Andolana originals

ಜಾಮೀನು ದೊರೆತರೂ ಬಿಡುಗಡೆ ಭಾಗ್ಯ ಇಲ್ಲ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಜೈಲಿನಲ್ಲಿರುವ 46 ಜನರಿಗೆ ಕೊಳ್ಳೇಗಾಲದ ಹೆಚ್ಚುವರಿ ಸಿವಿಲ್ ಸೆಷನ್ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಸಂಬಂಧ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ 46 ಜನರ ಮೂರು ಮೇಲೆ ಇಂಡಿಗನತ್ತ ಮತಗಟ್ಟೆ ಧ್ವಂಸ, ಹಲ್ಲೆ ಪ್ರಕರಣದಲ್ಲಿ 46 ಮಂದಿಗೆ ಜಾಮೀನು ಪ್ರಕರಣಗಳನ್ನು ಪ್ರತ್ಯೇಕವಾಗಿ ದಾಖಲಿಸಲಾಗಿತ್ತು. ಅದರಲ್ಲಿ ಮತಗಟ್ಟೆ ಬಹಿಷ್ಠಾರ, ಗಲಭೆ, ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬುಧವಾರ ನ್ಯಾಯಾಧೀಶರಾದ ಲೋಕಪ್ಪ ಅವರು 46 ಜನರಿಗೆ ಜಾಮೀನು ನೀಡಿದ್ದಾರೆ.

ಆದರೆ ಕೊಲೆ ಯತ್ನ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಇವರಿಗೆ ಜಾಮೀನು ಸಿಗಬೇಕಾದ್ದರಿಂದ ಜೈಲಿನಿಂದ ಇನ್ನೂ ಬಿಡುಗಡೆಯಾಗಿಲ್ಲ.

46 ಜನ ಆರೋಪಿಗಳ ಪೈಕಿ 20 ಮಹಿಳೆಯರು ಮೈಸೂರಿನ ಕೇಂದ್ರ ಕಾರಾಗೃಹದಲ್ಲಿದ್ದಾರೆ. 26 ಚಾಮರಾಜನಗರದ ಜೈಲಿನಲ್ಲಿದ್ದಾರೆ. ಇವರ ಪರ ವಕೀಲ ಶಶಿಬಿಂಬ ಅವರು ಕೊಳ್ಳೇಗಾಲದ ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿ ವಾದ ಮಂಡಿಸಿದ್ದರು. ಏಪ್ರಿಲ್ 26ರ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧ ಮತಗಟ್ಟೆ ಅಧಿಕಾರಿ ಬಸವಣ್ಣ ಅವರು ಇವಿಎಂ ನಾಶ, ಹಲ್ಲೆ ಮತ್ತು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಆರೋಪದಡಿ ಗ್ರಾಮಸ್ಥರ ವಿರುದ್ಧ ದೂರು ದಾಖಲಿಸಿದ್ದರು. ತಹಸೀಲ್ದಾರ್ ಗುರುಪ್ರಸಾದ್ ಅವರು, 200ರಿಂದ 250 ಮಂದಿ ಅಕ್ರಮವಾಗಿ ಗುಂಪುಗೂಡಿ ಗಲಭೆ ಎಬ್ಬಿಸಿರುವ ಬಗ್ಗೆ ದೂರು ನೀಡಿದ್ದರು.

andolana

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

10 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

11 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

11 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

12 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

12 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

15 hours ago