ಮುಂಬೈ: ಕಳೆದ ೬ ದಿನಗಳಿಂದ ಕುಸಿತದ ಹಾದಿಯಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಕೊನೆಗೂ ಮಂಗಳವಾರ ತನ್ನ ಕುಸಿತಕ್ಕೆ ಬ್ರೇಕ್ ಹಾಕಿದ್ದು, ಹೂಡಿಕೆದಾರರು ನಿಟ್ಟು ಸಿರು ಬಿಟ್ಟಿದ್ದಾರೆ.
ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭಿಕ ದಿನ ಸೋಮ ವಾರವೂ ಕುಸಿತಕಂಡಿತ್ತು. ಆದರೆ ಮಂಗಳವಾರ ಸತತ ಆರು ದಿನಗಳ ಕುಸಿತಕ್ಕೆ ಬ್ರೇಕ್ ಬಿದ್ದಿದ್ದು, ಮಂಗಳ ವಾರ ಸೆನ್ಸೆಕ್ಸ್ ೫೮೪. ೮೧ ಅಂಕಗಳ ಏರಿಕೆ ಯೊಂದಿಗೆ, ೮೧,೬೩೪. ೮೧ ಅಂಕಗಳಿಗೆ ಏರಿಕೆ ಕಂಡು ದಿನದ ವಹಿವಾಟು ಅಂತ್ಯಗೊಳಿಸಿದೆ.
ಅಂತೆಯೇ ನಿಫ್ಟಿ ಕೂಡ ೨೧೭. ೪೦ ಅಂಕಗಳ ಏರಿಕೆಯೊಂದಿಗೆ ೨೫,೦೧೩. ೧೫ ಅಂಕಗಳಿಗೆ ಏರಿ ವಹಿ ವಾಟು ಅಂತ್ಯಗೊಳಿಸಿದೆ. ಕಳೆ ದೊಂದು ವಾರದಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕದ ಕುಸಿತದಿಂದಾಗಿ ಭಾರತೀಯ ಹೂಡಿಕೆದಾರರು ಬರೋಬ್ಬರಿ ೨೬ ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದರು. ಅಂತೆಯೇ ಬಾಂಬೇ ಸ್ಟಾಕ್ ಎಕ್ಸ್ ಚೇಂಜ್ ಲಿಸ್ಟೆಡ್ ಕಂಪೆನಿಗಳ ಹೂಡಿಕೆ ಮೊತ್ತ ೪೫೨ ಲಕ್ಷ ಕೋಟಿ ರೂ. ಗೆ ಕುಸಿದಿತ್ತು.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇನ್ನು ಮಂಗಳವಾರದ ವಹಿ ವಾಟಿನಲ್ಲಿ ನಿಫ್ಟಿಯ ಲಿಸ್ಟೆಡ್ ಸಂಸ್ಥೆಗಳಾದ ಟ್ರೆಂಟ್, ಅದಾನಿ ಎಂಟರ್ಪ್ರೈಸಸ್,ಅದಾನಿ ಪೋರ್ಟ್ಸ್, ಭಾರತ್ ಎಲೆಕ್ಟ್ರಾ ನಿಕ್ಸ್, ಎಂ – ಎಂ ಸಂಸ್ಥೆಗಳು ಲಾಭಾಂಶಗಳಿಸಿವೆ. ಅಂತೆಯೇ ಟಾಟಾ ಸ್ಟೀಲ್, ಎಸ್ಬಿಐ ಲೈಫ್ ಇನ್ಶೂರೆನ್ಸ್, ಟೈಟನ್ ಕಂಪೆನಿ, ಜೆಎಸ್ಡಬ್ಲ್ಯು ಸ್ಟೀಲ್ ಮತ್ತು ಬಜಾಜ್ ಫಿನ್ಸರ್ವ್ ಸಂಸ್ಥೆಗಳು ನಷ್ಟ ಅನುಭವಿಸಿದವು. ಲೋಹವನ್ನು ಹೊರತುಪಡಿಸಿ, ಇತರ ಎಲ್ಲಾ ವಲಯದ ಸೂಚ್ಯಂಕಗಳು ಅಂದರೆ ಆಟೋ, ಬ್ಯಾಂಕ್, ಆರೋಗ್ಯ, ರಿಯಾಲ್ಟಿ, ಬಂಡವಾಳ ಸರಕುಗಳು, ವಿದ್ಯುತ್, ಟೆಲಿಕಾಂ, ಮಾಧ್ಯಮ ವಲಯದ ಷೇರುಗಳ ಮೌಲ್ಯ ಶೇ. ೧ರಿಂದ ೨ ರಷ್ಟು ಏರಿಕೆಯಾಗಿದೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…