Andolana originals

ಅರಮನೆ ಒಳಾಂಗಣದಲ್ಲಿ ದಸರಾ ತಯಾರಿ ಆರಂಭ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನವರಾತ್ರಿ ವೇಳೆ ನಡೆ ಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದೆ. ಅದಕ್ಕಾಗಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದೆ.

ಪ್ರಮುಖವಾಗಿ ಅರಮನೆಯ ದರ್ಬಾರ್ ಹಾಲ್, ಗ್ಯಾಲರಿ, ಆನೆ ಬಾಗಿಲಿನ ಬಳಿಯ ಮೇಲ್ಚಾವಣಿ ಸೇರಿದಂತೆ ಒಳಾವರಣದಲ್ಲಿ ಅಗತ್ಯವಿದ್ದೆಡೆ ಬಣ್ಣ ಬಳಿಯುವ ಹಾಗೂ ವಿದ್ಯುತ್ ದೀಪಗಳ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಬಣ್ಣದ ಕೆಲಸ ಮತ್ತು ವಿದ್ಯುತ್ ಬಲ್ಬ್ ಬದಲಿಸುವುದಕ್ಕಾಗಿ ಕಾಲಾವಧಿ ಕಟ್ಟಲಾಗುತ್ತಿದ್ದು, ೧೫ ದಿನದೊಳಗೆ ಅರಮನೆ ಒಳಾವರಣದಲ್ಲಿ ದಸರಾ ಸಿದ್ಧತಾ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಅರಮನೆ ಆವರಣದಲ್ಲಿರುವ ವಿವಿಧ ಉದ್ಯಾನವನಲ್ಲಿ ಕಳೆ ಗಿಡ ತೆರವು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ ಅರಮನೆ ಮುಂಭಾಗದ ಪಾರ್ಕ್‌ನಲ್ಲಿ ಕಳೆ ಗಿಡಗಳನ್ನು ತೆರವು ಮಾಡಿ ಹೂವಿನ ಜೋಡಣೆ ಮಾಡಲು ನೆಲ ಅಗೆದು ಹದ ಮಾಡಲಾಗುತ್ತಿದೆ. ಅಲ್ಲದೆ, ಪಾರ್ಕ್‌ನಲ್ಲಿರುವ ವಿದ್ಯುತ್ ದೀಪಗಳ ಕಂಬಗಳಿಗೆ ಬಣ್ಣ ಬಳಿಯುವ ಕಾರ್ಯಕ್ಕೂ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

 

andolana

Recent Posts

ಕಥೆಗಾರ್ತಿ, ಖ್ಯಾತ ಅನುವಾದಕಿ ಸರಿತಾ ಜ್ಞಾನಾನಂದ ನಿಧನ

ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್‌.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು…

10 mins ago

ಹಿರಿಯೂರು ಬಸ್‌ ದುರಂತ ಪ್ರಕರಣ: ರಾಜ್ಯ ಸರ್ಕಾರ ಫುಲ್‌ ಅಲರ್ಟ್‌

ಬೆಂಗಳೂರು: ಹೊಸ ವರ್ಷ ಹಾಗೂ ಕ್ರಿಸ್‌ಮಸ್‌ ಸಂಭ್ರಮದ ಮಧ್ಯೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಬಸ್‌ ಅಪಘಾತ ಇಡೀ…

15 mins ago

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ…

46 mins ago

ಮೈಸೂರು ಜಿಲ್ಲೆಯಲ್ಲಿ ಮತ್ತೊಂದು ಚಿರತೆ ಸೆರೆ

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.…

2 hours ago

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ ಪ್ರಕರಣಗಳು: ಕಂಗಾಲಾದ ರೈತರು

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ…

2 hours ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ…

2 hours ago