Andolana originals

ಓದುಗರ ಪತ್ರ: ವಿಪಕ್ಷಗಳಲ್ಲಿ ಒಮ್ಮತವಿದೆಯೇ?

ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಇವೆರಡರ ಹಗರಣಗಳ ಆರೋಪವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷಗಳು ಪಾದಯಾತ್ರೆ ನಡೆಸಿವೆ.

ಈ ಎರಡೂ ಹಗರಣಗಳ ತನಿಖೆಯನ್ನು ರಾಜ್ಯ ಸರ್ಕಾರ ಈಗಾಗಲೇ ಕೈಗೊಂಡಿದ್ದು, ವಾಲ್ಮೀಕಿ ನಿಗಮ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರದ ಮೂರು ತನಿಖಾ ಸಂಸ್ಥೆಗಳ ಜತೆಗೆ ಕೇಂದ್ರ ಸರ್ಕಾರದ ಸಿಬಿಐ ಮತ್ತು ಇಡಿ ತನಿಖಾ ಸಂಸ್ಥೆಗಳೂ ನಡೆಸುತ್ತಿವೆ. ಇದರೊಂದಿಗೆ ಮುಡಾ ಹಗರಣದ ತನಿಖೆಯನೂ ಸಿಬಿಐಗೆ ಒಪ್ಪಿಸಬೇಕು ಎಂಬುದು ವಿರೋಧ ಪಕ್ಷಗಳ ಒತ್ತಾಯ.

ವಿರೋಧ ಪಕ್ಷಗಳು ಜನಪರ ಧ್ವನಿಯಾಗಬೇಕು. ಆದರೆ, ಈ ಪಾದಯಾತ್ರೆಯನ್ನು ಗಮನಿಸಿದರೆ ಬಿಜೆಪಿ ಮತ್ತು ಜಾ.ದಳ ಪಕ್ಷಗಳು ಜನಧ್ವನಿಯಾಗಿವೆಯೇ? ಎಂಬ ಪ್ರಶ್ನೆ ಮೂಡುತ್ತದೆ. ಪಾದಯಾತ್ರೆ ಮಾಡುತ್ತಿರುವ ಈ ಪಕ್ಷಗಳಲ್ಲಿಯೇ ಒಮ್ಮತ ಇಲ್ಲ. ಅಲ್ಲದೆ ಜಾ.ದಳ ತಾನು ಈ ಪಾದಯಾತ್ರೆಯಲ್ಲಿ ಏಕೆ ಭಾಗವಹಿಸುವುದಿಲ್ಲ ಎಂಬುದಕ್ಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜಿ.ಟಿ.ದೇವೇಗೌಡ ನೀಡಿದ ಹೇಳಿಕೆಗಳು ಎರಡೂ ಪಕ್ಷಗಳಲ್ಲಿ ಒಮ್ಮತವಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿವೆ.

ಮುಡಾ ಪ್ರಕರಣದಲ್ಲಿ ಎಲ್ಲ ಪಕ್ಷಗಳ ಕೆಲ ನಾಯಕರು ಫಲಾನುಭವಿಗಳಾಗಿದ್ದಾರೆ. ಎಲ್ಲಿ ಈ ಪ್ರಕರಣದ ಸಮಗ್ರ ತನಿಖೆ ನಡೆದು ತಾವೂ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾಗುತ್ತದೋ ಎಂದು ಜಾ.ದಳದಲ್ಲಿ ಆಂತರಿಕ ಭಯ ಹೆಚ್ಚಾಗಿದೆ ಅನಿಸುತ್ತಿದೆ. ಇದೂ ಕೂಡ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ಒಂದು ಕಾರಣವಿರಬಹುದು.

ಇನ್ನು ಎಚ್.ಡಿ.ಕುಮಾರಸ್ವಾಮಿ ‘ನಮ್ಮ ಕುಟುಂಬಕ್ಕೆ ವಿಷ ಉಣ್ಣಿಸುವವರ ಜೊತೆಯಲ್ಲಿ ನಾನು ಸೇರಬೇಕೆ?’ ಎಂದು ಪ್ರಶ್ನಿಸಿರುವುದು ಹೊಂದಾಣಿಕೆ ಸರಿಯಾಗಿಲ್ಲ ಎಂಬುದಕ್ಕೆ ಮತ್ತಷ್ಟು ಪುಷ್ಟಿಕೊಡುತ್ತದೆ. ಒಟ್ಟಾರೆ ಕಾಂಗ್ರೆಸ್ ಸರ್ಕಾರವನ್ನು ಉರುಳಿಸುವುದೇ ಪಾದಯಾತ್ರೆಯ ಉದ್ದೇಶ ಎಂಬುದು ಸ್ಪಷ್ಟ. ಈಗ ಚೆಂಡು ರಾಜ್ಯಪಾಲರ ಅಂಗಳದಲ್ಲಿದೆ. ಕೇಂದ್ರ ಸರ್ಕಾರ ನೇಮಿಸಿರುವ ರಾಜ್ಯಪಾಲರು ಹೇಗೆ ಕಾರ್ಯ ನಿಭಾಯಿಸುತ್ತಿದ್ದಾರೆ ಎಂಬುದನ್ನು ನಾವು ನೋಡುತ್ತಿದ್ದೇವೆ.

-ಪ್ರೊ.ಹಿ.ಶಿ.ರಾಮಚಂದ್ರೇಗೌಡ, ಸಿ.ಬಸವಲಿಂಗಯ್ಯ (ಬಸು), ಜಿ.ಪಿ.ಬಸವರಾಜು, ಪ್ರೊ.ಪಂಡಿತಾರಾಧ್ಯ, ನಾ.ದಿವಾಕರ, ಡಾ.ರತಿ ರಾವ್, ಕೆ.ಸುಶೀಲಾ, ಸವಿತಾ ಪ.ಮಲ್ಲೇಶ್, ಮೈಸೂರು.

ಆಂದೋಲನ ಡೆಸ್ಕ್

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago