Andolana originals

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ

ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್‌ಗಳು ಪೂರೈಕೆಯಾಗದೆ ಸಮಸ್ಯೆ ಮುಂದುವರಿದಿದೆ. ಪೂರೈಕೆಯಾಗಿರುವ ಸಿಲಿಂಡರ್‌ಗಳಲ್ಲಿಯೇ ನಿರ್ವಹಣೆ ಕಷ್ಟಕರವಾಗುತ್ತಿದೆ.

ಇರಾನ್ ಮೇಲೆ ಇಸ್ರೇಲ್ -ಅಮೆರಿಕ ಸಮರ ಸಾರಿರುವ ಹಿನ್ನೆಲೆಯಲ್ಲಿ ಅನಿಲ ಸಮಸ್ಯೆ ಮುಂದುವರಿದಿದೆ. ಜಿಲ್ಲೆಯಲ್ಲಿ ಗೃಹಬಳಕೆಯ ಸಿಲಿಂಡರ್ ಪೂರೈಕೆ ಸಮರ್ಪಕವಾಗಿದೆ. ಆದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ದೊರೆಯದೆ ಹೋಟೆಲ್, ರೆಸಾರ್ಟ್ ಸೇರಿದಂತೆ ವಿವಿಧ ಉದ್ಯಮಗಳು ನಷ್ಟ ಅನುಭವಿಸುವಂತಾಗಿದೆ.

ಸಿಲಿಂಡರ್ ಪೂರೈಕೆಯಾಗದೆ ಕೆಲವು ಹೋಟೆಲ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಕೆಲವು ಹೋಟೆಲ್‌ಗಳಲ್ಲಿ ತಿಂಡಿ ತಿನಿಸುಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಮೊದಲು ೧೦ಕ್ಕೂ ವಿಧದ ಬಗೆಯ ತಿಂಡಿ ಮಾಡುತ್ತಿದ್ದ ಹೋಟೆಲ್‌ಗಳಲ್ಲಿ ಈಗ ೫ ಬಗೆಯ ತಿನಿಸುಗಳನ್ನು ಮಾತ್ರ ಮಾಡಲಾಗುತ್ತಿದೆ. ಕಡಿಮೆ ಅನಿಲದಲ್ಲಿ ತಯಾರಾಗುವ ತಿನಿಸು ಗಳ ಮೊರೆ ಹೋಗಲಾಗಿದೆ. ಇರುವ ಸಿಲಿಂಡರ್‌ಗಳನ್ನು ಮಿತವಾಗಿ ಬಳಸಲು ನಿರ್ಧರಿಸಲಾಗಿದೆ.

ಅಡುಗೆ ಅನಿಲ ಕೊರತೆಯಿಂದ ಪ್ರವಾಸೋದ್ಯಮದ ಮೇಲೂ ವ್ಯತಿರಿಕ್ತ ಪರಿಣಾಮ ಬೀರಿದೆ. ಸದ್ಯ ಈಗ ಪರೀಕ್ಷೆಯ ಸಮಯವೂ ಆಗಿರುವುದರಿಂದ ಪ್ರವಾಸಿಗರ ಸಂಖ್ಯೆ ಕಡಿಮೆ ಇದೆ. ಈ ತಿಂಗಳ ಅಂತ್ಯಕ್ಕೆ ಬಹುತೇಕ ಪರೀಕ್ಷೆಗಳು ಮುಕ್ತಾಯವಾಗಲಿದ್ದು, ಬೇಸಿಗೆ ಪ್ರವಾಸೋದ್ಯಮ ಮತ್ತೆ ತೆರೆದುಕೊಳ್ಳಲಿದೆ. ಆ ವೇಳೆಗೆ ಇದೇ ಪರಿಸ್ಥಿತಿ ಮುಂದುವರೆದಲ್ಲಿ ಮತ್ತಷ್ಟು ಸಮಸ್ಯೆ ಎದುರಾಗಲಿದೆ.

ಇಂದಿರಾ ಕ್ಯಾಂಟೀನ್‌ಗಳಿಗೂ ಅಡುಗೆ ಅನಿಲ ಕೊರತೆಯ ಬಿಸಿ ತಟ್ಟಿದೆ. ಮೊದಲು ಬೆಳಿಗ್ಗೆ ೨ ವಿಧದ ತಿನಿಸು ನೀಡಲಾಗುತ್ತಿತ್ತು. ಆದರೆ, ಈಗ ಅಡುಗೆ ಅನಿಲ ಸಮರ್ಪಕವಾಗಿ ಪೂರೈಕೆಯಾಗದಿರುವುದರಿಂದ ಒಂದೇ ಬಗೆಯ ತಿನಿಸು ತಯಾರಿ ಮಾಡಲಾಗುತ್ತಿದೆ. ನಗರದಲ್ಲಿ ಸದ್ಯಕ್ಕೆ ಸಾಕಾಗುವಷ್ಟು ಅಡುಗೆ ಅನಿಲವಿದ್ದು, ಸಕಾಲದಲ್ಲಿ ಪೂರೈಕೆಯಾಗದಿದ್ದಲ್ಲಿ ಸಮಸ್ಯೆಯಾಗಲಿದೆ.

” ಕಳೆದ ೩-೪ ದಿನಗಳಿಂದ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಾಗಿಲ್ಲ. ಬಂದ ತಕ್ಷಣ ಗ್ರಾಹಕರಿಗೆ ತಲುಪಿಸುವ ಕೆಲಸ ಮಾಡಲಾಗುತ್ತದೆ. ಸಾಕಷ್ಟು ಮಂದಿ ವಾಣಿಜ್ಯ ಬಳಕೆಯ ಸಿಲಿಂಡರ್ ಗಳನ್ನು ಕೇಳುತ್ತಿದ್ದು, ಬಂದ ತಕ್ಷಣ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ.”

-ಕುಶಾಲ್, ಗ್ಯಾಸ್ ವಿತರಕರು, ಮಡಿಕೇರಿ

” ಇಂದಿರಾ ಕ್ಯಾಂಟೀನ್‌ಗಳಲ್ಲಿ ಅಡುಗೆ ಅನಿಲದ ಕೊರತೆಯಿಂದ ಉಪಾಹಾರ ತಿನಿಸಿನ ಸಂಖ್ಯೆ ಕಡಿಮೆ ಮಾಡಲಾಗಿದೆ. ಮೊದಲು ೨ ವಿಧದ ತಿನಿಸು ನೀಡಲಾಗುತ್ತಿತ್ತು. ಈಗ ಒಂದೇ ಬಗೆಯ ತಿನಿಸು ಮಾಡಲಾಗುತ್ತಿದೆ. ಹಸಿದು ಕ್ಯಾಂಟೀನ್ಗೆ ಬರುವವರಿಗೆ ಊಟ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಇರುವ ಸಿಲಿಂಡರ್‌ಗಳನ್ನು  ಬಳಸಲಾಗುತ್ತಿದ್ದು, ಶೀಘ್ರದಲ್ಲಿ ಸಿಲಿಂಡರ್ ಪೂರೈಕೆಯಾಗದಿದ್ದಲ್ಲಿ ಸಮಸ್ಯೆಯಾಗಲಿದೆ.”

-ರಮೇಶ್, ಪೌರಾಯುಕ್ತರು, ಮಡಿಕೇರಿ

” ವಾಣಿಜ್ಯ ಅನಿಲ ಪೂರೈಕೆಯಾಗದೆ ಸಮಸ್ಯೆ ಮುಂದುವರಿದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಲಾಗಿದೆ. ಆದರೆ, ವಾಣಿಜ್ಯ ಸಿಲಿಂಡರ್ ಪೂರೈಕೆಯಾಗಿರುವ ಮಾಹಿತಿ ದೊರೆತಿಲ್ಲ. ಈಗಾಗಲೇ ಪ್ರವಾಸೋದ್ಯಮದ ಮೇಲೆ ಸಾಕಷ್ಟು ಪರಿಣಾಮ ಬೀರಿದ್ದು, ಶೀಘ್ರದಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆಯಾಗದಿದ್ದಲ್ಲಿ ಮತ್ತಷ್ಟು ಸಮಸ್ಯೆಯಾಗಲಿದೆ.”

-ದಿನೇಶ್ ಕಾರ್ಯಪ್ಪ, ಅಧ್ಯಕ್ಷರು, ಕೂರ್ಗ್ ಹೋಟೆಲ್, ರೆಸಾರ್ಟ್ ಅಸೋಸಿಯೇಷನ್‌ 

” ವಾಣಿಜ್ಯ ಅಡುಗೆ ಅನಿಲ ಕೊರತೆಯಿಂದ ಕೊಡಗು ಜಿಲ್ಲೆಯ ಶಾಲೆಗಳಲ್ಲಿ ಯಾವುದೇ ಸಮಸ್ಯೆಯಾಗಿಲ್ಲ. ಬಿಸಿಯೂಟ ವಿತರಣೆಯಲ್ಲಿಯೂ ಯಾವುದೇ ಸಮಸ್ಯೆಯಾಗಿಲ್ಲ.”

-ಬಸವರಾಜು, ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ

 

 

ಆಂದೋಲನ ಡೆಸ್ಕ್

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 days ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 days ago