Andolana originals

ಕೂಲಿಗೆ ಮರಳಿದ ಇಂಡಿಗನತ್ತ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮಸ್ಥರು ಬುಧವಾರ, ನರೇಗಾ ಯೋಜನೆಯಡಿ ಅಭಿವೃದ್ಧಿ ಮಾಡುತ್ತಿರುವ ಕೆರೆಯ ಕೂಲಿ ಕೆಲಸಕ್ಕೆ ಹೋಗುವುದರ ಮೂಲಕ ಒಂದು ತಿಂಗಳ ಕಾಲ ನಡೆದ ಜಂಜಾಟದಿಂದ ಹೊರ ಬಂದಿದ್ದಾರೆ. ಇಂಡಿಗನತ್ತ ಗ್ರಾಮಕ್ಕೆ ಮೂಲಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿ ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು.

ಆದರೂ ಚುನಾವಣೆ ನಡೆಸಲು ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದರಿಂದ ಕೆಲವು ಅಹಿತಕರ ಘಟನೆಗಳು ನಡೆದು ಅಧಿಕಾರಿಗಳು ಹಾಗೂ ಮೆಂದಾರೆ ಗ್ರಾಮದವರ ಮೇಲೆ ಹಲ್ಲೆ ನಡೆಸಿ ಮತಗಟ್ಟೆ ಧ್ವಂಸ ಮಾಡಲಾಗಿತ್ತು. ಘಟನೆ ಸಂಬಂಧ 200ಕ್ಕೂ ಹೆಚ್ಚು ಜನರ ಮೇಲೆ ಪ್ರತ್ಯೇಕ 3 ಪ್ರಕರಣಗಳು ದಾಖಲಾಗಿದ್ದು, ಮಹಿಳೆಯರು ಹಾಗೂ ಪುರುಷರು ಸೇರಿದಂತೆ 46 ಜನರು ಬಂಧಿತರಾಗಿದ್ದರು.

ನಂತರ ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ಬಿ.ವೆಂಕಟೇಶ್ ಹಾಗೂ ಬೇಡಗಂಪಣ ಸಮಾಜದವರ ನೆರವಿನಿಂದ 46 ಜನರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಿಸಲಾಯಿತು. ತಮ್ಮ ಗ್ರಾಮಸ್ಥರ ಮೇಲೆ ಪ್ರಕರಣ ದಾಖಲಾದ ನಂತರ ಕೆಲವರು ಭಯದಿಂದ ತಲೆಮರೆಸಿಕೊಂಡಿದ್ದರು. ಇಂಡಿಗನತ್ತ ಗ್ರಾಮಕ್ಕೆ ಜಿಲ್ಲಾಧಿಕಾರಿಗಳು, ಇನ್ನಿತರ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಗ್ರಾಮದವರ ಸಭೆ ನಡೆಸಿ ಧೈರ್ಯ ತುಂಬಿದ್ದರು. ಇದೀಗ ಗ್ರಾಮಸ್ಥರು ಚುನಾವಣೆ ಸಂದರ್ಭದಲ್ಲಿ ಸಂಭವಿಸಿದ ಕಹಿ ಘಟನೆಯನ್ನು ಮರೆತು ಮತ್ತೆ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಜಿಲ್ಲಾಡಳಿತಕ್ಕೆ ಕೊಂಚ ನೆಮ್ಮದಿ ತಂದಿದೆ. ಪಿಡಿಒ ಕಿರಣ್ ಮಾತನಾಡಿ, ಇಂಡಿಗನತ್ತ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆರೆ ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದು, ಬುಧವಾರದಿಂದ 26 ಮಹಿಳೆಯರು ಹಾಗೂ 10 ಪುರುಷರು ಕೆಲಸಕ್ಕೆ ಬರುತ್ತಿದ್ದಾರೆ. ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾರವರ ಸೂಚನೆಯಂತೆ ಜಾಬ್ ಕಾರ್ಡ್ ಹೊಂದಿರುವ ಗ್ರಾಮಸ್ಥರಿಗೆ ನೂರು ದಿನಗಳ ಕೆಲಸ ಕೊಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನರೇಗಾ ಕೂಲಿ ಕೆಲಸಕ್ಕೆ ಆಗಮಿಸಿದ್ದವರ ಪೈಕಿ ನ್ಯಾಯಾಂಗ ಬಂಧನದಿಂದ ಜಾಮೀನು ಪಡೆದು ಬಂದಿರುವ ಐವರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿದ್ದಾರೆ. ಮೆಂದಾರೆ ಗ್ರಾಮದವರೂ ಇಂಡಿಗನತ್ತ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ಬರುವುದಾಗಿ ತಿಳಿಸಿದ್ದು, ಅವರಿಗೂ ನರೇಗಾದಡಿ ಕೆಲಸ ನೀಡಲಾಗುವುದು. – ಕಿರಣ್, ಪಿಡಿಒ

andolana

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

12 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

12 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

13 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

14 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

14 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

17 hours ago