Andolana originals

ಓದುಗರ ಪತ್ರ: ನೆರೆಯ ಚೀನಾ ನಂಬಿಕೆಗೆ ಅರ್ಹವೇ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ, ಚೀನಾ ಮೊದಲಾದ ಏಷ್ಯಾ ಖಂಡದ ರಾಷ್ಟ್ರಗಳ ಮೇಲೆ ಮನಸೋ ಇಚ್ಛೆ ಆಮದು ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಆ ದೇಶಕ್ಕೆ ಸಡ್ಡು ಹೊಡೆದು ಚೀನಾ- ಭಾರತ ಬಾಯಿ ಬಾಯಿ ಎಂದು ಚೀನಾದೊಂದಿಗೆ ಭಾರತ ಸ್ನೇಹವನ್ನು ಉತ್ತುಂಗಕ್ಕೇರಿಸಿಕೊಂಡಿದೆ.

ಸ್ನೇಹಿತರನ್ನು ಬದಲಿಸಿಕೊಳ್ಳಬಹುದು ಆದರೆ ನೆರೆಯವರನ್ನು ಬದಲಿಸಿಕೊಳ್ಳಲಾಗುವುದಿಲ್ಲವೆಂಬ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಮಾತನ್ನು ಸದಾ ತಲೆಯೊಳಗಿಟ್ಟುಕೊಂಡಿರುವ ಭಾರತದ ಪ್ರಯತ್ನವೇನೋ ಸರಿ. ಆದರೆ ಚೀನಾ ಭಾರತದ ಒಳ್ಳೆಯ ಉದ್ದೇಶವನ್ನು ಅದೆಷ್ಟು ಅರ್ಥ ಮಾಡಿಕೊಳ್ಳಬಹುದು ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇತಿಹಾಸವನ್ನು ಗಮನಿಸಿದರೆ ಚೀನಾ ಸ್ನೇಹದ ವಿಷಯದಲ್ಲಿ ನಂಬಿಕೆಗೆ ಅರ್ಹವಾದ ದೇಶವಂತೂ ಅಲ್ಲವೇ ಅಲ್ಲ.

ಇದನ್ನು ಓದಿ:ಇಂಡಿಗೋ ವಿಮಾನಕ್ಕೆ ಪಕ್ಷಿ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಇದೇ ಚೀನಾದ ಅಧ್ಯಕ್ಷರಾದ ಕ್ಷಿ ಪಿಂಗ್ ಅವರನ್ನು ಈ ಹಿಂದೆ ಪ್ರಧಾನಿ ಮೋದಿಯವರು ಭಾರತಕ್ಕೆ ಕರೆಸಿಕೊಂಡು ಮಹಾಬಲಿಪುರಂ ಬಂಡೆಯನ್ನು ತೋರಿಸಿ ಸ್ನೇಹದ ಕನಸು ಕಾಣುತ್ತಾ ಕಳುಹಿಸಿಕೊಟ್ಟ ಸ್ವಲ್ಪ ಸಮಯದಲ್ಲೇ ಆಕ್ಸಾಯ್ ಚಿನ್ ಗಡಿಯಲ್ಲಿ ಭಾರತದ ಪ್ರದೇಶವನ್ನು ಅತಿಕ್ರಮಣ ಮಾಡಿ ನಮ್ಮವರೊಂದಿಗೆ ಗುದ್ದಾಟಕ್ಕಿಳಿದು ಸಂಬಂಧ ಹಳಸಿ ಹೋದ ಪ್ರಕರಣವನ್ನು ನೆನೆದರೆ ಚೀನಾ ಅಧ್ಯಕ್ಷ ಕ್ಷಿ ಅವರನ್ನು ಎಷ್ಟರ ಮಟ್ಟಿಗೆ ನಂಬಬಹುದು ಎನ್ನುವ ಪ್ರಶ್ನೆ ಎದುರಾಗುತ್ತದೆ.

ಸದ್ಯ ಚೀನಾಕ್ಕೂ ಅಮೆರಿಕ ಬದ್ಧ ವೈರಿಯಾಗಿರುವುದರಿಂದ ಮತ್ತು ರಷ್ಯಾ ದೇಶವು ನಮ್ಮೊಂದಿಗೆ ವಿಶ್ವಾಸದಿಂದ ಇರುವುದರಿಂದ ಚೀನಾ ವಿಧಿ ಇಲ್ಲದೆ ಭಾರತದೊಂದಿಗೆ ನಗುವಿನ ಮುಖವಾಡ ಹಾಕಿ ನಿಂತಿದೆ. ಚೀನಾದೊಂದಿಗೆ ನಾವು ಸ್ನೇಹ ಕುದುರಿಸಿದಲ್ಲಿ ಸದಾ ಚೀನಾದ ಮಿತ್ರರು ನಮ್ಮ ಮಿತ್ರರಾಗಿ ಚೀನಾದ ಶತ್ರುಗಳು ನಮ್ಮ ಶತ್ರುಗಳಾಗ ಬೇಕಾದ ಸಂದಿಗ್ಧ ಪರಿಸ್ಥಿತಿ ಬರಬಹುದು. ಚೀನಾ ಅಮೆರಿಕದೊಂದಿಗೆ ದ್ವೇಷದ ಕಾರಣಕ್ಕಾಗಿ ನಮ್ಮನ್ನು ಪರಮ ಮಿತ್ರ ಸ್ಥಾನದಲ್ಲಿ ಕೂರಿಸಿ ನಮ್ಮನ್ನು ಸಹಿಸಿಕೊಳ್ಳುತ್ತದೆಯೇ? ಇವುಗಳನ್ನೆಲ್ಲಾ ಗಮನಿಸಿದರೆ ಕ್ಷಿ ಮೋದಿ ಅವರನ್ನು ಅಪ್ಪಿಕೊಂಡುದುದು ಪ್ರಸಕ್ತ ಪರಿಸ್ಥಿತಿಗೆ ಮಾತ್ರವೇ ಹೊರತು ಇದು ಅವರ ಮನಃ ಪರಿವರ್ತನೆಯಲ್ಲ ಮತ್ತು ಶಾಶ್ವತವೂ ಅಲ್ಲ.

-ದೊಡ್ಡಕಮರವಳ್ಳಿ ಸಿದ್ದಲಿಂಗಪ್ಪ, ಜೆ.ಪಿ.ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

5 mins ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

54 mins ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

1 hour ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

1 hour ago

ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಣೆ : ರಾಹುಲ್‌ ಗಾಂಧಿ

ಹೊಸದಿಲ್ಲಿ : ಈ ಸದನವು ಒಂದು ಪಕ್ಷವನ್ನು ಪ್ರತಿನಿಧಿಸುವುದಿಲ್ಲ, ಬದಲಾಗಿ ಇಡೀ ದೇಶವನ್ನು ಪ್ರತಿನಿಧಿಸುತ್ತದೆ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ…

2 hours ago

13 ವರ್ಷಗಳಿಂದ ಕೋಮಾ : ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂ ಅನುಮತಿ

ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್‌ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…

2 hours ago