Andolana originals

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ

ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೇ ಪುಸ್ತಕಗಳನ್ನು ಬಿಇಒಗಳ ಕಚೇರಿ ಮೂಲಕ ಆಯಾ ಶಾಲೆಗಳಿಗೆ ರವಾನಿಸುತ್ತಿತ್ತು. ಈ ಬಾರಿ ಆ ಹೊಣೆ ಶಿಕ್ಷಕರ ಹೆಗಲೇರಿದೆ. ಆದರೆ, ಶಿಕ್ಷಣ ಇಲಾಖೆ ಪಠ್ಯಪುಸ್ತಕಗಳನ್ನು ನೇರವಾಗಿ ರವಾನಿಸುತ್ತಿರುವುದಾಗಿ ಪ್ರತಿಪಾದಿಸಿದೆ.

ಒಬ್ಬ ವಿದ್ಯಾರ್ಥಿಗೆ ವಿಷಯವಾರು ಭಾಗ-೧ ಮತ್ತು ಭಾಗ-೨, ಡೈರಿ, ಮೌಲ್ಯ ಶಿಕ್ಷಣ ಪುಸ್ತಕ, ದೈಹಿಕ ಶಿಕ್ಷಣ, ಕನ್ನಡ, ಗಣಿತ, ಇಂಗ್ಲಿಷ್ ವಿಷಯಗಳಿಗೆ ವರ್ಕ್ ಬುಕ್ ಸೇರಿದಂತೆ ಸುಮಾರು ೨೦ಕ್ಕೂ ಹೆಚ್ಚು ಪುಸ್ತಕಗಳನ್ನು ಸರ್ಕಾರ ಒದಗಿಸುತ್ತದೆ. ನೂರಾರು ವಿದ್ಯಾರ್ಥಿಗಳಿರುವ ಶಾಲೆಗಳಿಗೆ ಸಾವಿರಾರು ಪುಸ್ತಕಗಳು ಸರಬರಾಜಾಗುತ್ತವೆ. ಅವುಗಳನ್ನು ಇಲಾಖೆಯೇ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಗಳು ಬಿಆರ್‌ಸಿ ಕಚೇರಿ ಮೂಲಕ ಶಾಲೆಗಳಿಗೆ ತಲುಪಿಸಬೇಕು.

ಪ್ರತಿವರ್ಷ ಶಾಲಾ ಮುಖ್ಯಶಿಕ್ಷಕರಿಗೆ ಪಠ್ಯಪುಸ್ತಕಗಳನ್ನು ತೆಗೆದುಕೊಂಡು ಹೋಗಲು ಅನುದಾನ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಹಣ ಬಂದಿಲ್ಲ. ಹಾಗಾಗಿ ಶಿಕ್ಷಕರೇ ಪಠ್ಯಪುಸ್ತಕಗಳನ್ನು ತೆಗೆದುಕೊಂಡು ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎನ್ನಲಾಗಿದೆ. ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಗಳಿಗೆ ಸರ್ಕಾರದಿಂದ ಪುಸ್ತಕಗಳು ತಲುಪಿದ ನಂತರ, ಅಲ್ಲಿಂದ ಶಾಲೆಗಳಿಗೆ ಸಾಗಿಸುವ ಹೊಣೆಗಾರಿಕೆ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರದ್ದಾಗಿರುತ್ತದೆ. ಪರಿಣಾಮವಾಗಿ ಶಿಕ್ಷಕರು ತಮ್ಮ ಬೋಧನಾ ಕರ್ತವ್ಯಗಳನ್ನು ಬದಿಗಿಟ್ಟು ಪುಸ್ತಕ ಸಾಗಣೆ ಮಾಡಬೇಕಿದೆ.

ಕೆಲವು ಶಾಲೆಗಳ ಶಿಕ್ಷಕರು ವೈಯಕ್ತಿಕ ಖರ್ಚಿನಿಂದ ಬಾಡಿಗೆ ವಾಹನಗಳನ್ನು ಮಾಡಿಕೊಂಡು ಪುಸ್ತಕಗಳನ್ನು ಸಾಗಿಸುತ್ತಿದ್ದಾರೆ. ಇನ್ನೂ ಕೆಲವು ಕಡೆ ತಮ್ಮ ಸ್ವಂತ ವಾಹನಗಳಲ್ಲಿ ಹಂತ ಹಂತವಾಗಿ ಪುಸ್ತಕಗಳನ್ನು ಕೊಂಡೊಯ್ಯಲಾಗುತ್ತಿದೆ. ಇದರಿಂದ ಸಮಯ ಹಾಗೂ ಹಣ ಎರಡೂ ವ್ಯಯವಾಗುತ್ತಿದೆ.

” ಪುಸ್ತಕಗಳನ್ನು ತರಬೇಕಾದ ಹೊಣೆ ಬಿದ್ದಿರುವುದು ಗ್ರಾಮೀಣ ಪ್ರದೇಶದ ಶಾಲೆಯ ಶಿಕ್ಷಕರನ್ನು ಬಹಳಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಬಿಆರ್‌ಸಿ ಕೇಂದ್ರ, ಬಿಇಒ ಕಚೇರಿಗಳಿಂದ ಪುಸ್ತಕ ತೆಗೆದುಕೊಂಡು ಹೋಗಿ ಎನ್ನುತ್ತಾರೆ. ಶಿಕ್ಷಕರನ್ನು ಇತರೆ ಕೆಲಸಕ್ಕೆ ಬಳಕೆ ಮಾಡಿಕೊಂಡು ಪರದಾಡಿಸುತ್ತಿದ್ದಾರೆ. ಇದರಿಂದ ಮಕ್ಕಳಿಗೆ ಅನ್ಯಾಯವಾಗುವ ಜೊತೆಗೆ ಶಿಕ್ಷಕರು ತಮಗೂ ಅನ್ಯಾಯ ಮಾಡಿಕೊಳ್ಳುತ್ತಿದ್ದಾರೆ.”

– ಕೆ.ಬಿ.ಸೋಮೇಗೌಡ, ಮಾಜಿ ಅಧ್ಯಕ್ಷ, ಜಿಲ್ಲಾ ಶಾಲಾ ಶಿಕ್ಷಕರ ಸಂಘ

” ಶಾಲೆಯ ಮುಖ್ಯ ಶಿಕ್ಷಕರು ಅಥವಾ ಶಿಕ್ಷಕರು ಬಿಇಒ, ಬಿಆರ್‌ಸಿ ಕೇಂದ್ರ ಕಚೇರಿಯಿಂದ ಪುಸ್ತಕಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ಆರೋಪ ಸತ್ಯಕ್ಕೆ ದೂರವಾದದ್ದು. ಜಿಲ್ಲೆಯ ಪ್ರತಿ ಶಾಲೆಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದಲೇ ಪುಸ್ತಕಗಳನ್ನು ತಲುಪಿಸಲಾಗುತ್ತಿದೆ. ಯಾವುದೇ ಶಿಕ್ಷಕರೂ ಜಿಲ್ಲಾ ಕೇಂದ್ರ ಸ್ಥಳಕ್ಕೆ ಬಂದು ಪುಸ್ತಕಗಳನ್ನು ತೆಗೆದುಕೊಂಡು ಹೋಗುತ್ತಿಲ್ಲ. ಹಂತ ಹಂತವಾಗಿ ಪುಸ್ತಕಗಳನ್ನು ತಲುಪಿಸಲಾಗುತ್ತಿದೆ.”

– ಡಿ.ಉದಯಕುಮಾರ್, ಉಪ ನಿರ್ದೇಶಕ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ

” ಪಠ್ಯ ಪುಸ್ತಕಗಳನ್ನು ಆಯಾ ಶಾಲೆಗಳಿಗೆ ತಲುಪಿಸುವ ಕಾರ್ಯ ನಡೆಯುತ್ತಿದೆ. ಕೆಲವು ತಾಲ್ಲೂಕುಗಳಿಗೆ ಎಲ್ಲ ಪುಸ್ತಕಗಳೂ ತಲುಪಿವೆ. ಕೆಲವೊಂದು ತಾಲ್ಲೂಕುಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತಲುಪದೇ ಇರಬಹುದು. ಒಬ್ಬ ವಿದ್ಯಾರ್ಥಿಯ ಪುಸ್ತಕ ಸಾಗಣೆ ವೆಚ್ಚ ೪ ರೂ. ಇರುತ್ತದೆ. ಯಾವ ಶಾಲೆಗೂ ಮೊದಲೇ ‘ಸಿಜಿ’ ಅನುದಾನ ಬ್ಯಾಂಕ್ ಖಾತೆಗೆ ಬರುವುದಿಲ್ಲ. ಈ ಬಾರಿ ಕೊಂಚ ತಡವಾಗಿರಬಹುದು.”

– ಶಶಿಕುಮಾರ್, ಅಧ್ಯಕ್ಷರು, ಜಿಲ್ಲಾ ಶಾಲಾ ಶಿಕ್ಷಕರ ಸಂಘ

ಪಠ್ಯಪುಸ್ತಕಗಳ ಕೊರತೆ: 

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಆರಂಭವಾಗಿ ತಿಂಗಳು ತುಂಬುತ್ತಾ ಬಂದರೂ ಸಮರ್ಪಕವಾಗಿ ಪಠ್ಯಪುಸ್ತಕಗಳು ವಿದ್ಯಾರ್ಥಿಗಳ ಕೈ ಸೇರಿಲ್ಲ. ಸಾಮಾನ್ಯವಾಗಿ ಶಾಲೆ ಆರಂಭವಾಗಿ ಮೊದಲ ತಿಂಗಳಲ್ಲಿಯೇ ಪಠ್ಯಪುಸ್ತಕಗಳು ಶಾಲೆಗೆ ಬರುತ್ತಿದ್ದವು. ಆದರೆ, ಈ ಬಾರಿ ಸಮಪರ್ಕವಾಗಿ ಪುಸ್ತಕಗಳು ದೊರೆತಿಲ್ಲ. ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಭಾಗ ೧ ಬಂದಿಲ್ಲ. ಇದರ ಜೊತೆಗೆ ಶಿಕ್ಷಕರೇ ಪಠ್ಯಪುಸ್ತಕಗಳನ್ನು ತರಬೇಕಾಗಿರುವುದೂ ವಿಳಂಬಕ್ಕೆ ಮತ್ತೊಂದು ಕಾರಣವಾಗಿದೆ ಎಂಬುದು ಹೆಸರು ಹೇಳಲು ಇಚ್ಛಿಸದ ಶಿಕ್ಷಕರೊಬ್ಬರ ಮಾತು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾರ್ಥಕ ಬದುಕಿನ ಸಾಧಕ!

ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…

5 hours ago

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…

5 hours ago

ಓದುಗರ ಪತ್ರ: ಉದ್ಯಾನವನಗಳಲ್ಲಿ ಸಂಗೀತ ವಾದ್ಯ ಜೋಡಣೆ: ಪಾಲಿಕೆ ಕ್ರಮ ಅಭಿನಂದನಾರ್ಹ

ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…

5 hours ago

ಮೀಸಲಾತಿ ವಿರೋಧಿ ದನಿಗೆ ಮೋದಿ ಮಣಿಯುವರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…

5 hours ago

ಕುಕ್ಕರಿನ ಸೀಟಿ ಕೂಗಲು ಶುರುವಾಗಿದೆ!

ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…

5 hours ago

ಕೆಲವಷ್ಟು ಭರವಸೆಗಳು ಮತ್ತು ಹಲವಷ್ಟು ಆತಂಕಗಳು

ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…

5 hours ago