Andolana originals

ಓದುಗರ ಪತ್ರ: ವೀಕ್ಷಕರ ಗ್ಯಾಲರಿಗೆ ಮೇಲ್ಟಾವಣಿ ಅಳವಡಿಸಿ

ವಿಶ್ವವಿಖ್ಯಾತ ಮೈಸೂರು ದಸರಾಗೂ ಕುಸ್ತಿ ಪಂದ್ಯಾವಳಿಗೂ ಅವಿನಾಭಾವ ಸಂಬಂಧ ಇದೆ. ಪ್ರತಿಬಾರಿಯ ದಸರಾ ಮಹೋತ್ಸವದಲ್ಲಿ ಕುಸ್ತಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ.

ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಸಿಕೊಂಡು ಬರುತ್ತಿರುವ ಈ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಕುಸ್ತಿಪಟುಗಳು ಬಂದು ಭಾಗವಹಿಸುತ್ತಾರೆ. ಆದರೆ ಕುಸ್ತಿ ವೀಕ್ಷಣೆಗೆ ಬರುವ ಪ್ರೇಕ್ಷಕರು ಕುಳಿತುಕೊಳ್ಳುವ ಗ್ಯಾಲರಿಗೆ ಮೇಲ್ಬಾವಣಿ ಇಲ್ಲದ ಪರಿಣಾಮ ವೀಕ್ಷಕರು ಬಿಸಿಲು-ಮಳೆಯಲ್ಲಿಯೇ ಕುಳಿತು ಕುಸ್ತಿ ವೀಕ್ಷಿಸಬೇಕಿದೆ.

ದಸರಾ ಕುಸ್ತಿ ಪಂದ್ಯಾವಳಿಯಲ್ಲಿ ನಾಡ ಕುಸ್ತಿ, ಮಹಿಳಾ ಕುಸ್ತಿ ಹಾಗೂ ಕಿಶೋರ್ ಪ್ರಶಸ್ತಿ, ಕುಮಾರ್ ಪ್ರಶಸ್ತಿ, ಕೇಸರಿ ಪ್ರಶಸ್ತಿ, ಕಂಠೀರವ ಪ್ರಶಸ್ತಿ ಎಂಬ ವಿವಿಧ ಕುಸ್ತಿ ಪಂದ್ಯಗಳನ್ನು ಆಯೋಜಿಸಲಾಗುತ್ತದೆ. ಈ ಕುಸ್ತಿ ಪಂದ್ಯಾವಳಿಗಳನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಪ್ರೇಕ್ಷಕರು ಆಗಮಿಸುತ್ತಾರೆ. ಆದರೆ ಇಲ್ಲಿ ಪ್ರೇಕ್ಷಕರಿಗೆ ಆರಾಮವಾಗಿ ಕುಳಿತು ವೀಕ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬುದೇ ಬೇಸರದ ಸಂಗತಿ.

ಈ ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿಗೆ ಮೇಲ್ವಾವಣಿ ಅಳವಡಿಸುವಂತೆ ಕಳೆದ 2 ವರ್ಷಗಳಿಂದ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದರೂ ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸುತ್ತಿಲ್ಲ. ಆದ್ದರಿಂದ ಜಿಲ್ಲಾಡಳಿತ ಈ ಬಾರಿಯಾದರೂ ಈ ಕುಸ್ತಿ ಕ್ರೀಡಾಂಗಣದ ವೀಕ್ಷಕರ ಗ್ಯಾಲರಿಗೆ ಮೇಲ್ವಾವಣಿ ಅಳವಡಿಸಬೇಕಿದೆ.
– ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು,

 

 

ಆಂದೋಲನ ಡೆಸ್ಕ್

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

3 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

4 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

5 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

5 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

5 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

8 hours ago