರತಿನಿತ್ಯವೂ ವಾಹನಗಳನ್ನು ಎಲ್ಲೆಂದರಲ್ಲಿ ಓಡಿಸುವುದು ಮತ್ತು ನಿಲುಗಡೆ ಮಾಡುತ್ತಿರುವುದರಿಂದ ಸಾರ್ವಜನಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ.

ಹೊರ ರಾಜ್ಯ, ಹೊರ ದೇಶಗಳಿಂದ ತಾಲ್ಲೂಕಿನ ರೆಸಾರ್ಟ್ ಗಳಿಗೆ ಬರುವ ಪ್ರವಾಸಿಗರು ಈ ನಿಯಮ ಉಲ್ಲಂಘನೆಗಳನ್ನು ಗಮನಿಸಿ ತಾಲ್ಲೂಕಿನ ಅವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಂಡುಬರುತ್ತಿದೆ.

ಬಹುತೇಕ ಪೊಲೀಸ್ ಠಾಣೆಗಳಲ್ಲಿ ಹಲವಾರು ಅಧಿಕಾರಿಗಳು ಹಲವು ವರ್ಷಗಳಿಂದ ಕೆಲಸ ಮಾಡು ತ್ತಿದ್ದು, ಕೆಲಸಗಳು ಚುರುಕಿನಿಂದ ನಡೆಯುತ್ತಿಲ್ಲ ಎಂಬ ಆರೋಪವಿದೆ. ಇನ್ನಾದರೂ ಪೊಲೀಸ್ ವರಿಷ್ಠಾಧಿಕಾರಿಗಳು, ಸರ್ಕಲ್ ಇನ್‌ಸ್ಪೆಕ್ಟರ್, ಎಸ್‌ಐಗಳು ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಿದೆ.

ಕೋಟ್ಸ್‌))

ಹೆಚ್.ಡಿ.ಕೋಟೆ ಕ್ಷೇತ್ರದ ಸ್ಥಿತಿಗತಿಗಳನ್ನು ಗಮನಿಸಿದ್ದು, ನಿರಂತರವಾಗಿ ಸಭೆ ನಡೆಸಿ ತಂಡ ರಚನೆ ಮಾಡಿ ಗಡಿಭಾಗದ ಈ ತಾಲ್ಲೂಕಿನಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಿ, ಸಂಚಾರ ನಿಯಮಗಳು ಪಾಲನೆ ಆಗುವ ರೀತಿಯಲ್ಲಿ ಮತ್ತು ಪೊಲೀಸ್ ಠಾಣೆಗಳಲ್ಲಿ ಮತ್ತಷ್ಟು ಕೆಲಸ ಕಾರ್ಯಗಳು ಚುರುಕುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು.
-ವಿಷ್ಣುವರ್ಧನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

9 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

9 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

10 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

10 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

15 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

15 hours ago