Andolana originals

ರಿಂಗ್ ರಸ್ತೆಯಲ್ಲಿ ಸಿಗ್ನಲ್ ಲೈಟ್‌ಗಳ ಅಳವಡಿಕೆ

೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ

ಮೈಸೂರು: ಭವಿಷ್ಯದಲ್ಲಿ ರಿಂಗ್ ರಸ್ತೆ ಮೇಲೆ ಉಂಟಾಗಬಹುದಾದ ಟ್ರಾಫಿಕ್ ಒತ್ತಡ ತಗ್ಗಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ಪೊಲೀಸ್ ಇಲಾಖೆಯು ಹೊರ ವರ್ತುಲ ರಸ್ತೆಯ ೩೫ ಕಡೆಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಲಾಗುತ್ತಿದೆ.

ಮೈಸೂರು ನಗರ ಪೊಲೀಸರು ೪೨.೫ ಕಿ.ಮೀ.ಉದ್ದದ ಔಟರ್ ರಿಂಗ್ ರೋಡ್‌ನಲ್ಲಿ ಈಗಾಗಲೇ ಹಲವು ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಿದ್ದಾರೆ. ಇದೀಗ ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕರು ಪರದಾಡುವಂತಾಗಿದೆ. ಇದರಿಂದ ಸಣ್ಣ ಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ವರ್ಷದ ಹಿಂದೆಯೇ ರಿಂಗ್ ರಸ್ತೆಯಲ್ಲಿ ಹೆಚ್ಚುವರಿ ಸಿಗ್ನಲ್ ಲೈಟ್‌ಗಳನ್ನು ಎಲ್ಲಿ ಅಳವಡಿಸಬೇಕೆಂಬುದರ ಕುರಿತು ಸಮೀಕ್ಷೆ ನಡೆಸಿ ಹೆಚ್ಚುವರಿಯಾಗಿ ೩೫ ಸ್ಥಳಗಳನ್ನು ಗುರುತಿಸಲಾಗಿದೆ.

ರಸ್ತೆ ವಿಭಜಕ (ಮೀಡಿಯನ್) ಇಲ್ಲದಿದ್ದರೆ ಸಿಗ್ನಲ್ ಲೈಟ್ ಅನ್ನು ಆಪರೇಟ್ ಮಾಡಲು ಸಾಧ್ಯವಿಲ್ಲ. ಕೆಂಪು ಸಿಗ್ನಲ್ ಬರುತ್ತಿದ್ದಂತೆ ವಾಹನಗಳನ್ನು ವ್ಯವಸ್ಥಿತವಾಗಿ ನಿಲ್ಲಿಸಲು ಆಗುವುದಿಲ್ಲ. ಹಾಗಾಗಿ ಸಿಗ್ನಲ್ ಲೈಟ್ ಅಳವಡಿಸುವ ರಸ್ತೆಗಳಲ್ಲಿ ಮೀಡಿಯನ್‌ಗಳನ್ನು ನಿರ್ಮಿಸಲಾಗುತ್ತಿದೆ. ಅಲ್ಲದೇ ಇಂತಹ ಸ್ಥಳದಲ್ಲಿ ರಸ್ತೆಯ ಮೇಲೆ ಸಮತಟ್ಟುಗೊಳಿಸುವ(ಆಸ್ಪಾಟ್ಲಿಂಗ್) ಕಾಮಗಾರಿ ಕೈಗೊಳ್ಳಲಾಗಿದೆ.

ಕೆಲವೆಡೆ ರಸ್ತೆಗಳು ಕಿರಿದಾಗಿದ್ದು ಅಗಲ ಮಾಡಲಾಗುತ್ತಿದೆ. ಅಲ್ಲದೇ ಈಗಾಗಲೇ ಗುರುತಿಸಿದ ೩೫ ಸ್ಥಳದಲ್ಲಿ ಸೌರ ವಿದ್ಯುತ್ ನಿಮಿತ್ತ ಸಾಮಾನ್ಯ ವಿದ್ಯುತ್‌ನಿಂದ ಕಾರ್ಯನಿರ್ವಹಿಸುವ ಹೈಬ್ರಿಡ್ ಸಿಗ್ನಲ್ ಲೈಟ್ ಅಳವಡಿಸಲಾಗುತ್ತಿದೆ. ಮುಂಬೈ ಹೊಸದಿಲ್ಲಿಯಂತಹ ದೊಡ್ಡ ನಗರಗಳಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ, ಆಮ್ಲಜನಕದ ಕೊರತೆ ಸಂಚಾರ  ದಟ್ಟಣೆಯಿಂದ ತಪ್ಪಿಸಿಕೊಳ್ಳಲು ಅಲ್ಲಿನ ಜನ ಮೈಸೂರಿನಂತಹ ನಗರಗಳನ್ನು ಆಯ್ಕೆ ಮಾಡಿಕೊಂಡು ಬಂದು ವಾಸಿಸಲು ಆರಂಭಿಸಿದ್ದಾರೆ. ಅಂತೆಯೇ ಮೈಸೂರು ಈಗ ದೇಶದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಪರಿವರ್ತನೆಗೊಂಡಿದೆ. ಒಂದೂವರೆ ವರ್ಷದಲ್ಲಿ ನಗರದಲ್ಲಿ ಟ್ರಾಫಿಕ್ ದ್ವಿಗುಣಗೊಂಡಿದೆ. ಮುಂದಿನ ೫ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಾಗಲಿದೆ.

ರಿಂಗ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಈ ದೃಷ್ಟಿಯಿಂದ ನಗರ ಹೊರವಲಯದಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸುವ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಖಾತ್ರಿಪಡಿಸುವ ಸಮಗ್ರ ಸಂಚಾರ ನಿರ್ವಹಣಾ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರ್ತುಲ ರಸ್ತೆಯಲ್ಲಿ ವಾಹನ ಸಾಂದ್ರತೆ, ಅಪಘಾತಗಳ ಹೆಚ್ಚಳ, ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಹಾಗಾಗಿ, ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿ ನಿಯಮ ಉಲ್ಲಂಘನೆಗಳನ್ನು ತಡೆಯುವ ನಿಟ್ಟಿನಲ್ಲಿ ಈ ಯೋಜನೆ ಆರಂಭಿಸಲಾಗಿದೆ.

” ಒಂದೂವರೆ ತಿಂಗಳ ಹಿಂದೆಯೇ ಸಿಗ್ನಲ್ ಲೈಟ್ ಅಳವಡಿಸುವ ಕೆಲಸ ಆರಂಭವಾಗಿದೆ. ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ.”

 – ಶಿವಶಂಕರಪ್ಪ, ಸಂಚಾರ ವಿಭಾಗದ ಎಸಿಪಿ

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

4 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

5 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

7 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

8 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

12 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

15 hours ago