Andolana originals

ಜೈಲು ಆತಿಥ್ಯ ನೀಡುವ ಕೇಂದ್ರವೇ?

ಜೈಲು ಎಂದರೆ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವ ಮತ್ತು ಪಶ್ಚಾತ್ತಾಪ ಪಡುವ ಸ್ಥಳ, ಅಲ್ಲಿಂದ ಹೊರಬಂದು ವ್ಯಕ್ತಿ ಹೊಸ ಮನುಷ್ಯನಾಗಿ ಬದುಕು ಕಟ್ಟಿಕೊಳ್ಳುತ್ತಾನೆ ಎಂಬ ಭಾವನೆ ಇತ್ತು. ಆದರೆ ಈಗ ಅದು ದೂರಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರನ್ನು ಅಪಹರಣ ಮಾಡಿದ್ದಲ್ಲದೇ ಶೆಡ್‌ವೊಂದರಲ್ಲಿ ಕೂಡಿಹಾಕಿ ಮನಬಂದಂತೆ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆತನ ಸಹಚರರು ಜೈಲು ಸೇರಿದ್ದಾರೆ. ಆದರೆ ಜೈಲಿನಲ್ಲಿ ದರ್ಶನ್‌ಗೆ ಉತ್ತಮ ಆತಿಥ್ಯ ನೀಡುತ್ತಿದ್ದಾರೆ ಎಂಬ ಸುದ್ದಿ ತಿಳಿದು ನಿಜಕ್ಕೂ ಆಶ್ಚರ್ಯವಾಯಿತು.

ದರ್ಶನ್ ಮತ್ತು ಆತನ ಸಹಚರರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಮಾಂಸದೂಟ, ಮದ್ಯ, ಸಿಗರೇಟು, ಟೀ-ಕಾಫಿ ಪೂರೈಸಲಾಗುತ್ತಿದೆ.

ಇದರಲ್ಲಿ ಕೆಲ ಜೈಲು ಅಧಿಕಾರಿಗಳೂ ಶಾಮಿಲಾಗಿ ಹಣದಾಸೆಗೆ ಕರ್ತವ್ಯ ನಿಷ್ಠೆ ಮರೆತಿರುವುದು ವಿಪರ್ಯಾಸ. ದರ್ಶನ್‌ಗೆ ಸಿಗುತ್ತಿರುವ ಆತಿಥ್ಯ ನೋಡಿದ್ದಾರೆ ಅವರು ಜೈಲಿನ ಬದಲಾಗಿ ಯಾವುದೋ ರೆಸಾರ್ಟ್‌ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೇನೋ ಅನಿಸುತ್ತದೆ. ಹಣದಾಸೆಗೆ ಕೆಲ ಅಧಿಕಾರಿಗಳು ಮಾಡುವ ಇಂತಹ ಕೃತ್ಯಗಳು ಪೊಲೀಸ್ ಇಲಾಖೆಗೆ ಕಳಂಕ ತರಬಹುದು. ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಅಗತ್ಯ.

-ರಾಜೇಶ್, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

3 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

4 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

7 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

7 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

7 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

7 hours ago