Andolana originals

ಅರಮನೆ ಒಳಾಂಗಣದಲ್ಲಿ ದಸರಾ ತಯಾರಿ ಆರಂಭ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನವರಾತ್ರಿ ವೇಳೆ ನಡೆ ಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದೆ. ಅದಕ್ಕಾಗಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದೆ.

ಪ್ರಮುಖವಾಗಿ ಅರಮನೆಯ ದರ್ಬಾರ್ ಹಾಲ್, ಗ್ಯಾಲರಿ, ಆನೆ ಬಾಗಿಲಿನ ಬಳಿಯ ಮೇಲ್ಚಾವಣಿ ಸೇರಿದಂತೆ ಒಳಾವರಣದಲ್ಲಿ ಅಗತ್ಯವಿದ್ದೆಡೆ ಬಣ್ಣ ಬಳಿಯುವ ಹಾಗೂ ವಿದ್ಯುತ್ ದೀಪಗಳ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಬಣ್ಣದ ಕೆಲಸ ಮತ್ತು ವಿದ್ಯುತ್ ಬಲ್ಬ್ ಬದಲಿಸುವುದಕ್ಕಾಗಿ ಕಾಲಾವಧಿ ಕಟ್ಟಲಾಗುತ್ತಿದ್ದು, ೧೫ ದಿನದೊಳಗೆ ಅರಮನೆ ಒಳಾವರಣದಲ್ಲಿ ದಸರಾ ಸಿದ್ಧತಾ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಅರಮನೆ ಆವರಣದಲ್ಲಿರುವ ವಿವಿಧ ಉದ್ಯಾನವನಲ್ಲಿ ಕಳೆ ಗಿಡ ತೆರವು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ ಅರಮನೆ ಮುಂಭಾಗದ ಪಾರ್ಕ್‌ನಲ್ಲಿ ಕಳೆ ಗಿಡಗಳನ್ನು ತೆರವು ಮಾಡಿ ಹೂವಿನ ಜೋಡಣೆ ಮಾಡಲು ನೆಲ ಅಗೆದು ಹದ ಮಾಡಲಾಗುತ್ತಿದೆ. ಅಲ್ಲದೆ, ಪಾರ್ಕ್‌ನಲ್ಲಿರುವ ವಿದ್ಯುತ್ ದೀಪಗಳ ಕಂಬಗಳಿಗೆ ಬಣ್ಣ ಬಳಿಯುವ ಕಾರ್ಯಕ್ಕೂ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

 

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

1 hour ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago