ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನವರಾತ್ರಿ ವೇಳೆ ನಡೆ ಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದೆ. ಅದಕ್ಕಾಗಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದೆ.
ಪ್ರಮುಖವಾಗಿ ಅರಮನೆಯ ದರ್ಬಾರ್ ಹಾಲ್, ಗ್ಯಾಲರಿ, ಆನೆ ಬಾಗಿಲಿನ ಬಳಿಯ ಮೇಲ್ಚಾವಣಿ ಸೇರಿದಂತೆ ಒಳಾವರಣದಲ್ಲಿ ಅಗತ್ಯವಿದ್ದೆಡೆ ಬಣ್ಣ ಬಳಿಯುವ ಹಾಗೂ ವಿದ್ಯುತ್ ದೀಪಗಳ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಬಣ್ಣದ ಕೆಲಸ ಮತ್ತು ವಿದ್ಯುತ್ ಬಲ್ಬ್ ಬದಲಿಸುವುದಕ್ಕಾಗಿ ಕಾಲಾವಧಿ ಕಟ್ಟಲಾಗುತ್ತಿದ್ದು, ೧೫ ದಿನದೊಳಗೆ ಅರಮನೆ ಒಳಾವರಣದಲ್ಲಿ ದಸರಾ ಸಿದ್ಧತಾ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
ಅರಮನೆ ಆವರಣದಲ್ಲಿರುವ ವಿವಿಧ ಉದ್ಯಾನವನಲ್ಲಿ ಕಳೆ ಗಿಡ ತೆರವು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ ಅರಮನೆ ಮುಂಭಾಗದ ಪಾರ್ಕ್ನಲ್ಲಿ ಕಳೆ ಗಿಡಗಳನ್ನು ತೆರವು ಮಾಡಿ ಹೂವಿನ ಜೋಡಣೆ ಮಾಡಲು ನೆಲ ಅಗೆದು ಹದ ಮಾಡಲಾಗುತ್ತಿದೆ. ಅಲ್ಲದೆ, ಪಾರ್ಕ್ನಲ್ಲಿರುವ ವಿದ್ಯುತ್ ದೀಪಗಳ ಕಂಬಗಳಿಗೆ ಬಣ್ಣ ಬಳಿಯುವ ಕಾರ್ಯಕ್ಕೂ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…