ಭೇರ್ಯ ಮಹೇಶ್
ಅವಳಿ ತಾಲ್ಲೂಕುಗಳ ಹಲವೆಡೆ ಟಿಸಿ ಸುತ್ತ ಬೇಲಿ ಇಲ್ಲದೆ ಅವಘಡ ಸಂಭವಿಸುವ ಭೀತಿ
ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕುಗಳ ವಿವಿಧೆಡೆ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿರುವ ವಿದ್ಯುತ್ ಕಂಬಗಳ ಸುತ್ತ ತಂತಿ ಬೇಲಿ ನಿರ್ಮಿಸದೆ ಅಪಾಯವನ್ನು ಆಹ್ವಾನಿಸುತ್ತಿದ್ದರೂ ಸೆಸ್ಕ್ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗಂಧನಹಳ್ಳಿ ಗ್ರಾಮದಲ್ಲಿರುವ ಪರಿವರ್ತಕದ ಬಳಿ ಕಳೆದ ವರ್ಷ ಐದಾರು ಕುರಿಗಳು ವಿದ್ಯುತ್ ಸ್ಪರ್ಶಕ್ಕೀಡಾಗಿ ಸಾವಿಗೀಡಾಗಿದ್ದವು. ಕೆ.ಆರ್.ನಗರ ಪಟ್ಟಣದಲ್ಲಿ ಎರಡು ಹಸುಗಳು, ಸಾಲಿಗ್ರಾಮ ತಾಲ್ಲೂಕಿನ ಚೆನ್ನಂಗೆರೆಯಲ್ಲಿ ಒಂದು ಹಸು, ಕಳ್ಳಿಮುದ್ದನಹಳ್ಳಿಯಲ್ಲಿ ೧ ಹಸು, ಬೈಲಾಪುರ ಗ್ರಾಮದಲ್ಲಿ ೧ ಹಸು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ. ಇವು ಕೇವಲ ಉದಾಹರಣೆ ಮಾತ್ರ. ಒಂದು ವರ್ಷದಲ್ಲಿ ೧೦ಕ್ಕೂ ಹೆಚ್ಚು ಜಾನುವಾರುಗಳು, ಕುರಿ, ಮೇಕೆಗಳು ವಿದ್ಯುತ್ ತಗುಲಿ ಸಾವನ್ನಪ್ಪಿವೆ. ವಿದ್ಯುತ್ ಪರಿವರ್ತಕಗಳಿಗೆ ತಂತಿಬೇಲಿ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಒಂದೆಡೆ ಉಪ ಪೊಲೀಸ್ ಠಾಣೆ, ಪಕ್ಕದಲ್ಲಿಯೇ ಶಾಲೆ ಹಾಗೂ ಆಟೋ ನಿಲ್ದಾಣ ಇದೆ. ಆದರೂ ಟ್ರಾನ್ಸ್ಫಾರ್ಮರ್ ಸುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ.
ಸಂಬಂಧಪಟ್ಟ ಇಲಾಖೆ ಕನಿಷ್ಠ ಬೇಲಿಯನ್ನು ನಿರ್ಮಿಸುವ ಕೆಲಸವನ್ನೂ ಮಾಡಿಲ್ಲ. ನಿತ್ಯ ಶಾಲೆಗೆ ಬರುವ ಸಣ್ಣ ಸಣ್ಣ ಮಕ್ಕಳು ಇದರ ಆಸುಪಾಸಿನಲ್ಲಿ ಓಡಾಡುತ್ತಿರುತ್ತಾರೆ. ಪಕ್ಕದಲ್ಲೇ ವಾಹನಗಳನ್ನು ನಿಲ್ಲಿಸುತ್ತಾರೆ. ಸಾಕಷ್ಟು ಸಂಖ್ಯೆಯ ಜನ ಸೇರುತ್ತಾರೆ ಎನ್ನುವ ಅರಿವಿದ್ದರೂ ತಂತಿ ಬೇಲಿ ನಿರ್ಮಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
” ಜಾನುವಾರುಗಳ ಬೆಲೆ ಕನಿಷ್ಠ ೪೦ ಸಾವಿರ ರೂ.ನಿಂದ ೧ ಲಕ್ಷ ರೂ.ವರೆಗೂ ಇರುತ್ತದೆ. ಆದರೆ ವಿದ್ಯುತ್ ತಗುಲಿ ಅಕಾಲಿಕವಾಗಿ ಜಾನುವಾರುಗಳು ಮರಣ ಹೊಂದುತ್ತಿದ್ದರೂ ಸೆಸ್ಕ್ ಎಚ್ಚೆತ್ತಿಲ್ಲ. ಜಾನುವಾರುಗಳು ಸಾವಿಗೀಡಾದರೆ ಅತ್ಯಲ್ಪ ಪರಿಹಾರ ನೀಡಿ ಕೈತೊಳೆದು ಕೊಳ್ಳುತ್ತಿದೆ. ಹೀಗಾಗಿ ವಿದ್ಯುತ್ ಪರಿವರ್ತಕಗಳ ಸುತ್ತಲೂ ತಂತಿ ಬೇಲಿ ಹಾಕಿಸಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು.”
-ಅರ್ಜುನಹಳ್ಳಿ ರಾಮ್ಪ್ರಸಾದ್, ಅಧ್ಯಕ್ಷರು, ತಾಲ್ಲೂಕು ಯುವ ರೈತ ವೇದಿಕೆ.
” ಸಾಲಿಗ್ರಾಮ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಹೊಸದಾಗಿ ಸ್ಥಾಪಿಸುತ್ತಿರುವ ವಿದ್ಯುತ್ ಪರಿವರ್ತಕಗಳಿಗೆ ತಂತಿಬೇಲಿ ಅಳವಡಿಸಿ ಸುರಕ್ಷತೆ ಒದಗಿಸಲಾಗಿದೆ. ಆದರೆ ಹಳೆಯ ಶೇ.೫೦ಕ್ಕೂ ಹೆಚ್ಚು ಪರಿವರ್ತಕಗಳಿಗೆ ತಂತಿಬೇಲಿಯೇ ಇಲ್ಲ. ಕೆಲವು ಕಡೆ ತಂತಿ ಬೇಲಿ ನಿರ್ಮಿಸಿದ್ದರೂ ಅವುಗಳು ಹತ್ತಾರು ವರ್ಷಗಳ ಹಿಂದೆ ನಿರ್ಮಿಸಿದ್ದರಿಂದ ಈಗ ಹಾಳಾಗಿವೆ. ಅನುದಾನ ಬಂದ ಕೂಡಲೇ ತಂತಿ ಬೇಲಿ ನಿರ್ಮಿಸಲಾಗುವುದು.”
-ಮಧುಸೂದನ್, ಎಇಇ, ಸೆಸ್ಕ್ ಉಪವಿಭಾಗ ಸಾಲಿಗ್ರಾಮ
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್ಘಾಟ್ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…