Andolana originals

ಜಾಮೀನು ದೊರೆತರೂ ಬಿಡುಗಡೆ ಭಾಗ್ಯ ಇಲ್ಲ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಜೈಲಿನಲ್ಲಿರುವ 46 ಜನರಿಗೆ ಕೊಳ್ಳೇಗಾಲದ ಹೆಚ್ಚುವರಿ ಸಿವಿಲ್ ಸೆಷನ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ 46 ಜನರ ಮೂರು ಮೇಲೆ ಇಂಡಿಗನತ್ತ ಮತಗಟ್ಟೆ ಧ್ವಂಸ, ಹಲ್ಲೆ ಪ್ರಕರಣದಲ್ಲಿ 46 ಮಂದಿಗೆ ಜಾಮೀನು ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿತ್ತು. ಅದರಲ್ಲಿ ಮತಗಟ್ಟೆ ಬಹಿಷ್ಠಾರ, ಗಲಭೆ, ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬುಧವಾರ ನ್ಯಾಯಾಧೀಶರಾದ ಲೋಕಪ್ಪ ಅವರು 46 ಜನರಿಗೆ ಜಾಮೀನು ನೀಡಿದ್ದಾರೆ.

ಆದರೆ ಕೊಲೆ ಯತ್ನ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಇವರಿಗೆ ಜಾಮೀನು ಸಿಗಬೇಕಾದ್ದರಿಂದ ಜೈಲಿನಿಂದ ಇನ್ನೂ ಬಿಡುಗಡೆಯಾಗಿಲ್ಲ.

46 ಜನ ಆರೋಪಿಗಳ ಪೈಕಿ 20 ಮಹಿಳೆಯರು ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದಾರೆ. 26 ಚಾಮರಾಜನಗರದ ಜೈಲಿನಲ್ಲಿದ್ದಾರೆ. ಇವರ ಪರ ವಕೀಲ ಶಶಿಬಿಂಬ ಅವರು ಕೊಳ್ಳೇಗಾಲದ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿ ವಾದ ಮಂಡಿಸಿದ್ದರು. ಏಪ್ರಿಲ್ 26ರ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧ ಮತಗಟ್ಟೆ ಅಧಿಕಾರಿ ಬಸವಣ್ಣ ಅವರು ಇವಿಎಂ ನಾಶ, ಹಲ್ಲೆ ಮತ್ತು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಗ್ರಾಮಸ್ಥರ ವಿರುದ್ಧ ದೂರು ದಾಖಲಿಸಿದ್ದರು. ತಹಸೀಲ್ದಾರ್ ಗುರುಪ್ರಸಾದ್ ಅವರು, 200ರಿಂದ 250 ಮಂದಿ ಅಕ್ರಮವಾಗಿ ಗುಂಪುಗೂಡಿ ಗಲಭೆ ಎಬ್ಬಿಸಿರುವ ಬಗ್ಗೆ ದೂರು ನೀಡಿದ್ದರು.

andolana

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

49 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

1 hour ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

2 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

2 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

2 hours ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago