Andolana originals

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ

ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೇ ಪುಸ್ತಕಗಳನ್ನು ಬಿಇಒಗಳ ಕಚೇರಿ ಮೂಲಕ ಆಯಾ ಶಾಲೆಗಳಿಗೆ ರವಾನಿಸುತ್ತಿತ್ತು. ಈ ಬಾರಿ ಆ ಹೊಣೆ ಶಿಕ್ಷಕರ ಹೆಗಲೇರಿದೆ. ಆದರೆ, ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳನ್ನು ನೇರವಾಗಿ ರವಾನಿಸುತ್ತಿರುವುದಾಗಿ ಪ್ರತಿಪಾದಿಸಿದೆ.

ಒಬ್ಬ ವಿದ್ಯಾರ್ಥಿಗೆ ವಿಷಯವಾರು ಭಾಗ-೧ ಮತ್ತು ಭಾಗ-೨, ಡೈರಿ, ಮೌಲ್ಯ ಶಿಕ್ಷಣ ಪುಸ್ತಕ, ದೈಹಿಕ ಶಿಕ್ಷಣ, ಕನ್ನಡ, ಗಣಿತ, ಇಂಗ್ಲಿಷ್ ವಿಷಯಗಳಿಗೆ ವರ್ಕ್ ಬುಕ್ ಸೇರಿದಂತೆ ಸುಮಾರು ೨೦ಕ್ಕೂ ಹೆಚ್ಚು ಪುಸ್ತಕಗಳನ್ನು ಸರ್ಕಾರ ಒದಗಿಸುತ್ತದೆ. ನೂರಾರು ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಸಾವಿರಾರು ಪುಸ್ತಕಗಳು ಸರಬರಾಜಾಗುತ್ತವೆ. ಅವುಗಳನ್ನು ಇಲಾಖೆಯೇ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಗಳು ಬಿಆರ್‌ಸಿ ಕಚೇರಿ ಮೂಲಕ ಶಾಲೆಗಳಿಗೆ ತಲುಪಿಸಬೇಕು.

ಪ್ರತಿವರ್ಷ ಶಾಲಾ ಮುಖ್ಯಶಿಕ್ಷಕರಿಗೆ ಪಠ್ಯಪುಸ್ತಕಗಳನ್ನು ತೆಗೆದುಕೊಂಡು ಹೋಗಲು ಅನುದಾನ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಹಣ ಬಂದಿಲ್ಲ. ಹಾಗಾಗಿ ಶಿಕ್ಷಕರೇ ಪಠ್ಯಪುಸ್ತಕಗಳನ್ನು ತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎನ್ನಲಾಗಿದೆ. ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಗಳಿಗೆ ಸರ್ಕಾರದಿಂದ ಪುಸ್ತಕಗಳು ತಲುಪಿದ ನಂತರ, ಅಲ್ಲಿಂದ ಶಾಲೆಗಳಿಗೆ ಸಾಗಿಸುವ ಹೊಣೆಗಾರಿಕೆ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರದ್ದಾಗಿರುತ್ತದೆ. ಪರಿಣಾಮವಾಗಿ ಶಿಕ್ಷಕರು ತಮ್ಮ ಬೋಧನಾ ಕರ್ತವ್ಯಗಳನ್ನು ಬದಿಗಿಟ್ಟು ಪುಸ್ತಕ ಸಾಗಣೆ ಮಾಡಬೇಕಿದೆ.

ಕೆಲವು ಶಾಲೆಗಳ ಶಿಕ್ಷಕರು ವೈಯಕ್ತಿಕ ಖರ್ಚಿನಿಂದ ಬಾಡಿಗೆ ವಾಹನಗಳನ್ನು ಮಾಡಿಕೊಂಡು ಪುಸ್ತಕಗಳನ್ನು ಸಾಗಿಸುತ್ತಿದ್ದಾರೆ. ಇನ್ನೂ ಕೆಲವು ಕಡೆ ತಮ್ಮ ಸ್ವಂತ ವಾಹನಗಳಲ್ಲಿ ಹಂತ ಹಂತವಾಗಿ ಪುಸ್ತಕಗಳನ್ನು ಕೊಂಡೊಯ್ಯಲಾಗುತ್ತಿದೆ. ಇದರಿಂದ ಸಮಯ ಹಾಗೂ ಹಣ ಎರಡೂ ವ್ಯಯವಾಗುತ್ತಿದೆ.

” ಪುಸ್ತಕಗಳನ್ನು ತರಬೇಕಾದ ಹೊಣೆ ಬಿದ್ದಿರುವುದು ಗ್ರಾಮೀಣ ಪ್ರದೇಶದ ಶಾಲೆಯ ಶಿಕ್ಷಕರನ್ನು ಬಹಳಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಬಿಆರ್‌ಸಿ ಕೇಂದ್ರ, ಬಿಇಒ ಕಚೇರಿಗಳಿಂದ ಪುಸ್ತಕ ತೆಗೆದುಕೊಂಡು ಹೋಗಿ ಎನ್ನುತ್ತಾರೆ. ಶಿಕ್ಷಕರನ್ನು ಇತರೆ ಕೆಲಸಕ್ಕೆ ಬಳಕೆ ಮಾಡಿಕೊಂಡು ಪರದಾಡಿಸುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಅನ್ಯಾಯವಾಗುವ ಜೊತೆಗೆ ಶಿಕ್ಷಕರು ತಮಗೂ ಅನ್ಯಾಯ ಮಾಡಿಕೊಳ್ಳುತ್ತಿದ್ದಾರೆ.”

– ಕೆ.ಬಿ.ಸೋಮೇಗೌಡ, ಮಾಜಿ ಅಧ್ಯಕ್ಷ, ಜಿಲ್ಲಾ ಶಾಲಾ ಶಿಕ್ಷಕರ ಸಂಘ

” ಶಾಲೆಯ ಮುಖ್ಯ ಶಿಕ್ಷಕರು ಅಥವಾ ಶಿಕ್ಷಕರು ಬಿಇಒ, ಬಿಆರ್‌ಸಿ ಕೇಂದ್ರ ಕಚೇರಿಯಿಂದ ಪುಸ್ತಕಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ಆರೋಪ ಸತ್ಯಕ್ಕೆ ದೂರವಾದದ್ದು. ಜಿಲ್ಲೆಯ ಪ್ರತಿ ಶಾಲೆಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದಲೇ ಪುಸ್ತಕಗಳನ್ನು ತಲುಪಿಸಲಾಗುತ್ತಿದೆ. ಯಾವುದೇ ಶಿಕ್ಷಕರೂ ಜಿಲ್ಲಾ ಕೇಂದ್ರ ಸ್ಥಳಕ್ಕೆ ಬಂದು ಪುಸ್ತಕಗಳನ್ನು ತೆಗೆದುಕೊಂಡು ಹೋಗುತ್ತಿಲ್ಲ. ಹಂತ ಹಂತವಾಗಿ ಪುಸ್ತಕಗಳನ್ನು ತಲುಪಿಸಲಾಗುತ್ತಿದೆ.”

– ಡಿ.ಉದಯಕುಮಾರ್, ಉಪ ನಿರ್ದೇಶಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

” ಪಠ್ಯ ಪುಸ್ತಕಗಳನ್ನು ಆಯಾ ಶಾಲೆಗಳಿಗೆ ತಲುಪಿಸುವ ಕಾರ್ಯ ನಡೆಯುತ್ತಿದೆ. ಕೆಲವು ತಾಲ್ಲೂಕುಗಳಿಗೆ ಎಲ್ಲ ಪುಸ್ತಕಗಳೂ ತಲುಪಿವೆ. ಕೆಲವೊಂದು ತಾಲ್ಲೂಕುಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತಲುಪದೇ ಇರಬಹುದು. ಒಬ್ಬ ವಿದ್ಯಾರ್ಥಿಯ ಪುಸ್ತಕ ಸಾಗಣೆ ವೆಚ್ಚ ೪ ರೂ. ಇರುತ್ತದೆ. ಯಾವ ಶಾಲೆಗೂ ಮೊದಲೇ ‘ಸಿಜಿ’ ಅನುದಾನ ಬ್ಯಾಂಕ್ ಖಾತೆಗೆ ಬರುವುದಿಲ್ಲ. ಈ ಬಾರಿ ಕೊಂಚ ತಡವಾಗಿರಬಹುದು.”

– ಶಶಿಕುಮಾರ್, ಅಧ್ಯಕ್ಷರು, ಜಿಲ್ಲಾ ಶಾಲಾ ಶಿಕ್ಷಕರ ಸಂಘ

ಪಠ್ಯಪುಸ್ತಕಗಳ ಕೊರತೆ: 

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಆರಂಭವಾಗಿ ತಿಂಗಳು ತುಂಬುತ್ತಾ ಬಂದರೂ ಸಮರ್ಪಕವಾಗಿ ಪಠ್ಯಪುಸ್ತಕಗಳು ವಿದ್ಯಾರ್ಥಿಗಳ ಕೈ ಸೇರಿಲ್ಲ. ಸಾಮಾನ್ಯವಾಗಿ ಶಾಲೆ ಆರಂಭವಾಗಿ ಮೊದಲ ತಿಂಗಳಲ್ಲಿಯೇ ಪಠ್ಯಪುಸ್ತಕಗಳು ಶಾಲೆಗೆ ಬರುತ್ತಿದ್ದವು. ಆದರೆ, ಈ ಬಾರಿ ಸಮಪರ್ಕವಾಗಿ ಪುಸ್ತಕಗಳು ದೊರೆತಿಲ್ಲ. ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಭಾಗ ೧ ಬಂದಿಲ್ಲ. ಇದರ ಜೊತೆಗೆ ಶಿಕ್ಷಕರೇ ಪಠ್ಯಪುಸ್ತಕಗಳನ್ನು ತರಬೇಕಾಗಿರುವುದೂ ವಿಳಂಬಕ್ಕೆ ಮತ್ತೊಂದು ಕಾರಣವಾಗಿದೆ ಎಂಬುದು ಹೆಸರು ಹೇಳಲು ಇಚ್ಛಿಸದ ಶಿಕ್ಷಕರೊಬ್ಬರ ಮಾತು.

 

 

ಆಂದೋಲನ ಡೆಸ್ಕ್

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

1 min ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

4 mins ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

10 mins ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

12 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

14 hours ago