Andolana originals

ಗಣೇಶ್ ಪ್ರಸಾದ್‌ಗೆ ಒಲಿಯುವುದೇ ಮಂತ್ರಿ ಭಾಗ್ಯ?

ಹಳೇ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕನಿಗೆ ಸಚಿವ ಸ್ಥಾನದ ನಿರೀಕ್ಷೆ 

ಗುಂಡ್ಲುಪೇಟೆ: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾದಲ್ಲಿ ಹಳೇ ಮೈಸೂರು ಭಾಗದ ಏಕೈಕ ವೀರಶೈವ ಲಿಂಗಾಯತ ಸಮುದಾಯದವರಾದ, ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಒತ್ತಾಯ ಹಳೇ ಮೈಸೂರು ಭಾಗದ ವೀರಶೈವ ಲಿಂಗಾಯತ ಸಮುದಾಯದಿಂದ ಕೇಳಿಬಂದಿದೆ.

ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಗಣೇಶ್ ಪ್ರಸಾದ್ 36,675 ಮತಗಳ ಅಂತರದಿಂದ ಗೆದ್ದಿದ್ದಾರೆ. ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾಗಿ, ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ವೈಯಕ್ತಿಕವಾಗಿ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಗಣೇಶ್ ಪ್ರಭಾವಿ ನಾಯಕನಾಗಿ ಗುರುತಿಸಿಕೊಳ್ಳುತ್ತಿದ್ದು, ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರಾಧಾನ್ಯತೆ ನೀಡಿ ಸಚಿವ ಸ್ಥಾನ ನೀಡಬೇಕೆಂದು ಸಮುದಾಯದವರು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ಬಿಹಾರ ಫಲಿತಾಂಶವು ನಿತೀಶ್ ಕುಮಾರ್ ಚಾಣಾಕ್ಷತೆಯ ಕೊಡುಗೆ

ಶಾಸಕ ಗಣೇಶ್ ಪ್ರಸಾದ್ ತಂದೆ ಎಚ್.ಎಸ್. ಮಹದೇವ ಪ್ರಸಾದ್ ಅವರು ಐದು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ, ಸಿದ್ದರಾಮಯ್ಯನವರ ಪರಮಾಪ್ತರಾಗಿದ್ದರು. ತಾಯಿ ಡಾ.ಗೀತಾ ಮಹದೇವಪ್ರಸಾದ್ ಪತಿಯ ನಿಧನದ ನಂತರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಸಚಿವರಾಗಿದ್ದರು. ಗಣೇಶ್ ಪ್ರಸಾದ್ ಈಗ ಸಹಕಾರ ಕ್ಷೇತ್ರಕ್ಕೂ ಕಾಲಿರಿಸಿದ್ದು, ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆಯಲ್ಲಿ ಮತ ಪಡೆದು ಗೆಲುವು ಸಾಧಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಅವರಿಗೆ ಸಚಿವ ಸ್ಥಾನ ಸಿಕ್ಕರೆ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎನ್ನುವುದು ಮುಖಂಡರ ಅನಿಸಿಕೆಯಾಗಿದೆ.

” ಜನರ ಪ್ರೀತಿ ಸಂಪಾದಿಸಿ, ಅಭಿವೃದ್ಧಿಪರಚಿಂತನೆ ಮಾಡುವ ಗಣೇಶ್ ಪ್ರಸಾದ್‌ಗೆ ಕಾಂಗ್ರೆಸ್ ಹೈಕಮಾಂಡ್‌ನವರು, ರಾಜ್ಯ ನಾಯಕರು ಸಚಿವ ಸ್ಥಾನ ನೀಡಬೇಕೆಂದು ಅವರ ಅಭಿಮಾನಿಗಳು ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಪಾಳೆಯದಲ್ಲಿ ಗುರುತಿಸಿ ಕೊಂಡು ಅವರಿಗೆ ಆತ್ಮೀಯರಾಗಿದ್ದ ದಿ.ಎಚ್. ಎಂ.ಮಹದೇವಪ್ರಸಾದ್ ಕುಟುಂಬದ ಮೇಲೆ ಜನರ ಅಭಿಮಾನ, ಪ್ರೀತಿ ಈಗಲೂ ಇದೆ. ಆದ್ದರಿಂದ ಮಹದೇವ ಪ್ರಸಾದ್ ಮಗನಿಗೂ ಮಂತ್ರಿ ಸ್ಥಾನ ನೀಡಬೇಕು. ಸಿದ್ದರಾಮಯ್ಯನವರು ಹಳೇ ಮೈಸೂರು ಭಾಗದ ವೀರಶೈವ ಲಿಂಗಾಯತ ಶಾಸಕನ ಕೈ ಹಿಡಿದು ಮಂತ್ರಿಸ್ಥಾನ ನೀಡಬೇಕು ಎಂಬುದು ತಾಲ್ಲೂಕಿನ ಜನರ ಆಶಯವೂ ಆಗಿದೆ.”

ಮಹೇಂದ್ರ ಹಸಗೂಲಿ

ಆಂದೋಲನ ಡೆಸ್ಕ್

Recent Posts

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 mins ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

38 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago