ಓದುಗರ ಪತ್ರ
ವಿಶ್ವವಿಖ್ಯಾತ ಮೈಸೂರು ದಸರಾಗೂ ಕುಸ್ತಿ ಪಂದ್ಯಾವಳಿಗೂ ಅವಿನಾಭಾವ ಸಂಬಂಧ ಇದೆ. ಪ್ರತಿಬಾರಿಯ ದಸರಾ ಮಹೋತ್ಸವದಲ್ಲಿ ಕುಸ್ತಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ.
ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಸಿಕೊಂಡು ಬರುತ್ತಿರುವ ಈ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಕುಸ್ತಿಪಟುಗಳು ಬಂದು ಭಾಗವಹಿಸುತ್ತಾರೆ. ಆದರೆ ಕುಸ್ತಿ ವೀಕ್ಷಣೆಗೆ ಬರುವ ಪ್ರೇಕ್ಷಕರು ಕುಳಿತುಕೊಳ್ಳುವ ಗ್ಯಾಲರಿಗೆ ಮೇಲ್ಬಾವಣಿ ಇಲ್ಲದ ಪರಿಣಾಮ ವೀಕ್ಷಕರು ಬಿಸಿಲು-ಮಳೆಯಲ್ಲಿಯೇ ಕುಳಿತು ಕುಸ್ತಿ ವೀಕ್ಷಿಸಬೇಕಿದೆ.
ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ನಾಡ ಕುಸ್ತಿ, ಮಹಿಳಾ ಕುಸ್ತಿ ಹಾಗೂ ಕಿಶೋರ್ ಪ್ರಶಸ್ತಿ, ಕುಮಾರ್ ಪ್ರಶಸ್ತಿ, ಕೇಸರಿ ಪ್ರಶಸ್ತಿ, ಕಂಠೀರವ ಪ್ರಶಸ್ತಿ ಎಂಬ ವಿವಿಧ ಕುಸ್ತಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆ. ಈ ಕುಸ್ತಿ ಪಂದ್ಯಾವಳಿಗಳನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸುತ್ತಾರೆ. ಆದರೆ ಇಲ್ಲಿ ಪ್ರೇಕ್ಷಕರಿಗೆ ಆರಾಮವಾಗಿ ಕುಳಿತು ವೀಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬುದೇ ಬೇಸರದ ಸಂಗತಿ.
ಈ ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಗೆ ಮೇಲ್ವಾವಣಿ ಅಳವಡಿಸುವಂತೆ ಕಳೆದ 2 ವರ್ಷಗಳಿಂದ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದರೂ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುತ್ತಿಲ್ಲ. ಆದ್ದರಿಂದ ಜಿಲ್ಲಾಡಳಿತ ಈ ಬಾರಿಯಾದರೂ ಈ ಕುಸ್ತಿ ಕ್ರೀಡಾಂಗಣದ ವೀಕ್ಷಕರ ಗ್ಯಾಲರಿಗೆ ಮೇಲ್ವಾವಣಿ ಅಳವಡಿಸಬೇಕಿದೆ.
– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು,
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…