ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮಸ್ಥರು ಬುಧವಾರ, ನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡುತ್ತಿರುವ ಕೆರೆಯ ಕೂಲಿ ಕೆಲಸಕ್ಕೆ ಹೋಗುವುದರ ಮೂಲಕ ಒಂದು ತಿಂಗಳ ಕಾಲ ನಡೆದ ಜಂಜಾಟದಿಂದ ಹೊರ ಬಂದಿದ್ದಾರೆ. ಇಂಡಿಗನತ್ತ ಗ್ರಾಮಕ್ಕೆ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು.
ಆದರೂ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದರಿಂದ ಕೆಲವು ಅಹಿತಕರ ಘಟನೆಗಳು ನಡೆದು ಅಧಿಕಾರಿಗಳು ಹಾಗೂ ಮೆಂದಾರೆ ಗ್ರಾಮದವರ ಮೇಲೆ ಹಲ್ಲೆ ನಡೆಸಿ ಮತಗಟ್ಟೆ ಧ್ವಂಸ ಮಾಡಲಾಗಿತ್ತು. ಘಟನೆ ಸಂಬಂಧ 200ಕ್ಕೂ ಹೆಚ್ಚು ಜನರ ಮೇಲೆ ಪ್ರತ್ಯೇಕ 3 ಪ್ರಕರಣಗಳು ದಾಖಲಾಗಿದ್ದು, ಮಹಿಳೆಯರು ಹಾಗೂ ಪುರುಷರು ಸೇರಿದಂತೆ 46 ಜನರು ಬಂಧಿತರಾಗಿದ್ದರು.
ನಂತರ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ಬಿ.ವೆಂಕಟೇಶ್ ಹಾಗೂ ಬೇಡಗಂಪಣ ಸಮಾಜದವರ ನೆರವಿನಿಂದ 46 ಜನರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಿಸಲಾಯಿತು. ತಮ್ಮ ಗ್ರಾಮಸ್ಥರ ಮೇಲೆ ಪ್ರಕರಣ ದಾಖಲಾದ ನಂತರ ಕೆಲವರು ಭಯದಿಂದ ತಲೆಮರೆಸಿಕೊಂಡಿದ್ದರು. ಇಂಡಿಗನತ್ತ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು, ಇನ್ನಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಗ್ರಾಮದವರ ಸಭೆ ನಡೆಸಿ ಧೈರ್ಯ ತುಂಬಿದ್ದರು. ಇದೀಗ ಗ್ರಾಮಸ್ಥರು ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ ಕಹಿ ಘಟನೆಯನ್ನು ಮರೆತು ಮತ್ತೆ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಜಿಲ್ಲಾಡಳಿತಕ್ಕೆ ಕೊಂಚ ನೆಮ್ಮದಿ ತಂದಿದೆ. ಪಿಡಿಒ ಕಿರಣ್ ಮಾತನಾಡಿ, ಇಂಡಿಗನತ್ತ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದು, ಬುಧವಾರದಿಂದ 26 ಮಹಿಳೆಯರು ಹಾಗೂ 10 ಪುರುಷರು ಕೆಲಸಕ್ಕೆ ಬರುತ್ತಿದ್ದಾರೆ. ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾರವರ ಸೂಚನೆಯಂತೆ ಜಾಬ್ ಕಾರ್ಡ್ ಹೊಂದಿರುವ ಗ್ರಾಮಸ್ಥರಿಗೆ ನೂರು ದಿನಗಳ ಕೆಲಸ ಕೊಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ನರೇಗಾ ಕೂಲಿ ಕೆಲಸಕ್ಕೆ ಆಗಮಿಸಿದ್ದವರ ಪೈಕಿ ನ್ಯಾಯಾಂಗ ಬಂಧನದಿಂದ ಜಾಮೀನು ಪಡೆದು ಬಂದಿರುವ ಐವರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿದ್ದಾರೆ. ಮೆಂದಾರೆ ಗ್ರಾಮದವರೂ ಇಂಡಿಗನತ್ತ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ಬರುವುದಾಗಿ ತಿಳಿಸಿದ್ದು, ಅವರಿಗೂ ನರೇಗಾದಡಿ ಕೆಲಸ ನೀಡಲಾಗುವುದು. – ಕಿರಣ್, ಪಿಡಿಒ
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…