Andolana originals

ಓದುಗರ ಪತ್ರ: ನೆರೆಯ ಚೀನಾ ನಂಬಿಕೆಗೆ ಅರ್ಹವೇ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ, ಚೀನಾ ಮೊದಲಾದ ಏಷ್ಯಾ ಖಂಡದ ರಾಷ್ಟ್ರಗಳ ಮೇಲೆ ಮನಸೋ ಇಚ್ಛೆ ಆಮದು ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಆ ದೇಶಕ್ಕೆ ಸಡ್ಡು ಹೊಡೆದು ಚೀನಾ- ಭಾರತ ಬಾಯಿ ಬಾಯಿ ಎಂದು ಚೀನಾದೊಂದಿಗೆ ಭಾರತ ಸ್ನೇಹವನ್ನು ಉತ್ತುಂಗಕ್ಕೇರಿಸಿಕೊಂಡಿದೆ.

ಸ್ನೇಹಿತರನ್ನು ಬದಲಿಸಿಕೊಳ್ಳಬಹುದು ಆದರೆ ನೆರೆಯವರನ್ನು ಬದಲಿಸಿಕೊಳ್ಳಲಾಗುವುದಿಲ್ಲವೆಂಬ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಮಾತನ್ನು ಸದಾ ತಲೆಯೊಳಗಿಟ್ಟುಕೊಂಡಿರುವ ಭಾರತದ ಪ್ರಯತ್ನವೇನೋ ಸರಿ. ಆದರೆ ಚೀನಾ ಭಾರತದ ಒಳ್ಳೆಯ ಉದ್ದೇಶವನ್ನು ಅದೆಷ್ಟು ಅರ್ಥ ಮಾಡಿಕೊಳ್ಳಬಹುದು ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇತಿಹಾಸವನ್ನು ಗಮನಿಸಿದರೆ ಚೀನಾ ಸ್ನೇಹದ ವಿಷಯದಲ್ಲಿ ನಂಬಿಕೆಗೆ ಅರ್ಹವಾದ ದೇಶವಂತೂ ಅಲ್ಲವೇ ಅಲ್ಲ.

ಇದನ್ನು ಓದಿ:ಇಂಡಿಗೋ ವಿಮಾನಕ್ಕೆ ಪಕ್ಷಿ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಇದೇ ಚೀನಾದ ಅಧ್ಯಕ್ಷರಾದ ಕ್ಷಿ ಪಿಂಗ್ ಅವರನ್ನು ಈ ಹಿಂದೆ ಪ್ರಧಾನಿ ಮೋದಿಯವರು ಭಾರತಕ್ಕೆ ಕರೆಸಿಕೊಂಡು ಮಹಾಬಲಿಪುರಂ ಬಂಡೆಯನ್ನು ತೋರಿಸಿ ಸ್ನೇಹದ ಕನಸು ಕಾಣುತ್ತಾ ಕಳುಹಿಸಿಕೊಟ್ಟ ಸ್ವಲ್ಪ ಸಮಯದಲ್ಲೇ ಆಕ್ಸಾಯ್ ಚಿನ್ ಗಡಿಯಲ್ಲಿ ಭಾರತದ ಪ್ರದೇಶವನ್ನು ಅತಿಕ್ರಮಣ ಮಾಡಿ ನಮ್ಮವರೊಂದಿಗೆ ಗುದ್ದಾಟಕ್ಕಿಳಿದು ಸಂಬಂಧ ಹಳಸಿ ಹೋದ ಪ್ರಕರಣವನ್ನು ನೆನೆದರೆ ಚೀನಾ ಅಧ್ಯಕ್ಷ ಕ್ಷಿ ಅವರನ್ನು ಎಷ್ಟರ ಮಟ್ಟಿಗೆ ನಂಬಬಹುದು ಎನ್ನುವ ಪ್ರಶ್ನೆ ಎದುರಾಗುತ್ತದೆ.

ಸದ್ಯ ಚೀನಾಕ್ಕೂ ಅಮೆರಿಕ ಬದ್ಧ ವೈರಿಯಾಗಿರುವುದರಿಂದ ಮತ್ತು ರಷ್ಯಾ ದೇಶವು ನಮ್ಮೊಂದಿಗೆ ವಿಶ್ವಾಸದಿಂದ ಇರುವುದರಿಂದ ಚೀನಾ ವಿಧಿ ಇಲ್ಲದೆ ಭಾರತದೊಂದಿಗೆ ನಗುವಿನ ಮುಖವಾಡ ಹಾಕಿ ನಿಂತಿದೆ. ಚೀನಾದೊಂದಿಗೆ ನಾವು ಸ್ನೇಹ ಕುದುರಿಸಿದಲ್ಲಿ ಸದಾ ಚೀನಾದ ಮಿತ್ರರು ನಮ್ಮ ಮಿತ್ರರಾಗಿ ಚೀನಾದ ಶತ್ರುಗಳು ನಮ್ಮ ಶತ್ರುಗಳಾಗ ಬೇಕಾದ ಸಂದಿಗ್ಧ ಪರಿಸ್ಥಿತಿ ಬರಬಹುದು. ಚೀನಾ ಅಮೆರಿಕದೊಂದಿಗೆ ದ್ವೇಷದ ಕಾರಣಕ್ಕಾಗಿ ನಮ್ಮನ್ನು ಪರಮ ಮಿತ್ರ ಸ್ಥಾನದಲ್ಲಿ ಕೂರಿಸಿ ನಮ್ಮನ್ನು ಸಹಿಸಿಕೊಳ್ಳುತ್ತದೆಯೇ? ಇವುಗಳನ್ನೆಲ್ಲಾ ಗಮನಿಸಿದರೆ ಕ್ಷಿ ಮೋದಿ ಅವರನ್ನು ಅಪ್ಪಿಕೊಂಡುದುದು ಪ್ರಸಕ್ತ ಪರಿಸ್ಥಿತಿಗೆ ಮಾತ್ರವೇ ಹೊರತು ಇದು ಅವರ ಮನಃ ಪರಿವರ್ತನೆಯಲ್ಲ ಮತ್ತು ಶಾಶ್ವತವೂ ಅಲ್ಲ.

-ದೊಡ್ಡಕಮರವಳ್ಳಿ ಸಿದ್ದಲಿಂಗಪ್ಪ, ಜೆ.ಪಿ.ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

8 mins ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

10 mins ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

12 mins ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

16 mins ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

20 mins ago