Andolana originals

ಇದೇನು ಶಾಲಾ ಕೊಠಡಿಯೋ, ಧೂಳು ಸಂಗ್ರಹ ಸ್ಥಳವೋ?

ನಂಜನಗೂಡು:ಶತಮಾನದ ಹೊಸ್ತಿಲಲ್ಲಿರುವ ನಗರದ ಬಾಲಕರ ಪ್ರೌಢಶಾಲೆಯ ಕೊಠಡಿಗಳ ಸ್ಥಿತಿಯನ್ನು ಕಂಡ ಶಾಸಕ ದರ್ಶನ್ ಧ್ರುವನಾರಾ ಯಣ ಅವರು, ಇದೇನು ಶಾಲಾ ಕೊಠಡಿಯೋ, ಧೂಳು ಶೇಖರಣಾ ಸ್ಥಳವೋ? ಎಂದು ಪ್ರಶ್ನಿಸಿದರು.

ಮಂಗಳವಾರ ಬಾಲಕರ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಅವರು, ಅಲ್ಲಿನ ಕೊಠಡಿಗಳಲ್ಲಿ ಕಸದ ರಾಶಿಯನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿ, 10 ದಿನಗಳಲ್ಲಿ ಎಲ್ಲ ಕೊಠಡಿಗಗಳನ್ನೂ ಸ್ವಚ್ಛ ಗೊಳಿಸಿ ತಮಗೆ ಚಿತ್ರ ಸಹಿತವಾದ ಮಾಹಿತಿ ನೀಡುವಂತೆ ಶಾಲಾ ಮುಖ್ಯ ಶಿಕ್ಷಕಿ ಬಾಲ ಸರಸ್ವತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ತಾಕೀತು ಮಾಡಿದರು.

ನಂತರ ವಾಚನಾಲಯದ ಬೀಗತೆಗಿಸಿ ನೋಡಿದಾಗ ಅನೇಕ ತಿಂಗಳುಗಳಿಂದ ಬಾಗಿಲು ತೆರೆಯದೆ ದೂಳು, ಜೇಡಗ ಳಿಂದ ಆವೃತವಾಗಿದ್ದನ್ನು ಗಮನಿಸಿ ಕುಪಿತಗೊಂಡು, ವಾಚನಾ ಲಯದ ಕೊಠಡಿಗಳ ಬಾಗಿಲು ತೆರೆಯದೇ ಎಷ್ಟು ತಿಂಗಳಾಯಿತು ಎಂದು ಪ್ರಶ್ನಿಸಿದರು.

ಪ್ರತಿದಿನ ವಾಚನಾಲಯದ ಬಾಗಿಲು ತೆರೆಯಬೇಕು. ಇಲ್ಲಿಗೆ ನಿತ್ಯ ದಿನಪತ್ರಿಕೆಗಳು, ಮಾಸ ಪತ್ರಿಕೆಗಳನ್ನು ತರಿಸಬೇಕು ಎಂದು ಸೂಚಿಸಿದರು.

10 ದಿನಗಳಲ್ಲಿ ಇಲ್ಲಿನ ಎಲ್ಲ ಕೊಠಡಿ ಗಳು ಸ್ವಚ್ಛಗೊಳ್ಳಬೇಕು. ಸ್ವಚ್ಛವಾದ ಕೊಠಡಿಗಳ ಚಿತ್ರಗಳನ್ನು ತಮಗೆ ಕಳಿಸಬೇಕು ಎಂದು ಜೊತೆಯಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರಿಗೆ ಆದೇಶಿಸಿದರು.

ಮುಖ್ಯ ಶಿಕ್ಷಕರ ಕೊಠಡಿಯಲ್ಲಿರುವ ಸ್ವಚ್ಛತೆಯಂತೆಯೇ ಮಕ್ಕಳು ವ್ಯಾಸಂಗ ಮಾಡುವ ಕೊಠಡಿಗಳಲ್ಲೂ ಇರಬೇಕು ಎಂದರು. ಈಗಬಿಡುಗಡೆ ಮಾಡಿಸಿರುವ 38 ಲಕ್ಷ ರೂ.ಗಳನ್ನು ಬಳಕೆ ಮಾಡಿ ಶತಮಾನಗಳ ಹೊಸ್ತಿಲ್ಲಿರುವ ಶಾಲೆಗೆ ಇನ್ನೇನು ಆಗಬೇಕು ಎಂಬುದನ್ನು ತಿಳಿಸಿ ದರೆ ಮಾಡಿಸಿಕೊಡುವುದಾಗಿ ಹೇಳಿ ದರು. ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಮುಖ್ಯಶಿಕ್ಷಕಿ ಬಾಲಸರಸ್ವತಿ, ಶಂಕರಪುರ ಸುರೇಶ ಇತರರಿದ್ದರು.

ಭೂಮಿಕಾ

Recent Posts

ಸರ್ಫರಾಜ್‌ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ

ಮೈಸೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…

3 mins ago

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…

20 mins ago

ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…

32 mins ago

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…

42 mins ago

ಡೆವಿಲ್‌ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ ಡಿಲಿಟ್‌ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…

2 hours ago

ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್‌ ಮನೆ ಸೇರಿ 10 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು…

2 hours ago