ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಇವೆರಡರ ಹಗರಣಗಳ ಆರೋಪವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಪಾದಯಾತ್ರೆ ನಡೆಸಿವೆ.
ಈ ಎರಡೂ ಹಗರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಈಗಾಗಲೇ ಕೈಗೊಂಡಿದ್ದು, ವಾಲ್ಮೀಕಿ ನಿಗಮ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರದ ಮೂರು ತನಿಖಾ ಸಂಸ್ಥೆಗಳ ಜತೆಗೆ ಕೇಂದ್ರ ಸರ್ಕಾರದ ಸಿಬಿಐ ಮತ್ತು ಇಡಿ ತನಿಖಾ ಸಂಸ್ಥೆಗಳೂ ನಡೆಸುತ್ತಿವೆ. ಇದರೊಂದಿಗೆ ಮುಡಾ ಹಗರಣದ ತನಿಖೆಯನೂ ಸಿಬಿಐಗೆ ಒಪ್ಪಿಸಬೇಕು ಎಂಬುದು ವಿರೋಧ ಪಕ್ಷಗಳ ಒತ್ತಾಯ.
ವಿರೋಧ ಪಕ್ಷಗಳು ಜನಪರ ಧ್ವನಿಯಾಗಬೇಕು. ಆದರೆ, ಈ ಪಾದಯಾತ್ರೆಯನ್ನು ಗಮನಿಸಿದರೆ ಬಿಜೆಪಿ ಮತ್ತು ಜಾ.ದಳ ಪಕ್ಷಗಳು ಜನಧ್ವನಿಯಾಗಿವೆಯೇ? ಎಂಬ ಪ್ರಶ್ನೆ ಮೂಡುತ್ತದೆ. ಪಾದಯಾತ್ರೆ ಮಾಡುತ್ತಿರುವ ಈ ಪಕ್ಷಗಳಲ್ಲಿಯೇ ಒಮ್ಮತ ಇಲ್ಲ. ಅಲ್ಲದೆ ಜಾ.ದಳ ತಾನು ಈ ಪಾದಯಾತ್ರೆಯಲ್ಲಿ ಏಕೆ ಭಾಗವಹಿಸುವುದಿಲ್ಲ ಎಂಬುದಕ್ಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜಿ.ಟಿ.ದೇವೇಗೌಡ ನೀಡಿದ ಹೇಳಿಕೆಗಳು ಎರಡೂ ಪಕ್ಷಗಳಲ್ಲಿ ಒಮ್ಮತವಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿವೆ.
ಮುಡಾ ಪ್ರಕರಣದಲ್ಲಿ ಎಲ್ಲ ಪಕ್ಷಗಳ ಕೆಲ ನಾಯಕರು ಫಲಾನುಭವಿಗಳಾಗಿದ್ದಾರೆ. ಎಲ್ಲಿ ಈ ಪ್ರಕರಣದ ಸಮಗ್ರ ತನಿಖೆ ನಡೆದು ತಾವೂ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೋ ಎಂದು ಜಾ.ದಳದಲ್ಲಿ ಆಂತರಿಕ ಭಯ ಹೆಚ್ಚಾಗಿದೆ ಅನಿಸುತ್ತಿದೆ. ಇದೂ ಕೂಡ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಒಂದು ಕಾರಣವಿರಬಹುದು.
ಇನ್ನು ಎಚ್.ಡಿ.ಕುಮಾರಸ್ವಾಮಿ ‘ನಮ್ಮ ಕುಟುಂಬಕ್ಕೆ ವಿಷ ಉಣ್ಣಿಸುವವರ ಜೊತೆಯಲ್ಲಿ ನಾನು ಸೇರಬೇಕೆ?’ ಎಂದು ಪ್ರಶ್ನಿಸಿರುವುದು ಹೊಂದಾಣಿಕೆ ಸರಿಯಾಗಿಲ್ಲ ಎಂಬುದಕ್ಕೆ ಮತ್ತಷ್ಟು ಪುಷ್ಟಿಕೊಡುತ್ತದೆ. ಒಟ್ಟಾರೆ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವುದೇ ಪಾದಯಾತ್ರೆಯ ಉದ್ದೇಶ ಎಂಬುದು ಸ್ಪಷ್ಟ. ಈಗ ಚೆಂಡು ರಾಜ್ಯಪಾಲರ ಅಂಗಳದಲ್ಲಿದೆ. ಕೇಂದ್ರ ಸರ್ಕಾರ ನೇಮಿಸಿರುವ ರಾಜ್ಯಪಾಲರು ಹೇಗೆ ಕಾರ್ಯ ನಿಭಾಯಿಸುತ್ತಿದ್ದಾರೆ ಎಂಬುದನ್ನು ನಾವು ನೋಡುತ್ತಿದ್ದೇವೆ.
-ಪ್ರೊ.ಹಿ.ಶಿ.ರಾಮಚಂದ್ರೇಗೌಡ, ಸಿ.ಬಸವಲಿಂಗಯ್ಯ (ಬಸು), ಜಿ.ಪಿ.ಬಸವರಾಜು, ಪ್ರೊ.ಪಂಡಿತಾರಾಧ್ಯ, ನಾ.ದಿವಾಕರ, ಡಾ.ರತಿ ರಾವ್, ಕೆ.ಸುಶೀಲಾ, ಸವಿತಾ ಪ.ಮಲ್ಲೇಶ್, ಮೈಸೂರು.
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…
ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…
ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…
ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…