Andolana originals

‘ಟ್ರಾನ್ಸ್ ಫಾರ್ಮರ್ ಸುತ್ತ ತಂತಿ ಬೇಲಿ ಅಳವಡಿಸಿ’

ಭೇರ್ಯ ಮಹೇಶ್

ಅವಳಿ ತಾಲ್ಲೂಕುಗಳ ಹಲವೆಡೆ ಟಿಸಿ ಸುತ್ತ ಬೇಲಿ ಇಲ್ಲದೆ ಅವಘಡ ಸಂಭವಿಸುವ ಭೀತಿ

ಕೆ.ಆರ್.ನಗರ: ಕೆ.ಆರ್.ನಗರ ಮತ್ತು  ಸಾಲಿಗ್ರಾಮ ಅವಳಿ ತಾಲ್ಲೂಕುಗಳ ವಿವಿಧೆಡೆ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿರುವ ವಿದ್ಯುತ್ ಕಂಬಗಳ ಸುತ್ತ ತಂತಿ ಬೇಲಿ ನಿರ್ಮಿಸದೆ ಅಪಾಯವನ್ನು ಆಹ್ವಾನಿಸುತ್ತಿದ್ದರೂ ಸೆಸ್ಕ್ ಅಧಿಕಾರಿಗಳು ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗಂಧನಹಳ್ಳಿ ಗ್ರಾಮದಲ್ಲಿರುವ ಪರಿವರ್ತಕದ ಬಳಿ ಕಳೆದ ವರ್ಷ ಐದಾರು ಕುರಿಗಳು ವಿದ್ಯುತ್ ಸ್ಪರ್ಶಕ್ಕೀಡಾಗಿ ಸಾವಿಗೀಡಾಗಿದ್ದವು. ಕೆ.ಆರ್.ನಗರ ಪಟ್ಟಣದಲ್ಲಿ ಎರಡು ಹಸುಗಳು, ಸಾಲಿಗ್ರಾಮ ತಾಲ್ಲೂಕಿನ ಚೆನ್ನಂಗೆರೆಯಲ್ಲಿ ಒಂದು ಹಸು, ಕಳ್ಳಿಮುದ್ದನಹಳ್ಳಿಯಲ್ಲಿ ೧ ಹಸು, ಬೈಲಾಪುರ ಗ್ರಾಮದಲ್ಲಿ ೧ ಹಸು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿವೆ. ಇವು ಕೇವಲ ಉದಾಹರಣೆ ಮಾತ್ರ. ಒಂದು ವರ್ಷದಲ್ಲಿ ೧೦ಕ್ಕೂ ಹೆಚ್ಚು ಜಾನುವಾರುಗಳು, ಕುರಿ, ಮೇಕೆಗಳು ವಿದ್ಯುತ್ ತಗುಲಿ ಸಾವನ್ನಪ್ಪಿವೆ. ವಿದ್ಯುತ್ ಪರಿವರ್ತಕಗಳಿಗೆ ತಂತಿಬೇಲಿ ಇಲ್ಲದಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಒಂದೆಡೆ ಉಪ ಪೊಲೀಸ್ ಠಾಣೆ, ಪಕ್ಕದಲ್ಲಿಯೇ ಶಾಲೆ ಹಾಗೂ ಆಟೋ ನಿಲ್ದಾಣ ಇದೆ. ಆದರೂ ಟ್ರಾನ್ಸ್‌ಫಾರ್ಮರ್ ಸುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ.

ಸಂಬಂಧಪಟ್ಟ ಇಲಾಖೆ ಕನಿಷ್ಠ ಬೇಲಿಯನ್ನು ನಿರ್ಮಿಸುವ ಕೆಲಸವನ್ನೂ ಮಾಡಿಲ್ಲ. ನಿತ್ಯ ಶಾಲೆಗೆ ಬರುವ ಸಣ್ಣ ಸಣ್ಣ ಮಕ್ಕಳು ಇದರ ಆಸುಪಾಸಿನಲ್ಲಿ ಓಡಾಡುತ್ತಿರುತ್ತಾರೆ. ಪಕ್ಕದಲ್ಲೇ ವಾಹನಗಳನ್ನು ನಿಲ್ಲಿಸುತ್ತಾರೆ. ಸಾಕಷ್ಟು ಸಂಖ್ಯೆಯ ಜನ ಸೇರುತ್ತಾರೆ ಎನ್ನುವ ಅರಿವಿದ್ದರೂ ತಂತಿ ಬೇಲಿ ನಿರ್ಮಿಸದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

” ಜಾನುವಾರುಗಳ ಬೆಲೆ ಕನಿಷ್ಠ ೪೦ ಸಾವಿರ ರೂ.ನಿಂದ ೧ ಲಕ್ಷ ರೂ.ವರೆಗೂ ಇರುತ್ತದೆ. ಆದರೆ ವಿದ್ಯುತ್ ತಗುಲಿ ಅಕಾಲಿಕವಾಗಿ ಜಾನುವಾರುಗಳು ಮರಣ ಹೊಂದುತ್ತಿದ್ದರೂ ಸೆಸ್ಕ್ ಎಚ್ಚೆತ್ತಿಲ್ಲ. ಜಾನುವಾರುಗಳು ಸಾವಿಗೀಡಾದರೆ ಅತ್ಯಲ್ಪ ಪರಿಹಾರ ನೀಡಿ ಕೈತೊಳೆದು ಕೊಳ್ಳುತ್ತಿದೆ. ಹೀಗಾಗಿ ವಿದ್ಯುತ್ ಪರಿವರ್ತಕಗಳ ಸುತ್ತಲೂ ತಂತಿ ಬೇಲಿ ಹಾಕಿಸಿ ಸುರಕ್ಷತಾ ಕ್ರಮ ಕೈಗೊಳ್ಳಬೇಕು.”

-ಅರ್ಜುನಹಳ್ಳಿ ರಾಮ್‌ಪ್ರಸಾದ್, ಅಧ್ಯಕ್ಷರು, ತಾಲ್ಲೂಕು ಯುವ ರೈತ ವೇದಿಕೆ.

” ಸಾಲಿಗ್ರಾಮ ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಹೊಸದಾಗಿ ಸ್ಥಾಪಿಸುತ್ತಿರುವ ವಿದ್ಯುತ್ ಪರಿವರ್ತಕಗಳಿಗೆ ತಂತಿಬೇಲಿ ಅಳವಡಿಸಿ ಸುರಕ್ಷತೆ ಒದಗಿಸಲಾಗಿದೆ. ಆದರೆ ಹಳೆಯ ಶೇ.೫೦ಕ್ಕೂ ಹೆಚ್ಚು ಪರಿವರ್ತಕಗಳಿಗೆ ತಂತಿಬೇಲಿಯೇ ಇಲ್ಲ. ಕೆಲವು ಕಡೆ ತಂತಿ ಬೇಲಿ ನಿರ್ಮಿಸಿದ್ದರೂ ಅವುಗಳು ಹತ್ತಾರು ವರ್ಷಗಳ ಹಿಂದೆ ನಿರ್ಮಿಸಿದ್ದರಿಂದ ಈಗ ಹಾಳಾಗಿವೆ. ಅನುದಾನ ಬಂದ ಕೂಡಲೇ ತಂತಿ ಬೇಲಿ ನಿರ್ಮಿಸಲಾಗುವುದು.”

-ಮಧುಸೂದನ್, ಎಇಇ, ಸೆಸ್ಕ್ ಉಪವಿಭಾಗ ಸಾಲಿಗ್ರಾಮ

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

2 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

6 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

7 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

7 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

7 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

8 hours ago