Andolana originals

‘ಟ್ರಾನ್ಸ್ ಫಾರ್ಮರ್ ಸುತ್ತ ತಂತಿ ಬೇಲಿ ಅಳವಡಿಸಿ’

ಭೇರ್ಯ ಮಹೇಶ್

ಅವಳಿ ತಾಲ್ಲೂಕುಗಳ ಹಲವೆಡೆ ಟಿಸಿ ಸುತ್ತ ಬೇಲಿ ಇಲ್ಲದೆ ಅವಘಡ ಸಂಭವಿಸುವ ಭೀತಿ

ಕೆ.ಆರ್.ನಗರ: ಕೆ.ಆರ್.ನಗರ ಮತ್ತು  ಸಾಲಿಗ್ರಾಮ ಅವಳಿ ತಾಲ್ಲೂಕುಗಳ ವಿವಿಧೆಡೆ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿರುವ ವಿದ್ಯುತ್ ಕಂಬಗಳ ಸುತ್ತ ತಂತಿ ಬೇಲಿ ನಿರ್ಮಿಸದೆ ಅಪಾಯವನ್ನು ಆಹ್ವಾನಿಸುತ್ತಿದ್ದರೂ ಸೆಸ್ಕ್ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗಂಧನಹಳ್ಳಿ ಗ್ರಾಮದಲ್ಲಿರುವ ಪರಿವರ್ತಕದ ಬಳಿ ಕಳೆದ ವರ್ಷ ಐದಾರು ಕುರಿಗಳು ವಿದ್ಯುತ್ ಸ್ಪರ್ಶಕ್ಕೀಡಾಗಿ ಸಾವಿಗೀಡಾಗಿದ್ದವು. ಕೆ.ಆರ್.ನಗರ ಪಟ್ಟಣದಲ್ಲಿ ಎರಡು ಹಸುಗಳು, ಸಾಲಿಗ್ರಾಮ ತಾಲ್ಲೂಕಿನ ಚೆನ್ನಂಗೆರೆಯಲ್ಲಿ ಒಂದು ಹಸು, ಕಳ್ಳಿಮುದ್ದನಹಳ್ಳಿಯಲ್ಲಿ ೧ ಹಸು, ಬೈಲಾಪುರ ಗ್ರಾಮದಲ್ಲಿ ೧ ಹಸು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ. ಇವು ಕೇವಲ ಉದಾಹರಣೆ ಮಾತ್ರ. ಒಂದು ವರ್ಷದಲ್ಲಿ ೧೦ಕ್ಕೂ ಹೆಚ್ಚು ಜಾನುವಾರುಗಳು, ಕುರಿ, ಮೇಕೆಗಳು ವಿದ್ಯುತ್ ತಗುಲಿ ಸಾವನ್ನಪ್ಪಿವೆ. ವಿದ್ಯುತ್ ಪರಿವರ್ತಕಗಳಿಗೆ ತಂತಿಬೇಲಿ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಒಂದೆಡೆ ಉಪ ಪೊಲೀಸ್ ಠಾಣೆ, ಪಕ್ಕದಲ್ಲಿಯೇ ಶಾಲೆ ಹಾಗೂ ಆಟೋ ನಿಲ್ದಾಣ ಇದೆ. ಆದರೂ ಟ್ರಾನ್ಸ್‌ಫಾರ್ಮರ್ ಸುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ.

ಸಂಬಂಧಪಟ್ಟ ಇಲಾಖೆ ಕನಿಷ್ಠ ಬೇಲಿಯನ್ನು ನಿರ್ಮಿಸುವ ಕೆಲಸವನ್ನೂ ಮಾಡಿಲ್ಲ. ನಿತ್ಯ ಶಾಲೆಗೆ ಬರುವ ಸಣ್ಣ ಸಣ್ಣ ಮಕ್ಕಳು ಇದರ ಆಸುಪಾಸಿನಲ್ಲಿ ಓಡಾಡುತ್ತಿರುತ್ತಾರೆ. ಪಕ್ಕದಲ್ಲೇ ವಾಹನಗಳನ್ನು ನಿಲ್ಲಿಸುತ್ತಾರೆ. ಸಾಕಷ್ಟು ಸಂಖ್ಯೆಯ ಜನ ಸೇರುತ್ತಾರೆ ಎನ್ನುವ ಅರಿವಿದ್ದರೂ ತಂತಿ ಬೇಲಿ ನಿರ್ಮಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

” ಜಾನುವಾರುಗಳ ಬೆಲೆ ಕನಿಷ್ಠ ೪೦ ಸಾವಿರ ರೂ.ನಿಂದ ೧ ಲಕ್ಷ ರೂ.ವರೆಗೂ ಇರುತ್ತದೆ. ಆದರೆ ವಿದ್ಯುತ್ ತಗುಲಿ ಅಕಾಲಿಕವಾಗಿ ಜಾನುವಾರುಗಳು ಮರಣ ಹೊಂದುತ್ತಿದ್ದರೂ ಸೆಸ್ಕ್ ಎಚ್ಚೆತ್ತಿಲ್ಲ. ಜಾನುವಾರುಗಳು ಸಾವಿಗೀಡಾದರೆ ಅತ್ಯಲ್ಪ ಪರಿಹಾರ ನೀಡಿ ಕೈತೊಳೆದು ಕೊಳ್ಳುತ್ತಿದೆ. ಹೀಗಾಗಿ ವಿದ್ಯುತ್ ಪರಿವರ್ತಕಗಳ ಸುತ್ತಲೂ ತಂತಿ ಬೇಲಿ ಹಾಕಿಸಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು.”

-ಅರ್ಜುನಹಳ್ಳಿ ರಾಮ್‌ಪ್ರಸಾದ್, ಅಧ್ಯಕ್ಷರು, ತಾಲ್ಲೂಕು ಯುವ ರೈತ ವೇದಿಕೆ.

” ಸಾಲಿಗ್ರಾಮ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಹೊಸದಾಗಿ ಸ್ಥಾಪಿಸುತ್ತಿರುವ ವಿದ್ಯುತ್ ಪರಿವರ್ತಕಗಳಿಗೆ ತಂತಿಬೇಲಿ ಅಳವಡಿಸಿ ಸುರಕ್ಷತೆ ಒದಗಿಸಲಾಗಿದೆ. ಆದರೆ ಹಳೆಯ ಶೇ.೫೦ಕ್ಕೂ ಹೆಚ್ಚು ಪರಿವರ್ತಕಗಳಿಗೆ ತಂತಿಬೇಲಿಯೇ ಇಲ್ಲ. ಕೆಲವು ಕಡೆ ತಂತಿ ಬೇಲಿ ನಿರ್ಮಿಸಿದ್ದರೂ ಅವುಗಳು ಹತ್ತಾರು ವರ್ಷಗಳ ಹಿಂದೆ ನಿರ್ಮಿಸಿದ್ದರಿಂದ ಈಗ ಹಾಳಾಗಿವೆ. ಅನುದಾನ ಬಂದ ಕೂಡಲೇ ತಂತಿ ಬೇಲಿ ನಿರ್ಮಿಸಲಾಗುವುದು.”

-ಮಧುಸೂದನ್, ಎಇಇ, ಸೆಸ್ಕ್ ಉಪವಿಭಾಗ ಸಾಲಿಗ್ರಾಮ

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago