Andolana originals

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ

ಮೈಸೂರು: ಭವಿಷ್ಯದಲ್ಲಿ ರಿಂಗ್ ರಸ್ತೆ ಮೇಲೆ ಉಂಟಾಗಬಹುದಾದ ಟ್ರಾಫಿಕ್ ಒತ್ತಡ ತಗ್ಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಹೊರ ವರ್ತುಲ ರಸ್ತೆಯ ೩೫ ಕಡೆಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಲಾಗುತ್ತಿದೆ.

ಮೈಸೂರು ನಗರ ಪೊಲೀಸರು ೪೨.೫ ಕಿ.ಮೀ.ಉದ್ದದ ಔಟರ್ ರಿಂಗ್ ರೋಡ್‌ನಲ್ಲಿ ಈಗಾಗಲೇ ಹಲವು ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಿದ್ದಾರೆ. ಇದೀಗ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಇದರಿಂದ ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ವರ್ಷದ ಹಿಂದೆಯೇ ರಿಂಗ್ ರಸ್ತೆಯಲ್ಲಿ ಹೆಚ್ಚುವರಿ ಸಿಗ್ನಲ್ ಲೈಟ್‌ಗಳನ್ನು ಎಲ್ಲಿ ಅಳವಡಿಸಬೇಕೆಂಬುದರ ಕುರಿತು ಸಮೀಕ್ಷೆ ನಡೆಸಿ ಹೆಚ್ಚುವರಿಯಾಗಿ ೩೫ ಸ್ಥಳಗಳನ್ನು ಗುರುತಿಸಲಾಗಿದೆ.

ರಸ್ತೆ ವಿಭಜಕ (ಮೀಡಿಯನ್) ಇಲ್ಲದಿದ್ದರೆ ಸಿಗ್ನಲ್ ಲೈಟ್ ಅನ್ನು ಆಪರೇಟ್ ಮಾಡಲು ಸಾಧ್ಯವಿಲ್ಲ. ಕೆಂಪು ಸಿಗ್ನಲ್ ಬರುತ್ತಿದ್ದಂತೆ ವಾಹನಗಳನ್ನು ವ್ಯವಸ್ಥಿತವಾಗಿ ನಿಲ್ಲಿಸಲು ಆಗುವುದಿಲ್ಲ. ಹಾಗಾಗಿ ಸಿಗ್ನಲ್ ಲೈಟ್ ಅಳವಡಿಸುವ ರಸ್ತೆಗಳಲ್ಲಿ ಮೀಡಿಯನ್‌ಗಳನ್ನು ನಿರ್ಮಿಸಲಾಗುತ್ತಿದೆ. ಅಲ್ಲದೇ ಇಂತಹ ಸ್ಥಳದಲ್ಲಿ ರಸ್ತೆಯ ಮೇಲೆ ಸಮತಟ್ಟುಗೊಳಿಸುವ(ಆಸ್ಪಾಟ್ಲಿಂಗ್) ಕಾಮಗಾರಿ ಕೈಗೊಳ್ಳಲಾಗಿದೆ.

ಕೆಲವೆಡೆ ರಸ್ತೆಗಳು ಕಿರಿದಾಗಿದ್ದು ಅಗಲ ಮಾಡಲಾಗುತ್ತಿದೆ. ಅಲ್ಲದೇ ಈಗಾಗಲೇ ಗುರುತಿಸಿದ ೩೫ ಸ್ಥಳದಲ್ಲಿ ಸೌರ ವಿದ್ಯುತ್ ನಿಮಿತ್ತ ಸಾಮಾನ್ಯ ವಿದ್ಯುತ್‌ನಿಂದ ಕಾರ್ಯನಿರ್ವಹಿಸುವ ಹೈಬ್ರಿಡ್ ಸಿಗ್ನಲ್ ಲೈಟ್ ಅಳವಡಿಸಲಾಗುತ್ತಿದೆ. ಮುಂಬೈ ಹೊಸದಿಲ್ಲಿಯಂತಹ ದೊಡ್ಡ ನಗರಗಳಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ, ಆಮ್ಲಜನಕದ ಕೊರತೆ ಸಂಚಾರ  ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಮೈಸೂರಿನಂತಹ ನಗರಗಳನ್ನು ಆಯ್ಕೆ ಮಾಡಿಕೊಂಡು ಬಂದು ವಾಸಿಸಲು ಆರಂಭಿಸಿದ್ದಾರೆ. ಅಂತೆಯೇ ಮೈಸೂರು ಈಗ ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಪರಿವರ್ತನೆಗೊಂಡಿದೆ. ಒಂದೂವರೆ ವರ್ಷದಲ್ಲಿ ನಗರದಲ್ಲಿ ಟ್ರಾಫಿಕ್ ದ್ವಿಗುಣಗೊಂಡಿದೆ. ಮುಂದಿನ ೫ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಾಗಲಿದೆ.

ರಿಂಗ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಈ ದೃಷ್ಟಿಯಿಂದ ನಗರ ಹೊರವಲಯದಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸುವ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಖಾತ್ರಿಪಡಿಸುವ ಸಮಗ್ರ ಸಂಚಾರ ನಿರ್ವಹಣಾ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ತುಲ ರಸ್ತೆಯಲ್ಲಿ ವಾಹನ ಸಾಂದ್ರತೆ, ಅಪಘಾತಗಳ ಹೆಚ್ಚಳ, ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಹಾಗಾಗಿ, ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿ ನಿಯಮ ಉಲ್ಲಂಘನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಯೋಜನೆ ಆರಂಭಿಸಲಾಗಿದೆ.

” ಒಂದೂವರೆ ತಿಂಗಳ ಹಿಂದೆಯೇ ಸಿಗ್ನಲ್ ಲೈಟ್ ಅಳವಡಿಸುವ ಕೆಲಸ ಆರಂಭವಾಗಿದೆ. ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ.”

 – ಶಿವಶಂಕರಪ್ಪ, ಸಂಚಾರ ವಿಭಾಗದ ಎಸಿಪಿ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

2 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

2 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

2 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

3 hours ago