Andolana originals

ಗಣೇಶ್ ಪ್ರಸಾದ್‌ಗೆ ಒಲಿಯುವುದೇ ಮಂತ್ರಿ ಭಾಗ್ಯ?

ಹಳೇ ಮೈಸೂರು ಭಾಗದ ಏಕೈಕ ಲಿಂಗಾಯತ ಶಾಸಕನಿಗೆ ಸಚಿವ ಸ್ಥಾನದ ನಿರೀಕ್ಷೆ 

ಗುಂಡ್ಲುಪೇಟೆ: ರಾಜ್ಯ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾದಲ್ಲಿ ಹಳೇ ಮೈಸೂರು ಭಾಗದ ಏಕೈಕ ವೀರಶೈವ ಲಿಂಗಾಯತ ಸಮುದಾಯದವರಾದ, ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂಬ ಒತ್ತಾಯ ಹಳೇ ಮೈಸೂರು ಭಾಗದ ವೀರಶೈವ ಲಿಂಗಾಯತ ಸಮುದಾಯದಿಂದ ಕೇಳಿಬಂದಿದೆ.

ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಗಣೇಶ್ ಪ್ರಸಾದ್ 36,675 ಮತಗಳ ಅಂತರದಿಂದ ಗೆದ್ದಿದ್ದಾರೆ. ಗುಂಡ್ಲುಪೇಟೆ ಕ್ಷೇತ್ರದ ಶಾಸಕರಾಗಿ, ಅಭಿವೃದ್ಧಿ ಕಾಮಗಾರಿಗಳ ಜೊತೆಗೆ ವೈಯಕ್ತಿಕವಾಗಿ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಗಣೇಶ್ ಪ್ರಭಾವಿ ನಾಯಕನಾಗಿ ಗುರುತಿಸಿಕೊಳ್ಳುತ್ತಿದ್ದು, ವೀರಶೈವ ಲಿಂಗಾಯತ ಸಮುದಾಯಕ್ಕೆ ಪ್ರಾಧಾನ್ಯತೆ ನೀಡಿ ಸಚಿವ ಸ್ಥಾನ ನೀಡಬೇಕೆಂದು ಸಮುದಾಯದವರು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ಬಿಹಾರ ಫಲಿತಾಂಶವು ನಿತೀಶ್ ಕುಮಾರ್ ಚಾಣಾಕ್ಷತೆಯ ಕೊಡುಗೆ

ಶಾಸಕ ಗಣೇಶ್ ಪ್ರಸಾದ್ ತಂದೆ ಎಚ್.ಎಸ್. ಮಹದೇವ ಪ್ರಸಾದ್ ಅವರು ಐದು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ, ಸಿದ್ದರಾಮಯ್ಯನವರ ಪರಮಾಪ್ತರಾಗಿದ್ದರು. ತಾಯಿ ಡಾ.ಗೀತಾ ಮಹದೇವಪ್ರಸಾದ್ ಪತಿಯ ನಿಧನದ ನಂತರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಸಚಿವರಾಗಿದ್ದರು. ಗಣೇಶ್ ಪ್ರಸಾದ್ ಈಗ ಸಹಕಾರ ಕ್ಷೇತ್ರಕ್ಕೂ ಕಾಲಿರಿಸಿದ್ದು, ಮೈಸೂರು- ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆಯಲ್ಲಿ ಮತ ಪಡೆದು ಗೆಲುವು ಸಾಧಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಅವರಿಗೆ ಸಚಿವ ಸ್ಥಾನ ಸಿಕ್ಕರೆ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎನ್ನುವುದು ಮುಖಂಡರ ಅನಿಸಿಕೆಯಾಗಿದೆ.

” ಜನರ ಪ್ರೀತಿ ಸಂಪಾದಿಸಿ, ಅಭಿವೃದ್ಧಿಪರಚಿಂತನೆ ಮಾಡುವ ಗಣೇಶ್ ಪ್ರಸಾದ್‌ಗೆ ಕಾಂಗ್ರೆಸ್ ಹೈಕಮಾಂಡ್‌ನವರು, ರಾಜ್ಯ ನಾಯಕರು ಸಚಿವ ಸ್ಥಾನ ನೀಡಬೇಕೆಂದು ಅವರ ಅಭಿಮಾನಿಗಳು ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಪಾಳೆಯದಲ್ಲಿ ಗುರುತಿಸಿ ಕೊಂಡು ಅವರಿಗೆ ಆತ್ಮೀಯರಾಗಿದ್ದ ದಿ.ಎಚ್. ಎಂ.ಮಹದೇವಪ್ರಸಾದ್ ಕುಟುಂಬದ ಮೇಲೆ ಜನರ ಅಭಿಮಾನ, ಪ್ರೀತಿ ಈಗಲೂ ಇದೆ. ಆದ್ದರಿಂದ ಮಹದೇವ ಪ್ರಸಾದ್ ಮಗನಿಗೂ ಮಂತ್ರಿ ಸ್ಥಾನ ನೀಡಬೇಕು. ಸಿದ್ದರಾಮಯ್ಯನವರು ಹಳೇ ಮೈಸೂರು ಭಾಗದ ವೀರಶೈವ ಲಿಂಗಾಯತ ಶಾಸಕನ ಕೈ ಹಿಡಿದು ಮಂತ್ರಿಸ್ಥಾನ ನೀಡಬೇಕು ಎಂಬುದು ತಾಲ್ಲೂಕಿನ ಜನರ ಆಶಯವೂ ಆಗಿದೆ.”

ಮಹೇಂದ್ರ ಹಸಗೂಲಿ

ಆಂದೋಲನ ಡೆಸ್ಕ್

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

55 mins ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

1 hour ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

2 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

3 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

6 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

7 hours ago