Andolana originals

ಸತತ 6 ದಿನಗಳ ಷೇರು ಮಾರುಕಟ್ಟೆ ಕುಸಿತಕ್ಕೆ ಬ್ರೇಕ್;‌ ನಿಟ್ಟುಸಿರು ಬಿಟ್ಟ ಹೂಡಿಕೆದಾರರು

ಮುಂಬೈ: ಕಳೆದ ೬ ದಿನಗಳಿಂದ ಕುಸಿತದ ಹಾದಿಯಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಕೊನೆಗೂ ಮಂಗಳವಾರ ತನ್ನ ಕುಸಿತಕ್ಕೆ ಬ್ರೇಕ್ ಹಾಕಿದ್ದು, ಹೂಡಿಕೆದಾರರು ನಿಟ್ಟು ಸಿರು ಬಿಟ್ಟಿದ್ದಾರೆ.

ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭಿಕ ದಿನ ಸೋಮ ವಾರವೂ ಕುಸಿತಕಂಡಿತ್ತು. ಆದರೆ ಮಂಗಳವಾರ ಸತತ ಆರು ದಿನಗಳ ಕುಸಿತಕ್ಕೆ ಬ್ರೇಕ್ ಬಿದ್ದಿದ್ದು, ಮಂಗಳ ವಾರ ಸೆನ್ಸೆಕ್ಸ್ ೫೮೪. ೮೧ ಅಂಕಗಳ ಏರಿಕೆ ಯೊಂದಿಗೆ, ೮೧,೬೩೪. ೮೧ ಅಂಕಗಳಿಗೆ ಏರಿಕೆ ಕಂಡು ದಿನದ ವಹಿವಾಟು ಅಂತ್ಯಗೊಳಿಸಿದೆ.

ಅಂತೆಯೇ ನಿಫ್ಟಿ ಕೂಡ ೨೧೭. ೪೦ ಅಂಕಗಳ ಏರಿಕೆಯೊಂದಿಗೆ ೨೫,೦೧೩. ೧೫ ಅಂಕಗಳಿಗೆ ಏರಿ ವಹಿ ವಾಟು ಅಂತ್ಯಗೊಳಿಸಿದೆ. ಕಳೆ ದೊಂದು ವಾರದಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕದ ಕುಸಿತದಿಂದಾಗಿ ಭಾರತೀಯ ಹೂಡಿಕೆದಾರರು ಬರೋಬ್ಬರಿ ೨೬ ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದರು. ಅಂತೆಯೇ ಬಾಂಬೇ ಸ್ಟಾಕ್ ಎಕ್ಸ್ ಚೇಂಜ್ ಲಿಸ್ಟೆಡ್ ಕಂಪೆನಿಗಳ ಹೂಡಿಕೆ ಮೊತ್ತ ೪೫೨ ಲಕ್ಷ ಕೋಟಿ ರೂ. ಗೆ ಕುಸಿದಿತ್ತು.

ಯಾರಿಗೆ ಲಾಭ? ಯಾರಿಗೆ ನಷ್ಟ?
ಇನ್ನು ಮಂಗಳವಾರದ ವಹಿ ವಾಟಿನಲ್ಲಿ ನಿಫ್ಟಿಯ ಲಿಸ್ಟೆಡ್ ಸಂಸ್ಥೆಗಳಾದ ಟ್ರೆಂಟ್, ಅದಾನಿ ಎಂಟರ್‌ಪ್ರೈಸಸ್,ಅದಾನಿ ಪೋರ್ಟ್ಸ್, ಭಾರತ್ ಎಲೆಕ್ಟ್ರಾ ನಿಕ್ಸ್, ಎಂ – ಎಂ ಸಂಸ್ಥೆಗಳು ಲಾಭಾಂಶಗಳಿಸಿವೆ. ಅಂತೆಯೇ ಟಾಟಾ ಸ್ಟೀಲ್, ಎಸ್‌ಬಿಐ ಲೈಫ್ ಇನ್ಶೂರೆನ್ಸ್, ಟೈಟನ್ ಕಂಪೆನಿ, ಜೆಎಸ್‌ಡಬ್ಲ್ಯು ಸ್ಟೀಲ್ ಮತ್ತು ಬಜಾಜ್ ಫಿನ್‌ಸರ್ವ್ ಸಂಸ್ಥೆಗಳು ನಷ್ಟ ಅನುಭವಿಸಿದವು. ಲೋಹವನ್ನು ಹೊರತುಪಡಿಸಿ, ಇತರ ಎಲ್ಲಾ ವಲಯದ ಸೂಚ್ಯಂಕಗಳು ಅಂದರೆ ಆಟೋ, ಬ್ಯಾಂಕ್, ಆರೋಗ್ಯ, ರಿಯಾಲ್ಟಿ, ಬಂಡವಾಳ ಸರಕುಗಳು, ವಿದ್ಯುತ್, ಟೆಲಿಕಾಂ, ಮಾಧ್ಯಮ ವಲಯದ ಷೇರುಗಳ ಮೌಲ್ಯ ಶೇ. ೧ರಿಂದ ೨ ರಷ್ಟು ಏರಿಕೆಯಾಗಿದೆ.

andolana

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

8 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

9 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

11 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

12 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

15 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

15 hours ago