Andolana originals

ಜೈಲು ಆತಿಥ್ಯ ನೀಡುವ ಕೇಂದ್ರವೇ?

ಜೈಲು ಎಂದರೆ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವ ಮತ್ತು ಪಶ್ಚಾತ್ತಾಪ ಪಡುವ ಸ್ಥಳ, ಅಲ್ಲಿಂದ ಹೊರಬಂದು ವ್ಯಕ್ತಿ ಹೊಸ ಮನುಷ್ಯನಾಗಿ ಬದುಕು ಕಟ್ಟಿಕೊಳ್ಳುತ್ತಾನೆ ಎಂಬ ಭಾವನೆ ಇತ್ತು. ಆದರೆ ಈಗ ಅದು ದೂರಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರನ್ನು ಅಪಹರಣ ಮಾಡಿದ್ದಲ್ಲದೇ ಶೆಡ್‌ವೊಂದರಲ್ಲಿ ಕೂಡಿಹಾಕಿ ಮನಬಂದಂತೆ ಥಳಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಆತನ ಸಹಚರರು ಜೈಲು ಸೇರಿದ್ದಾರೆ. ಆದರೆ ಜೈಲಿನಲ್ಲಿ ದರ್ಶನ್‌ಗೆ ಉತ್ತಮ ಆತಿಥ್ಯ ನೀಡುತ್ತಿದ್ದಾರೆ ಎಂಬ ಸುದ್ದಿ ತಿಳಿದು ನಿಜಕ್ಕೂ ಆಶ್ಚರ್ಯವಾಯಿತು.

ದರ್ಶನ್ ಮತ್ತು ಆತನ ಸಹಚರರಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಮಾಂಸದೂಟ, ಮದ್ಯ, ಸಿಗರೇಟು, ಟೀ-ಕಾಫಿ ಪೂರೈಸಲಾಗುತ್ತಿದೆ.

ಇದರಲ್ಲಿ ಕೆಲ ಜೈಲು ಅಧಿಕಾರಿಗಳೂ ಶಾಮಿಲಾಗಿ ಹಣದಾಸೆಗೆ ಕರ್ತವ್ಯ ನಿಷ್ಠೆ ಮರೆತಿರುವುದು ವಿಪರ್ಯಾಸ. ದರ್ಶನ್‌ಗೆ ಸಿಗುತ್ತಿರುವ ಆತಿಥ್ಯ ನೋಡಿದ್ದಾರೆ ಅವರು ಜೈಲಿನ ಬದಲಾಗಿ ಯಾವುದೋ ರೆಸಾರ್ಟ್‌ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೇನೋ ಅನಿಸುತ್ತದೆ. ಹಣದಾಸೆಗೆ ಕೆಲ ಅಧಿಕಾರಿಗಳು ಮಾಡುವ ಇಂತಹ ಕೃತ್ಯಗಳು ಪೊಲೀಸ್ ಇಲಾಖೆಗೆ ಕಳಂಕ ತರಬಹುದು. ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಅಗತ್ಯ.

-ರಾಜೇಶ್, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

6 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

6 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

6 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

7 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

7 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

8 hours ago