Andolana originals

‘ಮೈಸೂರಲ್ಲಿ ವಿದ್ಯುತ್ ಯುಜಿ ಕೇಬಲ್ ಅಳವಡಿಕೆ’

 ಕೆ.ಬಿ.ರಮೇಶನಾಯಕ

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸೆಸ್ಕ್‌ ಎಂಡಿ ಮುನಿಗೋಪಾಲರಾಜು ಅಭಿಮತ 

ವಿದ್ಯುತ್‌ನಿಂದ ಸಂಭವಿಸಬಹುದಾದ ಪ್ರಾಣಹಾನಿ ತಡೆಗೆ ಯುಜಿ ಕೇಬಲ್ ಅಳವಡಿಕೆ

ಕಟ್ಟಕಡೆಯ ಹಳ್ಳಿಗಳ ಪ್ರತಿ ಮನೆಗೂ ವಿದ್ಯುತ್ ಸಂಪರ್ಕದ ಗುರಿ

ಡಿಸೆಂಬರ್ ತಿಂಗಳ ಒಳಗೆ ಎಲ್ಲ ಹಾಡಿಗಳಿಗೂ ವಿದ್ಯುತ್ ಸಂಪರ್ಕ

ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಸೋಲಾರ್ ಪಂಪ್ ಅಳವಡಿಕೆ 

ಮೈಸೂರು: ಕಟ್ಟಕಡೆಯ ಕುಗ್ರಾಮ, ಹಾಡಿಗಳ ಪ್ರತಿ ಮನೆಗೂ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲಾಗವುದು. ವಿದ್ಯುತ್ ಸೋರಿಕೆ, ನಷ್ಟ, ಕಳ್ಳತನ ತಪ್ಪಿಸಿ ಆದಾಯ ಹೆಚ್ಚಿಸಲು ಗಮನಹರಿಸುವುದಕ್ಕೆ ಆದ್ಯತೆ ನೀಡಲಾಗುವುದು. ಜೊತೆಗೆ ನಗರ ಪ್ರದೇಶಗಳಲ್ಲಿ ವಿದ್ಯುತ್ ಕೇಬಲ್‌ಗಳನ್ನು ಕಂಬಕ್ಕೆ ಯುಜಿ (ಭೂಮಿ ಒಳಗೆ) ಅಳವಡಿಕೆ ಕಾರ್ಯವನ್ನು ಶೀಘ್ರದಲ್ಲೇ ಶುರು ಮಾಡುವ ಪ್ರಮುಖ ಗುರಿ ಇದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ನೂತನ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲರಾಜು ಹೇಳಿದರು.

‘ಆಂದೋಲನ’ ದಿನಪತ್ರಿಕೆ ನಡೆಸಿದ ವಿಶೇಷ ಸಂದರ್ಶನದಲ್ಲಿ ಅವರು, ಸೆಸ್ಕ್ ವತಿಯಿಂದ ಕೈಗೊಳ್ಳಲಿರುವ ಮುಂದಿನ ಯೋಜನೆಗಳು, ಕಾರ್ಯ ಕ್ರಮಗಳನ್ನು ಕುರಿತು ಮಾಹಿತಿ ಹಂಚಿಕೊಂಡರು. ಪ್ರತಿಯೊಂದು ಹಳ್ಳಿ, ಕುಟುಂಬಗಳಿಗೆ ಬೆಳಕು ನೀಡಬೇಕು ಎಂಬುದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆಶಯವಾಗಿದೆ. ಅದರಂತೆ ವಿವಿಧ ಯೋಜನೆಗಳ ಮೂಲಕ ಪ್ರತಿಯೊಂದು ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಅದಕ್ಕಾಗಿ ಕಾಲಮಿತಿಯೊಂದಿಗೆ ರೂಪಿಸಿರುವ ಯೋಜನೆಗಳನ್ನು ಪೂರ್ಣ ಮಾಡುತ್ತೇವೆ.

ಆಂದೋಲನ: ನಿಮ್ಮ ಮುಂದಿನ ಯೋಜನೆಗಳು ಏನಿವೆ?

ಕೆ.ಎಂ.ಮುನಿಗೋಪಾಲರಾಜು: ವರ್ಷದಿಂದ ವರ್ಷಕ್ಕೆ ವಿದ್ಯುತ್ ಖರೀದಿ ದರ ಹೆಚ್ಚಳವಾಗುತ್ತಿರುವ ಕಾರಣ ನೈಸರ್ಗಿಕವಾಗಿ ದೊರೆಯುವಂತಹ ಒಂದು ಸಾವಿರ ಮೆಗಾವ್ಯಾಟ್ ಸೌರ ವಿದ್ಯುತ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದೆ. ರೈತರ ಕೃಷಿ ಪಂಪ್ ಸೆಟ್‌ಗಳು ಹೆಚ್ಚಾಗಿರುವ ಕಡೆಗಳಲ್ಲಿ ಸೋಲಾರ್ ಉತ್ಪಾದನೆ ಮಾಡಲಾಗುವುದು. ಗ್ರಾಹಕರಿಗೆ ಅಡಚಣೆ ರಹಿತ ವಿದ್ಯುತ್ ನೀಡಲು ಫೀಡರ್‌ಲೇನ್, ಪರಿ ವರ್ತಕಗಳ ನಿರ್ವಹಣೆ ಮಾಡುವುದಕ್ಕೆ ಯೋಜನೆಗಳು ಇವೆ. ಕೇಂದ್ರ ಸರ್ಕಾರದ ಯೋಜನೆಯನ್ನು ಬಳಸಿಕೊಂಡು ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಪಂಪ್ ಅಳವಡಿಸಲಾಗುವುದು. ಶೇ.೮೦ರಷ್ಟು ಸಬ್ಸಿಡಿ ದೊರೆಯುವುದರಿಂದ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಆಂದೋಲನ: ಯುಜಿ ಕೇಬಲ್ ಅಳವಡಿಕೆ ಯೋಜನೆ ಯಾವಾಗ ಆರಂಭಿಸುತ್ತೀರಿ?

ಕೆ.ಎಂ.ಮುನಿಗೋಪಾಲರಾಜು: ಮೈಸೂರಿನಲ್ಲಿ ೧೧ ಕೆವಿ ಸಾಮರ್ಥ್ಯದ ಟಿಸಿಗಳು ಇರುವ ಕಡೆಗಳಲ್ಲಿ ಯುಜಿ ಕೇಬಲ್ ಅಳವಡಿಸಿಕೊಂಡು ಬರಲಾಗುತ್ತಿದೆ. ಇದರಿಂದಾಗಿ ವಿದ್ಯುತ್ ಸ್ಪರ್ಶದಿಂದ ಅನಾಹುತವಾಗುವುದನ್ನು ತಡೆಯಲಾಗುವುದು. ನಗರದ ಶಿವರಾಂಪೇಟೆ ಸೇರಿದಂತೆ ಜನನಿಬಿಡ ಪ್ರದೇಶಗಳು ಹೆಚ್ಚಾಗಿರುವ ಕಡೆಗಳಲ್ಲಿ ಏರಿಯಲ್ ಬಂಚ್ಡ್ ಎಲ್‌ಟಿ ಕೇಬಲ್ ಅಳವಡಿಸಲಾಗುವುದು. ಮುಂದಿನ ಹತ್ತಾರು ವರ್ಷಗಳಲ್ಲಿ ವಿದ್ಯುತ್ ಕಂಬದ ಬದಲಿಗೆ ಯುಜಿ ಕೇಬಲ್ ಅಳವಡಿಕೆ ಮಾಡುವುದು ಅನಿವಾರ್ಯ ಆಗಿರುವ ಕಾರಣ ಜನಸಂದಣಿ ಪ್ರದೇಶಗಳಲ್ಲಿ ಅಳವಡಿಸಲಾಗುವುದು. ಯುಜಿ ಕೇಬಲ್ ಅಳ  ವಡಿಕೆಯಿಂದ ನಗರದ ಸೌಂದರ್ಯವನ್ನು ಹೆಚ್ಚಿಸಬಹುದು. ಕೆಲವು ಕಡೆಗಳಲ್ಲಿ ಕೇಬಲ್ ವೈರ್‌ಗಳು ಗೊಂಚಲಿ ನಂತೆ ನುಲಿದುಕೊಂಡಿರುತ್ತವೆ. ಅಡಚಣೆರಹಿತ, ಜೋರು ಗಾಳಿ ಬೀಸಿದಾಗ ತಂತಿ ತುಂಡಾಗಿ ಪ್ರಾಣಹಾನಿ ಸಂಭವಿಸುವುದನ್ನು ತಡೆಯಲು ಯುಜಿ ಕೇಬಲ್ ಅಳವಡಿಕೆ ಮಾಡಲಾಗುತ್ತದೆ.

ಆಂದೋಲನ: ದಸರಾ ಮಹೋತ್ಸವದ ವೇಳೆಯಲ್ಲಿ ದೀಪಾಲಂಕಾರದಲ್ಲಿ ಹೊಸದಾಗಿ ಏನಾದರೂ ಪರಿಚಯಿಸುವ ಉದ್ದೇಶ ಇದೆಯೇ?

ಕೆ.ಎಂ.ಮುನಿಗೋಪಾಲರಾಜು: ಕಳೆದ ವರ್ಷ ಡ್ರೋನ್ ಹಾರಾಟ ಮಾಡಲಾಗಿತ್ತು. ಈ ಬಾರಿ ರಾಜಮಾರ್ಗಗಳಲ್ಲಿ ವಿಭಿನ್ನ ರೀತಿಯಲ್ಲಿ ದಸರಾ ದೀಪಾಲಂಕಾರ ಮಾಡಲು ಯೋಚಿಸಲಾಗಿದೆ. ಮೂರು ತಿಂಗಳು ಇರುವ ಮುನ್ನವೇ ರೂಪರೇಷೆ ಮಾಡಲಾಗುತ್ತದೆ. ಡ್ರೋನ್ ಹಾರಾಟದ ವೀಕ್ಷಣೆಯಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಅದೇ ರೀತಿ ಪ್ರವಾಸಿಗರಿಗೆ ಮನರಂಜನೆ ಸಿಗುವಂತಹ ರೀತಿಯಲ್ಲಿ ರಾಜಮಾರ್ಗದಲ್ಲಿ ದೀಪಾಲಂಕಾರ ಮಾಡಲಾಗುವುದು. ಅನೇಕ ಕಡೆಗಳಿಂದ ಮಾದರಿಗಳನ್ನು ತರಿಸಿಕೊಂಡು ನೋಡುತ್ತಿದ್ದೇವೆ.

ಆಂದೋಲನ: ವಿದ್ಯುತ್ ಕ್ಷೇತ್ರದ ಬಗ್ಗೆ ನಿಮಗಿರುವ ಅನುಭವವನ್ನು ಯಾವ ರೀತಿ ಬಳಸಿಕೊಳ್ಳುವಿರಿ?

ಕೆ.ಎಂ.ಮುನಿಗೋಪಾಲರಾಜು: ಕೇಂದ್ರ, ರಾಜ್ಯ ಸರ್ಕಾರಗಳ ಅನುದಾನವನ್ನು ಬಳಸಿಕೊಂಡು ಆರ್ಥಿಕ ಪರಿಸ್ಥಿತಿ ಉತ್ತಮಪಡಿಸುವುದಕ್ಕೆ ಗಮನಹರಿಸಿದ್ದೇನೆ. ಕೆಲವು ತಾಲ್ಲೂಕು, ಹೋಬಳಿಗಳಲ್ಲಿ ಕಚೇರಿಗಳು ಇಲ್ಲದ ಕಾರಣ ಹೊಸ ಕಚೇರಿ ನಿರ್ಮಾಣ ಮಾಡುವುದು. ಇಲಾಖೆಯು ಗ್ರಾಹಕ ಸ್ನೇಹಿ, ರೈತರ ಸ್ನೇಹಿಯಾಗಿ ಕೆಲಸ ಮಾಡಬೇಕಾದರೆ ನಾವು ಅದಕ್ಕೆ ಹೊಂದಿಕೊಳ್ಳಬೇಕು. ಇಲಾಖೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿರುವ ನನಗೆ ಸಿಕ್ಕಿರುವ ಜವಾಬ್ದಾರಿಯನ್ನು ಸಮರ್ಥವಾಗಿ ಬಳಸಿಕೊಂಡು ರಾಜ್ಯದಲ್ಲೇ ಅತ್ಯುತ್ತಮ ನಿಗಮವಾಗಿ ರೂಪಿಸುವ ಆಶಯ ಹೊಂದಿದ್ದೇನೆ.

ಆಂದೋಲನ: ಟಿಸಿ ಸುಟ್ಟು ಹೋದರೆ ದುರಸ್ತಿ ವಿಳಂಬವಾಗುತ್ತಿದೆ ಎಂಬ ದೂರು ರೈತರಿಂದ ಕೇಳಿಬರುತ್ತಿದೆಯಲ್ಲಾ?

ಕೆ.ಎಂ.ಮುನಿಗೋಪಾಲರಾಜು: ರೈತರು ಯಾವುದೇ ಸಮಸ್ಯೆ ಹೇಳಿದರೂ ತಕ್ಷಣವೇ ಪರಿಹರಿಸಲು ತಾಕೀತು ಮಾಡಲಾಗಿದೆ. ಪರಿವರ್ತಕ (ಟಿಸಿ) ಸುಟ್ಟು ಹೋದರೆ ೨೪ ಗಂಟೆಗಳೊಳಗೆ ಬದಲಿಸಲಾಗುವುದು. ಕೆಲವು ಕಡೆಗಳಲ್ಲಿ ಒತ್ತಡ ತಾಳದೆ ಟಿಸಿಗಳು ಸುಟ್ಟು ಹೋಗುತ್ತಿವೆ. ಅಂತಹ ಕಡೆಗಳಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರ ದೂರು ಆಲಿಸಲು ಕೇಂದ್ರ ಕಚೇರಿಯಲ್ಲಿ ದಿನದ ೨೪೭ ಟೋಲ್ ಫ್ರೀ ಸಹಾಯವಾಣಿ ಮಾಡಲಾಗಿತ್ತು. ಈಗ ಅದನ್ನು ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ ಜಿಲ್ಲೆಗಳಿಗೂ ವಿಸ್ತರಿಸಲಾಗಿದೆ. ಕೇಂದ್ರ ಕಚೇರಿಗೆ ಕರೆ ಮಾಡಿದರೂ ಸ್ವೀಕರಿಸುವುದಿಲ್ಲ; ಸಂಪರ್ಕ ಸಿಗುವುದಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಹಾಗಾಗಿ ಜೂನ್ ೧ರಿಂದ ವಿಕೇಂದ್ರೀಕರಣ ಮಾಡಲಾಗಿದೆ.

ಆಂದೋಲನ: ಗಿರಿಜನ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಯಾವಾಗ ಮುಗಿಯಲಿದೆ?

ಕೆ.ಎಂ.ಮುನಿಗೋಪಾಲರಾಜು: ಕಾಡಂಚಿನ ಗ್ರಾಮಗಳಿಗೆ ವಿದ್ಯುತ್ ಕೊಡಬೇಕು. ಪ್ರತಿ ಮನೆಗೂ ಸಂಪರ್ಕ ಕಲ್ಪಿಸಬೇಕೆಂಬುದು ಸರ್ಕಾರದ ಬಯಕೆಯಾಗಿದೆ. ಅರಣ್ಯ ಇಲಾಖೆಯ ಅನುಮತಿ ಪಡೆದು ಕೇಬಲ್ ವೈರ್ಗಳನ್ನು ಅಳವಡಿಸಿ ಸಂಪರ್ಕ ಕಲ್ಪಿಸಲಾಗುವುದು. ಈಗಾಗಲೇ ೨೦ ಹಾಡಿಗಳಿಗೆ ನೀಡಿದ್ದೇವೆ. ಮುಂದಿನ ಡಿಸೆಂಬರ್ ತಿಂಗಳೊಳಗೆ ಎಲ್ಲ ಹಾಡಿಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುತ್ತೇವೆ. ಸೋಲಾರ್ ಅಳವಡಿಕೆ ವಿ-ಲವಾಗಿದ್ದರಿಂದ ಯುಜಿ ಕೇಬಲ್ ಮೂಲಕ ಟಿಸಿಗಳನ್ನು ಅಳವಡಿಸಲಾಗಿದೆ. ಇದರಿಂದಾಗಿ ಕಾಡಂಚಿನ ಜನರು ಎದುರಿಸುತ್ತಿದ್ದ ವಿದ್ಯುತ್ ಸಮಸ್ಯೆ ದೂರಾಗಲಿದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

11 mins ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

3 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

5 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

5 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

5 hours ago