Andolana originals

‘ಟ್ರಾನ್ಸ್ ಫಾರ್ಮರ್ ಸುತ್ತ ತಂತಿ ಬೇಲಿ ಅಳವಡಿಸಿ’

ಭೇರ್ಯ ಮಹೇಶ್

ಅವಳಿ ತಾಲ್ಲೂಕುಗಳ ಹಲವೆಡೆ ಟಿಸಿ ಸುತ್ತ ಬೇಲಿ ಇಲ್ಲದೆ ಅವಘಡ ಸಂಭವಿಸುವ ಭೀತಿ

ಕೆ.ಆರ್.ನಗರ: ಕೆ.ಆರ್.ನಗರ ಮತ್ತು  ಸಾಲಿಗ್ರಾಮ ಅವಳಿ ತಾಲ್ಲೂಕುಗಳ ವಿವಿಧೆಡೆ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿರುವ ವಿದ್ಯುತ್ ಕಂಬಗಳ ಸುತ್ತ ತಂತಿ ಬೇಲಿ ನಿರ್ಮಿಸದೆ ಅಪಾಯವನ್ನು ಆಹ್ವಾನಿಸುತ್ತಿದ್ದರೂ ಸೆಸ್ಕ್ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗಂಧನಹಳ್ಳಿ ಗ್ರಾಮದಲ್ಲಿರುವ ಪರಿವರ್ತಕದ ಬಳಿ ಕಳೆದ ವರ್ಷ ಐದಾರು ಕುರಿಗಳು ವಿದ್ಯುತ್ ಸ್ಪರ್ಶಕ್ಕೀಡಾಗಿ ಸಾವಿಗೀಡಾಗಿದ್ದವು. ಕೆ.ಆರ್.ನಗರ ಪಟ್ಟಣದಲ್ಲಿ ಎರಡು ಹಸುಗಳು, ಸಾಲಿಗ್ರಾಮ ತಾಲ್ಲೂಕಿನ ಚೆನ್ನಂಗೆರೆಯಲ್ಲಿ ಒಂದು ಹಸು, ಕಳ್ಳಿಮುದ್ದನಹಳ್ಳಿಯಲ್ಲಿ ೧ ಹಸು, ಬೈಲಾಪುರ ಗ್ರಾಮದಲ್ಲಿ ೧ ಹಸು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ. ಇವು ಕೇವಲ ಉದಾಹರಣೆ ಮಾತ್ರ. ಒಂದು ವರ್ಷದಲ್ಲಿ ೧೦ಕ್ಕೂ ಹೆಚ್ಚು ಜಾನುವಾರುಗಳು, ಕುರಿ, ಮೇಕೆಗಳು ವಿದ್ಯುತ್ ತಗುಲಿ ಸಾವನ್ನಪ್ಪಿವೆ. ವಿದ್ಯುತ್ ಪರಿವರ್ತಕಗಳಿಗೆ ತಂತಿಬೇಲಿ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಒಂದೆಡೆ ಉಪ ಪೊಲೀಸ್ ಠಾಣೆ, ಪಕ್ಕದಲ್ಲಿಯೇ ಶಾಲೆ ಹಾಗೂ ಆಟೋ ನಿಲ್ದಾಣ ಇದೆ. ಆದರೂ ಟ್ರಾನ್ಸ್‌ಫಾರ್ಮರ್ ಸುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ.

ಸಂಬಂಧಪಟ್ಟ ಇಲಾಖೆ ಕನಿಷ್ಠ ಬೇಲಿಯನ್ನು ನಿರ್ಮಿಸುವ ಕೆಲಸವನ್ನೂ ಮಾಡಿಲ್ಲ. ನಿತ್ಯ ಶಾಲೆಗೆ ಬರುವ ಸಣ್ಣ ಸಣ್ಣ ಮಕ್ಕಳು ಇದರ ಆಸುಪಾಸಿನಲ್ಲಿ ಓಡಾಡುತ್ತಿರುತ್ತಾರೆ. ಪಕ್ಕದಲ್ಲೇ ವಾಹನಗಳನ್ನು ನಿಲ್ಲಿಸುತ್ತಾರೆ. ಸಾಕಷ್ಟು ಸಂಖ್ಯೆಯ ಜನ ಸೇರುತ್ತಾರೆ ಎನ್ನುವ ಅರಿವಿದ್ದರೂ ತಂತಿ ಬೇಲಿ ನಿರ್ಮಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

” ಜಾನುವಾರುಗಳ ಬೆಲೆ ಕನಿಷ್ಠ ೪೦ ಸಾವಿರ ರೂ.ನಿಂದ ೧ ಲಕ್ಷ ರೂ.ವರೆಗೂ ಇರುತ್ತದೆ. ಆದರೆ ವಿದ್ಯುತ್ ತಗುಲಿ ಅಕಾಲಿಕವಾಗಿ ಜಾನುವಾರುಗಳು ಮರಣ ಹೊಂದುತ್ತಿದ್ದರೂ ಸೆಸ್ಕ್ ಎಚ್ಚೆತ್ತಿಲ್ಲ. ಜಾನುವಾರುಗಳು ಸಾವಿಗೀಡಾದರೆ ಅತ್ಯಲ್ಪ ಪರಿಹಾರ ನೀಡಿ ಕೈತೊಳೆದು ಕೊಳ್ಳುತ್ತಿದೆ. ಹೀಗಾಗಿ ವಿದ್ಯುತ್ ಪರಿವರ್ತಕಗಳ ಸುತ್ತಲೂ ತಂತಿ ಬೇಲಿ ಹಾಕಿಸಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು.”

-ಅರ್ಜುನಹಳ್ಳಿ ರಾಮ್‌ಪ್ರಸಾದ್, ಅಧ್ಯಕ್ಷರು, ತಾಲ್ಲೂಕು ಯುವ ರೈತ ವೇದಿಕೆ.

” ಸಾಲಿಗ್ರಾಮ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಹೊಸದಾಗಿ ಸ್ಥಾಪಿಸುತ್ತಿರುವ ವಿದ್ಯುತ್ ಪರಿವರ್ತಕಗಳಿಗೆ ತಂತಿಬೇಲಿ ಅಳವಡಿಸಿ ಸುರಕ್ಷತೆ ಒದಗಿಸಲಾಗಿದೆ. ಆದರೆ ಹಳೆಯ ಶೇ.೫೦ಕ್ಕೂ ಹೆಚ್ಚು ಪರಿವರ್ತಕಗಳಿಗೆ ತಂತಿಬೇಲಿಯೇ ಇಲ್ಲ. ಕೆಲವು ಕಡೆ ತಂತಿ ಬೇಲಿ ನಿರ್ಮಿಸಿದ್ದರೂ ಅವುಗಳು ಹತ್ತಾರು ವರ್ಷಗಳ ಹಿಂದೆ ನಿರ್ಮಿಸಿದ್ದರಿಂದ ಈಗ ಹಾಳಾಗಿವೆ. ಅನುದಾನ ಬಂದ ಕೂಡಲೇ ತಂತಿ ಬೇಲಿ ನಿರ್ಮಿಸಲಾಗುವುದು.”

-ಮಧುಸೂದನ್, ಎಇಇ, ಸೆಸ್ಕ್ ಉಪವಿಭಾಗ ಸಾಲಿಗ್ರಾಮ

ಆಂದೋಲನ ಡೆಸ್ಕ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

8 hours ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

8 hours ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

9 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

9 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

9 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

9 hours ago