Andolana originals

ಸತತ 6 ದಿನಗಳ ಷೇರು ಮಾರುಕಟ್ಟೆ ಕುಸಿತಕ್ಕೆ ಬ್ರೇಕ್;‌ ನಿಟ್ಟುಸಿರು ಬಿಟ್ಟ ಹೂಡಿಕೆದಾರರು

ಮುಂಬೈ: ಕಳೆದ ೬ ದಿನಗಳಿಂದ ಕುಸಿತದ ಹಾದಿಯಲ್ಲಿ ಸಾಗಿದ್ದ ಭಾರತೀಯ ಷೇರುಮಾರುಕಟ್ಟೆ ಕೊನೆಗೂ ಮಂಗಳವಾರ ತನ್ನ ಕುಸಿತಕ್ಕೆ ಬ್ರೇಕ್ ಹಾಕಿದ್ದು, ಹೂಡಿಕೆದಾರರು ನಿಟ್ಟು ಸಿರು ಬಿಟ್ಟಿದ್ದಾರೆ.

ಭಾರತೀಯ ಷೇರುಮಾರುಕಟ್ಟೆ ವಾರದ ಆರಂಭಿಕ ದಿನ ಸೋಮ ವಾರವೂ ಕುಸಿತಕಂಡಿತ್ತು. ಆದರೆ ಮಂಗಳವಾರ ಸತತ ಆರು ದಿನಗಳ ಕುಸಿತಕ್ಕೆ ಬ್ರೇಕ್ ಬಿದ್ದಿದ್ದು, ಮಂಗಳ ವಾರ ಸೆನ್ಸೆಕ್ಸ್ ೫೮೪. ೮೧ ಅಂಕಗಳ ಏರಿಕೆ ಯೊಂದಿಗೆ, ೮೧,೬೩೪. ೮೧ ಅಂಕಗಳಿಗೆ ಏರಿಕೆ ಕಂಡು ದಿನದ ವಹಿವಾಟು ಅಂತ್ಯಗೊಳಿಸಿದೆ.

ಅಂತೆಯೇ ನಿಫ್ಟಿ ಕೂಡ ೨೧೭. ೪೦ ಅಂಕಗಳ ಏರಿಕೆಯೊಂದಿಗೆ ೨೫,೦೧೩. ೧೫ ಅಂಕಗಳಿಗೆ ಏರಿ ವಹಿ ವಾಟು ಅಂತ್ಯಗೊಳಿಸಿದೆ. ಕಳೆ ದೊಂದು ವಾರದಲ್ಲಿ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕದ ಕುಸಿತದಿಂದಾಗಿ ಭಾರತೀಯ ಹೂಡಿಕೆದಾರರು ಬರೋಬ್ಬರಿ ೨೬ ಲಕ್ಷ ಕೋಟಿ ರೂ. ನಷ್ಟ ಅನುಭವಿಸಿದ್ದರು. ಅಂತೆಯೇ ಬಾಂಬೇ ಸ್ಟಾಕ್ ಎಕ್ಸ್ ಚೇಂಜ್ ಲಿಸ್ಟೆಡ್ ಕಂಪೆನಿಗಳ ಹೂಡಿಕೆ ಮೊತ್ತ ೪೫೨ ಲಕ್ಷ ಕೋಟಿ ರೂ. ಗೆ ಕುಸಿದಿತ್ತು.

ಯಾರಿಗೆ ಲಾಭ? ಯಾರಿಗೆ ನಷ್ಟ?
ಇನ್ನು ಮಂಗಳವಾರದ ವಹಿ ವಾಟಿನಲ್ಲಿ ನಿಫ್ಟಿಯ ಲಿಸ್ಟೆಡ್ ಸಂಸ್ಥೆಗಳಾದ ಟ್ರೆಂಟ್, ಅದಾನಿ ಎಂಟರ್‌ಪ್ರೈಸಸ್,ಅದಾನಿ ಪೋರ್ಟ್ಸ್, ಭಾರತ್ ಎಲೆಕ್ಟ್ರಾ ನಿಕ್ಸ್, ಎಂ – ಎಂ ಸಂಸ್ಥೆಗಳು ಲಾಭಾಂಶಗಳಿಸಿವೆ. ಅಂತೆಯೇ ಟಾಟಾ ಸ್ಟೀಲ್, ಎಸ್‌ಬಿಐ ಲೈಫ್ ಇನ್ಶೂರೆನ್ಸ್, ಟೈಟನ್ ಕಂಪೆನಿ, ಜೆಎಸ್‌ಡಬ್ಲ್ಯು ಸ್ಟೀಲ್ ಮತ್ತು ಬಜಾಜ್ ಫಿನ್‌ಸರ್ವ್ ಸಂಸ್ಥೆಗಳು ನಷ್ಟ ಅನುಭವಿಸಿದವು. ಲೋಹವನ್ನು ಹೊರತುಪಡಿಸಿ, ಇತರ ಎಲ್ಲಾ ವಲಯದ ಸೂಚ್ಯಂಕಗಳು ಅಂದರೆ ಆಟೋ, ಬ್ಯಾಂಕ್, ಆರೋಗ್ಯ, ರಿಯಾಲ್ಟಿ, ಬಂಡವಾಳ ಸರಕುಗಳು, ವಿದ್ಯುತ್, ಟೆಲಿಕಾಂ, ಮಾಧ್ಯಮ ವಲಯದ ಷೇರುಗಳ ಮೌಲ್ಯ ಶೇ. ೧ರಿಂದ ೨ ರಷ್ಟು ಏರಿಕೆಯಾಗಿದೆ.

andolana

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

7 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

12 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

18 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago