ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನವರಾತ್ರಿ ವೇಳೆ ನಡೆ ಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದೆ. ಅದಕ್ಕಾಗಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದೆ.
ಪ್ರಮುಖವಾಗಿ ಅರಮನೆಯ ದರ್ಬಾರ್ ಹಾಲ್, ಗ್ಯಾಲರಿ, ಆನೆ ಬಾಗಿಲಿನ ಬಳಿಯ ಮೇಲ್ಚಾವಣಿ ಸೇರಿದಂತೆ ಒಳಾವರಣದಲ್ಲಿ ಅಗತ್ಯವಿದ್ದೆಡೆ ಬಣ್ಣ ಬಳಿಯುವ ಹಾಗೂ ವಿದ್ಯುತ್ ದೀಪಗಳ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಬಣ್ಣದ ಕೆಲಸ ಮತ್ತು ವಿದ್ಯುತ್ ಬಲ್ಬ್ ಬದಲಿಸುವುದಕ್ಕಾಗಿ ಕಾಲಾವಧಿ ಕಟ್ಟಲಾಗುತ್ತಿದ್ದು, ೧೫ ದಿನದೊಳಗೆ ಅರಮನೆ ಒಳಾವರಣದಲ್ಲಿ ದಸರಾ ಸಿದ್ಧತಾ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಅರಮನೆ ಆವರಣದಲ್ಲಿರುವ ವಿವಿಧ ಉದ್ಯಾನವನಲ್ಲಿ ಕಳೆ ಗಿಡ ತೆರವು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ ಅರಮನೆ ಮುಂಭಾಗದ ಪಾರ್ಕ್ನಲ್ಲಿ ಕಳೆ ಗಿಡಗಳನ್ನು ತೆರವು ಮಾಡಿ ಹೂವಿನ ಜೋಡಣೆ ಮಾಡಲು ನೆಲ ಅಗೆದು ಹದ ಮಾಡಲಾಗುತ್ತಿದೆ. ಅಲ್ಲದೆ, ಪಾರ್ಕ್ನಲ್ಲಿರುವ ವಿದ್ಯುತ್ ದೀಪಗಳ ಕಂಬಗಳಿಗೆ ಬಣ್ಣ ಬಳಿಯುವ ಕಾರ್ಯಕ್ಕೂ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್ನಲ್ಲಿ 2025ರ ಅಕ್ಟೋಬರ್ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…