Andolana originals

ಕೆಂಪಿಸಿದ್ದನ ಹುಂಡಿ ರೈತರಿಂದ ಅನಿರ್ದಿಷ್ಟಾವಧಿ ಧರಣಿ

ಮೈಸೂರು: ಭೂಮಿ ಕಳೆದುಕೊಂಡ ರೈತರ ಕುಟುಂಬದವರಿಗೆ ಉದ್ಯೋಗ ಕೊಡಿಸಲು ವಿಫಲ ವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ರೈತರು ಅನಿ ರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ ಗ್ರಾಮದ ರೈತರ ಭೂಮಿಯನ್ನು ಕೈಗಾರಿಕಾ ಪ್ರದೇಶದ ಅಭಿ ವೃದ್ಧಿಗೆಂದು ಭೂ ಸ್ವಾಧೀನಪಡಿಸಿಕೊಳ್ಳಲಾದ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ರೈತರ ಕುಟುಂಬದ ಸದಸ್ಯರಿಗೆ ಕಾರ್ಖಾನೆಗಳಲ್ಲಿ ಖಾಯಂ ಕೆಲಸ ನೀಡುವುದಾಗಿ ಭರವಸೆ ನೀಡ ಲಾಗಿತ್ತು. ಆದರೆ ಬಹುತೇಕ ಕಾರ್ಖಾನೆಗಳು ಉದ್ಯೋಗವನ್ನು ನೀಡಿರಲಿಲ್ಲ. ರೈತರ ಹಲವಾರು ಹೋರಾಟಗಳ ನಂತರ, ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಕೈಗಾರಿಕೆಗಳ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಸಮಿತಿಯನ್ನು ರಚನೆ ಮಾಡಿದ್ದರು.

ಈ ಸಮಿತಿಯ ಶಿಫಾರಸಿನಂತೆ, ಉದ್ಯೋಗ ನೀಡಬೇಕೆಂದು ಕೆಲವು ಕೈಗಾರಿಕೆಗಳಿಗೆ ಕೆಐಎ ಡಿಬಿಯ ಅಧಿಕಾರಿಗಳು ಪತ್ರವನ್ನು ನೀಡಿದ್ದಾರೆ. ಆದರೆ ಈ ಪತ್ರಗಳಿಗೆ ಕಾರ್ಖಾನೆಗಳು ಸ್ಪಂದಿ ಸುತ್ತಿಲ್ಲ. ಹಾಗಾಗಿ ರೈತರಿಂದ ಭೂಮಿಯನ್ನು ಪಡೆದು ಕೈಗಾರಿಕೆಗಳಿಗೆ ನೀಡಿರುವ ಕೆಐಎಡಿಬಿ ಅಧಿಕಾರಿಗಳು ರೈತರ ಮಕ್ಕಳಿಗೆ ಕೆಲಸ ಕೊಡಿಸ ಬೇಕೆಂದು, ಆ.29ರಂದು ಕೆಐಎಡಿಬಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಹೋರಾಟವನ್ನು ಪ್ರಾರಂಭಿಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಬಂದ ಕೆಐಎಡಿಬಿ ಅಧಿಕಾರಿಗಳು ಸೆ.4ರಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ ರೈತರಿಗೆ ಕೆಲಸ ನೀಡಬೇಕಿರುವ ಕಾರ್ಖಾನೆಗಳ ಪ್ರತಿನಿಧಿಗಳ ಸಭೆಯನ್ನು ನಡೆಸಿ ಉದ್ಯೋಗ ಕೊಡಿಸುವುದಾಗಿ ತಿಳಿಸಿದ್ದರು. ಆ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಸ್ ತೆಗೆದು ಕೊಳ್ಳಲಾ ಗಿತ್ತು. ಆದರೆ ಬುಧವಾರ ನಡೆದ ಸಭೆಯಲ್ಲಿ, ಭೂಮಿ ನೀಡಿದ ರೈತರ ಮಕ್ಕಳಿಗೆ ಉದ್ಯೋಗ ನೀಡುವ ಬಗ್ಗೆ ಯಾವುದೇ ತಿರ್ಮಾನ ವಾಗದ ಕಾರಣ ನ್ಯಾಯ ಸಿಗುವವರೆಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇ ಶಕರ ಕಚೇರಿಯ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ರೈತರು ತೀರ್ಮಾನಿಸಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ರೈತನಾಯಕರಾದ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಎಐಕೆಕೆಎಂಎಸ್ ರೈತ ಸಂಘಟನೆಯ ಜಿಲ್ಲಾ ಸಂಚಾಲಕರಾದ ಬಸವರಾಜು ಎಚ್.ಎಂ ರವರು ವಹಿಸಿದ್ದಾರೆ. ಪ್ರತಿಭಟನೆಯಲ್ಲಿ ರೈತರಾದ ಉಮೇಶ್, ಮಂಜು, ರವಿ, ಮಧು ಹಾಗೆಯೇ ಹೂವಮ್ಮ, ಮಂಜುಳಾ, ಶಿವಮ್ಮ ನಾಗಮ್ಮ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

47 mins ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

2 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

3 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

3 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

4 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

4 hours ago