ಮುಂಬೈ: ಕಳೆದ ೬ ದಿನಗಳಿಂದ ಕುಸಿತದ ಹಾದಿಯಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಕೊನೆಗೂ ಮಂಗಳವಾರ ತನ್ನ ಕುಸಿತಕ್ಕೆ ಬ್ರೇಕ್ ಹಾಕಿದ್ದು, ಹೂಡಿಕೆದಾರರು ನಿಟ್ಟು ಸಿರು ಬಿಟ್ಟಿದ್ದಾರೆ.
ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭಿಕ ದಿನ ಸೋಮ ವಾರವೂ ಕುಸಿತಕಂಡಿತ್ತು. ಆದರೆ ಮಂಗಳವಾರ ಸತತ ಆರು ದಿನಗಳ ಕುಸಿತಕ್ಕೆ ಬ್ರೇಕ್ ಬಿದ್ದಿದ್ದು, ಮಂಗಳ ವಾರ ಸೆನ್ಸೆಕ್ಸ್ ೫೮೪. ೮೧ ಅಂಕಗಳ ಏರಿಕೆ ಯೊಂದಿಗೆ, ೮೧,೬೩೪. ೮೧ ಅಂಕಗಳಿಗೆ ಏರಿಕೆ ಕಂಡು ದಿನದ ವಹಿವಾಟು ಅಂತ್ಯಗೊಳಿಸಿದೆ.
ಅಂತೆಯೇ ನಿಫ್ಟಿ ಕೂಡ ೨೧೭. ೪೦ ಅಂಕಗಳ ಏರಿಕೆಯೊಂದಿಗೆ ೨೫,೦೧೩. ೧೫ ಅಂಕಗಳಿಗೆ ಏರಿ ವಹಿ ವಾಟು ಅಂತ್ಯಗೊಳಿಸಿದೆ. ಕಳೆ ದೊಂದು ವಾರದಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕದ ಕುಸಿತದಿಂದಾಗಿ ಭಾರತೀಯ ಹೂಡಿಕೆದಾರರು ಬರೋಬ್ಬರಿ ೨೬ ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದರು. ಅಂತೆಯೇ ಬಾಂಬೇ ಸ್ಟಾಕ್ ಎಕ್ಸ್ ಚೇಂಜ್ ಲಿಸ್ಟೆಡ್ ಕಂಪೆನಿಗಳ ಹೂಡಿಕೆ ಮೊತ್ತ ೪೫೨ ಲಕ್ಷ ಕೋಟಿ ರೂ. ಗೆ ಕುಸಿದಿತ್ತು.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇನ್ನು ಮಂಗಳವಾರದ ವಹಿ ವಾಟಿನಲ್ಲಿ ನಿಫ್ಟಿಯ ಲಿಸ್ಟೆಡ್ ಸಂಸ್ಥೆಗಳಾದ ಟ್ರೆಂಟ್, ಅದಾನಿ ಎಂಟರ್ಪ್ರೈಸಸ್,ಅದಾನಿ ಪೋರ್ಟ್ಸ್, ಭಾರತ್ ಎಲೆಕ್ಟ್ರಾ ನಿಕ್ಸ್, ಎಂ – ಎಂ ಸಂಸ್ಥೆಗಳು ಲಾಭಾಂಶಗಳಿಸಿವೆ. ಅಂತೆಯೇ ಟಾಟಾ ಸ್ಟೀಲ್, ಎಸ್ಬಿಐ ಲೈಫ್ ಇನ್ಶೂರೆನ್ಸ್, ಟೈಟನ್ ಕಂಪೆನಿ, ಜೆಎಸ್ಡಬ್ಲ್ಯು ಸ್ಟೀಲ್ ಮತ್ತು ಬಜಾಜ್ ಫಿನ್ಸರ್ವ್ ಸಂಸ್ಥೆಗಳು ನಷ್ಟ ಅನುಭವಿಸಿದವು. ಲೋಹವನ್ನು ಹೊರತುಪಡಿಸಿ, ಇತರ ಎಲ್ಲಾ ವಲಯದ ಸೂಚ್ಯಂಕಗಳು ಅಂದರೆ ಆಟೋ, ಬ್ಯಾಂಕ್, ಆರೋಗ್ಯ, ರಿಯಾಲ್ಟಿ, ಬಂಡವಾಳ ಸರಕುಗಳು, ವಿದ್ಯುತ್, ಟೆಲಿಕಾಂ, ಮಾಧ್ಯಮ ವಲಯದ ಷೇರುಗಳ ಮೌಲ್ಯ ಶೇ. ೧ರಿಂದ ೨ ರಷ್ಟು ಏರಿಕೆಯಾಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…