Andolana originals

ಜೈಲು ಆತಿಥ್ಯ ನೀಡುವ ಕೇಂದ್ರವೇ?

ಜೈಲು ಎಂದರೆ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವ ಮತ್ತು ಪಶ್ಚಾತ್ತಾಪ ಪಡುವ ಸ್ಥಳ, ಅಲ್ಲಿಂದ ಹೊರಬಂದು ವ್ಯಕ್ತಿ ಹೊಸ ಮನುಷ್ಯನಾಗಿ ಬದುಕು ಕಟ್ಟಿಕೊಳ್ಳುತ್ತಾನೆ ಎಂಬ ಭಾವನೆ ಇತ್ತು. ಆದರೆ ಈಗ ಅದು ದೂರಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರನ್ನು ಅಪಹರಣ ಮಾಡಿದ್ದಲ್ಲದೇ ಶೆಡ್‌ವೊಂದರಲ್ಲಿ ಕೂಡಿಹಾಕಿ ಮನಬಂದಂತೆ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆತನ ಸಹಚರರು ಜೈಲು ಸೇರಿದ್ದಾರೆ. ಆದರೆ ಜೈಲಿನಲ್ಲಿ ದರ್ಶನ್‌ಗೆ ಉತ್ತಮ ಆತಿಥ್ಯ ನೀಡುತ್ತಿದ್ದಾರೆ ಎಂಬ ಸುದ್ದಿ ತಿಳಿದು ನಿಜಕ್ಕೂ ಆಶ್ಚರ್ಯವಾಯಿತು.

ದರ್ಶನ್ ಮತ್ತು ಆತನ ಸಹಚರರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಮಾಂಸದೂಟ, ಮದ್ಯ, ಸಿಗರೇಟು, ಟೀ-ಕಾಫಿ ಪೂರೈಸಲಾಗುತ್ತಿದೆ.

ಇದರಲ್ಲಿ ಕೆಲ ಜೈಲು ಅಧಿಕಾರಿಗಳೂ ಶಾಮಿಲಾಗಿ ಹಣದಾಸೆಗೆ ಕರ್ತವ್ಯ ನಿಷ್ಠೆ ಮರೆತಿರುವುದು ವಿಪರ್ಯಾಸ. ದರ್ಶನ್‌ಗೆ ಸಿಗುತ್ತಿರುವ ಆತಿಥ್ಯ ನೋಡಿದ್ದಾರೆ ಅವರು ಜೈಲಿನ ಬದಲಾಗಿ ಯಾವುದೋ ರೆಸಾರ್ಟ್‌ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೇನೋ ಅನಿಸುತ್ತದೆ. ಹಣದಾಸೆಗೆ ಕೆಲ ಅಧಿಕಾರಿಗಳು ಮಾಡುವ ಇಂತಹ ಕೃತ್ಯಗಳು ಪೊಲೀಸ್ ಇಲಾಖೆಗೆ ಕಳಂಕ ತರಬಹುದು. ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಅಗತ್ಯ.

-ರಾಜೇಶ್, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಮುಂದಿನ ವಾರ ಡಿಸಿಎಂ ಡಿಕೆಶಿ ಮತ್ತೆ ದೆಹಲಿಗೆ

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…

13 mins ago

ಪರಪ್ಪನ ಅಗ್ರಹಾರ ಜೈಲು ಸೇರಿದ ಶಾಸಕ ಚಂದ್ರು ಲಮಾಣಿ

ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…

14 mins ago

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

2 hours ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

2 hours ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago