ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಸರಕು ಸಾಗಣೆ ವಾಹನ ಚಾಲಕರೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ಪೊಲೀಸ್ ಇಲಾಖೆಯಲ್ಲಿ ಹೋಂಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಸಮವಸ್ತ್ರ ಧರಿಸದೆ ಚೆಕ್ಪೋಸ್ಟ್ನಲ್ಲಿ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದಾರೆ ಎನ್ನಲಾಗಿದೆ.
ಹಣ ಪಡೆದ ಬಳಿಕ ಯಾವುದೇ ಅಧಿಕೃತ ರಶೀತಿಯನ್ನು ನೀಡುತ್ತಿಲ್ಲ. ಅಲ್ಲದೆ ಅನೇಕ ವರ್ಷಗಳಿಂದ ಹೋಂ ಗಾರ್ಡ್ ಹಣ ವಸೂಲಿ ಮಾಡುತ್ತಿದ್ದು, ಸಮವಸ್ತ್ರ ಧರಿಸದೆ ವಸೂಲಿಗೆ ಇಳಿದಿರುವ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ತನಿಖೆಯಾಗಬೇಕು. ಇದರಲ್ಲಿ ಶಾಮೀಲಾಗಿರುವ ಅಧಿಕಾರಿಗಳನ್ನು ಅಮಾನತ್ತು ಗೊಳಿಸಬೇಕೆಂಬ ಒತ್ತಾಯ ಕೇಳಿಬಂದಿದೆ.
ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಕೇರಳ ರಾಜ್ಯಕ್ಕೆ ತೆರಳುವ ಸರಕು ಸಾಗಣೆ ವಾಹನಗಳು ಹಾಗೂ ಖನಿಜ ಸಂಪತ್ತು ಹೊತ್ತ ಟಿಪ್ಪರ್ ಲಾರಿಗಳಿಂದ ಹಣ ಪಡೆದು ವಾಹನಗಳನ್ನು ತಪಾಸಣೆ ಮಾಡದೆ ಬಿಡಲಾಗುತ್ತಿದೆ. ಹಣ ನೀಡದ ವಾಹನಗಳನ್ನು ಮಾತ್ರ ತಪಾಸಣೆಯ ನೆಪದಲ್ಲಿ ವಿಳಂಬಗೊಳಿಸಿ ತೊಂದರೆ ನೀಡಲಾಗುತ್ತಿದೆ ಎಂದು ವಾಹನ ಚಾಲಕರು ದೂರಿದ್ದಾರೆ.
ಇದರಿಂದ ಅಕ್ರಮ ಜಾನುವಾರು ಸಾಗಣೆ ಹಾಗೂ ಖನಿಜ ಸಂಪತ್ತಿನ ಅಕ್ರಮ ಸಾಗಣೆಗೆ ಅವಕಾಶವಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ರಾತ್ರಿ ೯ ಗಂಟೆಯ ನಂತರ ಚೆಕ್ಪೋಸ್ಟ್ ಕಾರ್ಯಾಚರಣೆ ಮುಗಿದ ಬಳಿಕವೂ ಕೆಲ ವಾಹನಗಳನ್ನು ಹಣ ಪಡೆದು ಬಿಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಸರಕುಗಳನ್ನು ನಿಗದಿತ ಸಮಯಕ್ಕೆತಲುಪಿಸಬೇಕಾದ ಅನಿವಾರ್ಯತೆಯಿಂದ ಹಣ ನೀಡಿ ಮುಂದುವರಿಯಬೇಕಾಗಿದೆ ಎಂದು ಸರಕು ಸಾಗಣೆ ವಾಹನ ಚಾಲಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.
ಈ ಆರೋಪಗಳ ಕುರಿತು ಸಂಬಂಧಪಟ್ಟ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ, ಸತ್ಯಾಸತ್ಯತೆ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಚೆಕ್ಪೋಸ್ಟ್ನಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಾಗಲಿ, ಗೃಹರಕ್ಷಕ ದಳದ ಸಿಬ್ಬಂದಿಗಳಾಗಲಿ, ಅರಣ್ಯ ಇಲಾಖೆಯ ಸಿಬ್ಬಂದಿಗಳಾಗಲಿ ಪ್ರತಿನಿತ್ಯ ಬದಲಾಗಬೇಕು. ಅಲ್ಲದೆ ಚೆಕ್ಪೋಸ್ಟ್ ಗಳಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯವಾಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
” ಈ ವಿಚಾರ ತಿಳಿದ ಕೂಡಲೇ ಚೆಕ್ ಪೋಸ್ಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕ್ರಮಕ್ಕೆ ಪೊಲೀಸ್ ಇಲಾಖೆ ಜೊತೆ ಚರ್ಚಿಸಲಾಗುವುದು. ಸಿಬ್ಬಂದಿಗಳ ಬದಲಾವಣೆ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.”
-ನಂದೀಶ್, ಡಿಸಿಎಫ್, ಬಂಡೀಪುರ
” ಪ್ರತಿನಿತ್ಯ ಚೆಕ್ಪೋಸ್ಟ್ನಲ್ಲಿ ಲಕ್ಷಾಂತರ ರೂ. ವಸೂಲಿ ನಡೆಸಲಾಗುತ್ತಿದೆ. ಪ್ರತಿ ಲಾರಿಗೆ ೧೦೦-೨೦೦ ರೂ. ಕಡ್ಡಾಯವಾಗಿ ಕೊಡಬೇಕು. ಹಣ ಕೊಟ್ಟರೆ ತಪಾಸಣೆ ಮಾಡುವುದಿಲ್ಲ. ಬೇರೆ ರಾಜ್ಯದಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತದೆ. ಕರ್ನಾಟಕದಲ್ಲಿ ಮಾತ್ರ ಚೆಕ್ಪೋಸ್ಟ್ಗಳಲ್ಲಿ ಹಣ ಕೊಟ್ಟರೆ ಯಾರು ಏನು ಕೊಂಡೊಯ್ದರೂ ನೋಡುವುದಿಲ್ಲ.”
-ರಾಜೇಂದ್ರ, ಲಾರಿ ಮಾಲೀಕ, ಕೇರಳ
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಂಜು ಕೋಟೆ ಕೋಟೆ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಶುರು; ಮುಖಂಡರಿಂದ ಕಾರ್ಯತಂತ್ರ ಎಚ್.ಡಿ.ಕೋಟೆ: ತಾಲ್ಲೂಕಿನ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…