Andolana originals

ಸತತ 6 ದಿನಗಳ ಷೇರು ಮಾರುಕಟ್ಟೆ ಕುಸಿತಕ್ಕೆ ಬ್ರೇಕ್;‌ ನಿಟ್ಟುಸಿರು ಬಿಟ್ಟ ಹೂಡಿಕೆದಾರರು

ಮುಂಬೈ: ಕಳೆದ ೬ ದಿನಗಳಿಂದ ಕುಸಿತದ ಹಾದಿಯಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಕೊನೆಗೂ ಮಂಗಳವಾರ ತನ್ನ ಕುಸಿತಕ್ಕೆ ಬ್ರೇಕ್ ಹಾಕಿದ್ದು, ಹೂಡಿಕೆದಾರರು ನಿಟ್ಟು ಸಿರು ಬಿಟ್ಟಿದ್ದಾರೆ.

ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭಿಕ ದಿನ ಸೋಮ ವಾರವೂ ಕುಸಿತಕಂಡಿತ್ತು. ಆದರೆ ಮಂಗಳವಾರ ಸತತ ಆರು ದಿನಗಳ ಕುಸಿತಕ್ಕೆ ಬ್ರೇಕ್ ಬಿದ್ದಿದ್ದು, ಮಂಗಳ ವಾರ ಸೆನ್ಸೆಕ್ಸ್ ೫೮೪. ೮೧ ಅಂಕಗಳ ಏರಿಕೆ ಯೊಂದಿಗೆ, ೮೧,೬೩೪. ೮೧ ಅಂಕಗಳಿಗೆ ಏರಿಕೆ ಕಂಡು ದಿನದ ವಹಿವಾಟು ಅಂತ್ಯಗೊಳಿಸಿದೆ.

ಅಂತೆಯೇ ನಿಫ್ಟಿ ಕೂಡ ೨೧೭. ೪೦ ಅಂಕಗಳ ಏರಿಕೆಯೊಂದಿಗೆ ೨೫,೦೧೩. ೧೫ ಅಂಕಗಳಿಗೆ ಏರಿ ವಹಿ ವಾಟು ಅಂತ್ಯಗೊಳಿಸಿದೆ. ಕಳೆ ದೊಂದು ವಾರದಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕದ ಕುಸಿತದಿಂದಾಗಿ ಭಾರತೀಯ ಹೂಡಿಕೆದಾರರು ಬರೋಬ್ಬರಿ ೨೬ ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದರು. ಅಂತೆಯೇ ಬಾಂಬೇ ಸ್ಟಾಕ್ ಎಕ್ಸ್ ಚೇಂಜ್ ಲಿಸ್ಟೆಡ್ ಕಂಪೆನಿಗಳ ಹೂಡಿಕೆ ಮೊತ್ತ ೪೫೨ ಲಕ್ಷ ಕೋಟಿ ರೂ. ಗೆ ಕುಸಿದಿತ್ತು.

ಯಾರಿಗೆ ಲಾಭ? ಯಾರಿಗೆ ನಷ್ಟ?
ಇನ್ನು ಮಂಗಳವಾರದ ವಹಿ ವಾಟಿನಲ್ಲಿ ನಿಫ್ಟಿಯ ಲಿಸ್ಟೆಡ್ ಸಂಸ್ಥೆಗಳಾದ ಟ್ರೆಂಟ್, ಅದಾನಿ ಎಂಟರ್‌ಪ್ರೈಸಸ್,ಅದಾನಿ ಪೋರ್ಟ್ಸ್, ಭಾರತ್ ಎಲೆಕ್ಟ್ರಾ ನಿಕ್ಸ್, ಎಂ – ಎಂ ಸಂಸ್ಥೆಗಳು ಲಾಭಾಂಶಗಳಿಸಿವೆ. ಅಂತೆಯೇ ಟಾಟಾ ಸ್ಟೀಲ್, ಎಸ್‌ಬಿಐ ಲೈಫ್ ಇನ್ಶೂರೆನ್ಸ್, ಟೈಟನ್ ಕಂಪೆನಿ, ಜೆಎಸ್‌ಡಬ್ಲ್ಯು ಸ್ಟೀಲ್ ಮತ್ತು ಬಜಾಜ್ ಫಿನ್‌ಸರ್ವ್ ಸಂಸ್ಥೆಗಳು ನಷ್ಟ ಅನುಭವಿಸಿದವು. ಲೋಹವನ್ನು ಹೊರತುಪಡಿಸಿ, ಇತರ ಎಲ್ಲಾ ವಲಯದ ಸೂಚ್ಯಂಕಗಳು ಅಂದರೆ ಆಟೋ, ಬ್ಯಾಂಕ್, ಆರೋಗ್ಯ, ರಿಯಾಲ್ಟಿ, ಬಂಡವಾಳ ಸರಕುಗಳು, ವಿದ್ಯುತ್, ಟೆಲಿಕಾಂ, ಮಾಧ್ಯಮ ವಲಯದ ಷೇರುಗಳ ಮೌಲ್ಯ ಶೇ. ೧ರಿಂದ ೨ ರಷ್ಟು ಏರಿಕೆಯಾಗಿದೆ.

andolana

Recent Posts

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

3 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

3 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

3 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

3 hours ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

3 hours ago

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

15 hours ago