Andolana originals

ರಸ್ತೆ, ವೃತ್ತಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ

ಗುಂಡ್ಲುಪೇಟೆ: ಗುಂಡ್ಲುಪೇಟೆ ಪಟ್ಟಣದ ಮೂಲಕ ಕೇರಳ ಹಾಗೂ ತಮಿಳುನಾಡು ರಾಜ್ಯಗಳನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೋದುಹೋಗಿದೆ. ಹಾಗಾಗಿ ಸದಾ ಚಟುವಟಿಕೆಯಿಂದ ಇರುವ ಪಟ್ಟಣದ ಪ್ರಮುಖ ವೃತ್ತಗಳು,  ಜನನಿಬಿಡ ಸ್ಥಳಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ  ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

ನೆರೆಯ ಎರಡೂ ರಾಜ್ಯಗಳ ಜೊತೆ ಪಟ್ಟಣ ಸಂಪರ್ಕಇಟ್ಟುಕೊಂಡಿದೆ. ಆದ್ದರಿಂದ ವ್ಯಾಪಾರ ವಹಿ ವಾಟು, ವಾಹನಗಳ ಓಡಾಟ ಜೋರಾಗಿದೆ. ಹಾಗೆಯೇ ಪಟ್ಟಣದ ವ್ಯಾಪ್ತಿಯಲ್ಲಿ ಗಾಂಜಾ ಘಮಲೂ ಇದೆ. ಕೊಲೆ, ಹೆದ್ದಾರಿಯಲ್ಲಿ ದರೋಡೆ, ಮನೆ ಕಳ್ಳತನ, ಹಿಟ್ ಅಂಡ್ ರನ್ ಪ್ರಕರಣಗಳು ಆಗಾಗ್ಗೆ ನಡೆಯುತ್ತಲೇ ಇವೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಾದರೆ ಪೊಲೀಸ್ ಇಲಾಖೆಯು ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕಿದೆ.

ಪಟ್ಟಣದ ಎಸ್‌ಬಿಐ ಶಾಖೆ ಮುಂಭಾಗ (ಸುರಭಿ ಬಳಿ), ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸರ್ಕಲ್, ಎಂಡಿಸಿಸಿ ಬ್ಯಾಂಕ್ ಸರ್ಕಲ್ (ಬಸವೇಶ್ವರ ವೃತ್ತ, ಊಟಿ ಗೇಟ್, ಸಾರ್ವಜನಿಕ ಆಸ್ಪತ್ರೆ ಬಳಿ, ಹಳೆ ಬಸ್ ನಿಲ್ದಾಣ, ಕೋಡಹಳ್ಳಿ ವೃತ್ತ ಬಳಿ ಗುಣಮಟ್ಟದ ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಿದರೆ ಅನೈತಿಕ ಚಟುವಟಕೆಗಳನ್ನು ತಡೆಯಬಹುದು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಇತ್ತೀಚೆಗೆ ಪಟ್ಟಣದ ಮದ್ದಾನೇಶ್ವರ ಶಾಲೆಯ ಹಿಂಭಾಗ ಸಣ್ಣ ವಿಚಾರಕ್ಕೆ ಗಲಾಟೆ ನಡೆದು ಶಿವು ಎಂಬಾತನ ಹತ್ಯೆಯಾಯಿತು. ಇದಲ್ಲದೆ ಪಟ್ಟಣದ ಕೆಲವು ಬಡಾವಣೆಗಳಲ್ಲಿ ಮನೆಗಳ್ಳತನ ನಡೆದಿದೆ. ಮದ್ಯದ ಅಂಗಡಿಗಳ ಹಾಗೂ ರಸ್ತೆಗಳ ಬದಿಯಲ್ಲಿ ಕುಡುಕರ ಹಾವಳಿಯಿದೆ. ರಸ್ತೆ ಬದಿಗಳಲ್ಲಿ ವಾಹನಗಳ ಅಡ್ಡಾದಿಡ್ಡಿ ನಿಲುಗಡೆ ಹಾಗೂ ಗುದ್ದೋಡು (ಹಿಟ್ ಅಂಡ್ ರನ್) ಪ್ರಕರಣಗಳು ನಡೆದಿವೆ. ಈ ಬಗ್ಗೆ ಹಲವು ಬಾರಿ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿವೆ.

ಕಳಪೆ ಕ್ಯಾಮೆರಾ ಅಳವಡಿಕೆ: ಪಟ್ಟಣದ ಹಲವಾರು ಖಾಸಗಿ ಕಟ್ಟಡಗಳಲ್ಲಿ ಕಾನೂನಿನಿಂದ ತಪ್ಪಿಸಿಕೊಳ್ಳಲು ಹೆಸರಿಗಷ್ಟೆ ಕ್ಯಾಮೆರಾ ಅಳವಡಿಸಲಾಗಿದೆ. ತುಸುದೂರದ ರಸ್ತೆಯಲ್ಲಿ ಹೋಗುವ ವಾಹನ ನಂಬರ್ ಪ್ಲೇಟ್, ಮುಖ ಚಹರೆ ಗುರುತು ಹಿಡಿಯುವಷ್ಟು ಸಾಮರ್ಥ್ಯ ಇಲ್ಲ. ಆದ್ದರಿಂದ ಅಪರಾಧಿಗಳು ತಪ್ಪಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆಯಿಂದ ಗುಣಮಟ್ಟದ ಕ್ಯಾಮೆರಾಗಳನ್ನು ಅಳವಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

” ಪಟ್ಟಣದ ಪ್ರಮುಖ ವೃತ್ತಗಳು, ಹಳೆ ಬಸ್ ನಿಲ್ದಾಣಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಆದಷ್ಟು ಬೇಗ ಕ್ಯಾಮೆರಾಗಳನ್ನು ಅಳವಡಿಸಲಿದ್ದಾರೆ.” ಎಚ್.ಎಂ.ಗಣೇಶಪ್ರಸಾದ್, ಶಾಸಕರು

 

“ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡುವ ಬಗ್ಗೆ ಪುರಸಭೆ ಹಾಗೂ ಜಿಲ್ಲಾಧಿಕಾರಿ ಕಚೇರಿಗೂ ಮನವಿ ಸಲ್ಲಿಸಿದ್ದೇವೆ. ಈಸಂಬಂಧ ಪುರಸಭೆಯಿಂದ ಟೆಂಡರ್ ಆಗಿದ್ದು ಒಂದು ವಾರದೊಳಗೆ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಕ್ಯಾಮೆರಾ ಅಳವಡಿಸುವ ಭರವಸೆ ನೀಡಿದ್ದಾರೆ.” ಜಯಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್

 

“ಕಾನೂನು ಉಲ್ಲಂಘನೆ ಪ್ರಕರಣಗಳು ನಡೆದಾಗಲೆಲ್ಲಾ ಖಾಸಗಿ ಅಂಗಡಿಗಳ ಕ್ಯಾಮೆರಾಗಳ ಮೊರೆ ಹೋಗಬೇಕಿದೆ. ಅಲ್ಲಿ ಗುಣಮಟ್ಟದ ಕ್ಯಾಮೆರಾಗಳಿಲ್ಲ. ಉತ್ತಮವಾದ ಕ್ಯಾಮೆರಾ ಅಳವಡಿಸಬೇಕು.” -ಅಬ್ದುಲ್ ಮಾಲಿಕ್, ಕಾವಲುಪಡೆ ಅಧ್ಯಕ್ಷ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

20 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

20 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

20 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

20 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

20 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

20 hours ago