Andolana originals

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ

ಮೈಸೂರು: ಭವಿಷ್ಯದಲ್ಲಿ ರಿಂಗ್ ರಸ್ತೆ ಮೇಲೆ ಉಂಟಾಗಬಹುದಾದ ಟ್ರಾಫಿಕ್ ಒತ್ತಡ ತಗ್ಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಹೊರ ವರ್ತುಲ ರಸ್ತೆಯ ೩೫ ಕಡೆಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಲಾಗುತ್ತಿದೆ.

ಮೈಸೂರು ನಗರ ಪೊಲೀಸರು ೪೨.೫ ಕಿ.ಮೀ.ಉದ್ದದ ಔಟರ್ ರಿಂಗ್ ರೋಡ್‌ನಲ್ಲಿ ಈಗಾಗಲೇ ಹಲವು ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಿದ್ದಾರೆ. ಇದೀಗ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಇದರಿಂದ ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ವರ್ಷದ ಹಿಂದೆಯೇ ರಿಂಗ್ ರಸ್ತೆಯಲ್ಲಿ ಹೆಚ್ಚುವರಿ ಸಿಗ್ನಲ್ ಲೈಟ್‌ಗಳನ್ನು ಎಲ್ಲಿ ಅಳವಡಿಸಬೇಕೆಂಬುದರ ಕುರಿತು ಸಮೀಕ್ಷೆ ನಡೆಸಿ ಹೆಚ್ಚುವರಿಯಾಗಿ ೩೫ ಸ್ಥಳಗಳನ್ನು ಗುರುತಿಸಲಾಗಿದೆ.

ರಸ್ತೆ ವಿಭಜಕ (ಮೀಡಿಯನ್) ಇಲ್ಲದಿದ್ದರೆ ಸಿಗ್ನಲ್ ಲೈಟ್ ಅನ್ನು ಆಪರೇಟ್ ಮಾಡಲು ಸಾಧ್ಯವಿಲ್ಲ. ಕೆಂಪು ಸಿಗ್ನಲ್ ಬರುತ್ತಿದ್ದಂತೆ ವಾಹನಗಳನ್ನು ವ್ಯವಸ್ಥಿತವಾಗಿ ನಿಲ್ಲಿಸಲು ಆಗುವುದಿಲ್ಲ. ಹಾಗಾಗಿ ಸಿಗ್ನಲ್ ಲೈಟ್ ಅಳವಡಿಸುವ ರಸ್ತೆಗಳಲ್ಲಿ ಮೀಡಿಯನ್‌ಗಳನ್ನು ನಿರ್ಮಿಸಲಾಗುತ್ತಿದೆ. ಅಲ್ಲದೇ ಇಂತಹ ಸ್ಥಳದಲ್ಲಿ ರಸ್ತೆಯ ಮೇಲೆ ಸಮತಟ್ಟುಗೊಳಿಸುವ(ಆಸ್ಪಾಟ್ಲಿಂಗ್) ಕಾಮಗಾರಿ ಕೈಗೊಳ್ಳಲಾಗಿದೆ.

ಕೆಲವೆಡೆ ರಸ್ತೆಗಳು ಕಿರಿದಾಗಿದ್ದು ಅಗಲ ಮಾಡಲಾಗುತ್ತಿದೆ. ಅಲ್ಲದೇ ಈಗಾಗಲೇ ಗುರುತಿಸಿದ ೩೫ ಸ್ಥಳದಲ್ಲಿ ಸೌರ ವಿದ್ಯುತ್ ನಿಮಿತ್ತ ಸಾಮಾನ್ಯ ವಿದ್ಯುತ್‌ನಿಂದ ಕಾರ್ಯನಿರ್ವಹಿಸುವ ಹೈಬ್ರಿಡ್ ಸಿಗ್ನಲ್ ಲೈಟ್ ಅಳವಡಿಸಲಾಗುತ್ತಿದೆ. ಮುಂಬೈ ಹೊಸದಿಲ್ಲಿಯಂತಹ ದೊಡ್ಡ ನಗರಗಳಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ, ಆಮ್ಲಜನಕದ ಕೊರತೆ ಸಂಚಾರ  ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಮೈಸೂರಿನಂತಹ ನಗರಗಳನ್ನು ಆಯ್ಕೆ ಮಾಡಿಕೊಂಡು ಬಂದು ವಾಸಿಸಲು ಆರಂಭಿಸಿದ್ದಾರೆ. ಅಂತೆಯೇ ಮೈಸೂರು ಈಗ ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಪರಿವರ್ತನೆಗೊಂಡಿದೆ. ಒಂದೂವರೆ ವರ್ಷದಲ್ಲಿ ನಗರದಲ್ಲಿ ಟ್ರಾಫಿಕ್ ದ್ವಿಗುಣಗೊಂಡಿದೆ. ಮುಂದಿನ ೫ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಾಗಲಿದೆ.

ರಿಂಗ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಈ ದೃಷ್ಟಿಯಿಂದ ನಗರ ಹೊರವಲಯದಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸುವ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಖಾತ್ರಿಪಡಿಸುವ ಸಮಗ್ರ ಸಂಚಾರ ನಿರ್ವಹಣಾ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ತುಲ ರಸ್ತೆಯಲ್ಲಿ ವಾಹನ ಸಾಂದ್ರತೆ, ಅಪಘಾತಗಳ ಹೆಚ್ಚಳ, ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಹಾಗಾಗಿ, ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿ ನಿಯಮ ಉಲ್ಲಂಘನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಯೋಜನೆ ಆರಂಭಿಸಲಾಗಿದೆ.

” ಒಂದೂವರೆ ತಿಂಗಳ ಹಿಂದೆಯೇ ಸಿಗ್ನಲ್ ಲೈಟ್ ಅಳವಡಿಸುವ ಕೆಲಸ ಆರಂಭವಾಗಿದೆ. ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ.”

 – ಶಿವಶಂಕರಪ್ಪ, ಸಂಚಾರ ವಿಭಾಗದ ಎಸಿಪಿ

ಆಂದೋಲನ ಡೆಸ್ಕ್

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

14 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

2 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

2 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

3 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

3 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

3 hours ago