Andolana originals

ಓದುಗರ ಪತ್ರ: ನೆರೆಯ ಚೀನಾ ನಂಬಿಕೆಗೆ ಅರ್ಹವೇ?

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ, ಚೀನಾ ಮೊದಲಾದ ಏಷ್ಯಾ ಖಂಡದ ರಾಷ್ಟ್ರಗಳ ಮೇಲೆ ಮನಸೋ ಇಚ್ಛೆ ಆಮದು ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಆ ದೇಶಕ್ಕೆ ಸಡ್ಡು ಹೊಡೆದು ಚೀನಾ- ಭಾರತ ಬಾಯಿ ಬಾಯಿ ಎಂದು ಚೀನಾದೊಂದಿಗೆ ಭಾರತ ಸ್ನೇಹವನ್ನು ಉತ್ತುಂಗಕ್ಕೇರಿಸಿಕೊಂಡಿದೆ.

ಸ್ನೇಹಿತರನ್ನು ಬದಲಿಸಿಕೊಳ್ಳಬಹುದು ಆದರೆ ನೆರೆಯವರನ್ನು ಬದಲಿಸಿಕೊಳ್ಳಲಾಗುವುದಿಲ್ಲವೆಂಬ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಮಾತನ್ನು ಸದಾ ತಲೆಯೊಳಗಿಟ್ಟುಕೊಂಡಿರುವ ಭಾರತದ ಪ್ರಯತ್ನವೇನೋ ಸರಿ. ಆದರೆ ಚೀನಾ ಭಾರತದ ಒಳ್ಳೆಯ ಉದ್ದೇಶವನ್ನು ಅದೆಷ್ಟು ಅರ್ಥ ಮಾಡಿಕೊಳ್ಳಬಹುದು ಎಂಬುದು ಯಕ್ಷ ಪ್ರಶ್ನೆಯಾಗಿದೆ. ಇತಿಹಾಸವನ್ನು ಗಮನಿಸಿದರೆ ಚೀನಾ ಸ್ನೇಹದ ವಿಷಯದಲ್ಲಿ ನಂಬಿಕೆಗೆ ಅರ್ಹವಾದ ದೇಶವಂತೂ ಅಲ್ಲವೇ ಅಲ್ಲ.

ಇದನ್ನು ಓದಿ:ಇಂಡಿಗೋ ವಿಮಾನಕ್ಕೆ ಪಕ್ಷಿ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಇದೇ ಚೀನಾದ ಅಧ್ಯಕ್ಷರಾದ ಕ್ಷಿ ಪಿಂಗ್ ಅವರನ್ನು ಈ ಹಿಂದೆ ಪ್ರಧಾನಿ ಮೋದಿಯವರು ಭಾರತಕ್ಕೆ ಕರೆಸಿಕೊಂಡು ಮಹಾಬಲಿಪುರಂ ಬಂಡೆಯನ್ನು ತೋರಿಸಿ ಸ್ನೇಹದ ಕನಸು ಕಾಣುತ್ತಾ ಕಳುಹಿಸಿಕೊಟ್ಟ ಸ್ವಲ್ಪ ಸಮಯದಲ್ಲೇ ಆಕ್ಸಾಯ್ ಚಿನ್ ಗಡಿಯಲ್ಲಿ ಭಾರತದ ಪ್ರದೇಶವನ್ನು ಅತಿಕ್ರಮಣ ಮಾಡಿ ನಮ್ಮವರೊಂದಿಗೆ ಗುದ್ದಾಟಕ್ಕಿಳಿದು ಸಂಬಂಧ ಹಳಸಿ ಹೋದ ಪ್ರಕರಣವನ್ನು ನೆನೆದರೆ ಚೀನಾ ಅಧ್ಯಕ್ಷ ಕ್ಷಿ ಅವರನ್ನು ಎಷ್ಟರ ಮಟ್ಟಿಗೆ ನಂಬಬಹುದು ಎನ್ನುವ ಪ್ರಶ್ನೆ ಎದುರಾಗುತ್ತದೆ.

ಸದ್ಯ ಚೀನಾಕ್ಕೂ ಅಮೆರಿಕ ಬದ್ಧ ವೈರಿಯಾಗಿರುವುದರಿಂದ ಮತ್ತು ರಷ್ಯಾ ದೇಶವು ನಮ್ಮೊಂದಿಗೆ ವಿಶ್ವಾಸದಿಂದ ಇರುವುದರಿಂದ ಚೀನಾ ವಿಧಿ ಇಲ್ಲದೆ ಭಾರತದೊಂದಿಗೆ ನಗುವಿನ ಮುಖವಾಡ ಹಾಕಿ ನಿಂತಿದೆ. ಚೀನಾದೊಂದಿಗೆ ನಾವು ಸ್ನೇಹ ಕುದುರಿಸಿದಲ್ಲಿ ಸದಾ ಚೀನಾದ ಮಿತ್ರರು ನಮ್ಮ ಮಿತ್ರರಾಗಿ ಚೀನಾದ ಶತ್ರುಗಳು ನಮ್ಮ ಶತ್ರುಗಳಾಗ ಬೇಕಾದ ಸಂದಿಗ್ಧ ಪರಿಸ್ಥಿತಿ ಬರಬಹುದು. ಚೀನಾ ಅಮೆರಿಕದೊಂದಿಗೆ ದ್ವೇಷದ ಕಾರಣಕ್ಕಾಗಿ ನಮ್ಮನ್ನು ಪರಮ ಮಿತ್ರ ಸ್ಥಾನದಲ್ಲಿ ಕೂರಿಸಿ ನಮ್ಮನ್ನು ಸಹಿಸಿಕೊಳ್ಳುತ್ತದೆಯೇ? ಇವುಗಳನ್ನೆಲ್ಲಾ ಗಮನಿಸಿದರೆ ಕ್ಷಿ ಮೋದಿ ಅವರನ್ನು ಅಪ್ಪಿಕೊಂಡುದುದು ಪ್ರಸಕ್ತ ಪರಿಸ್ಥಿತಿಗೆ ಮಾತ್ರವೇ ಹೊರತು ಇದು ಅವರ ಮನಃ ಪರಿವರ್ತನೆಯಲ್ಲ ಮತ್ತು ಶಾಶ್ವತವೂ ಅಲ್ಲ.

-ದೊಡ್ಡಕಮರವಳ್ಳಿ ಸಿದ್ದಲಿಂಗಪ್ಪ, ಜೆ.ಪಿ.ನಗರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

27 mins ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

1 hour ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

1 hour ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

17 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

20 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

20 hours ago